ತಲಾಖ್ ನೀಡಿದಾಕ್ಷಣ ಜೈಲು ಶಿಕ್ಷೆ ಸರಿಯಲ್ಲ: ನೌಹೀರಾ ಶೇಖ್
ಬೆಂಗಳೂರು : ತಲಾಖ್ ಎಂಬುದು ಧಾರ್ಮಿಕ ವಿಚಾರ. ನಿಂತಲ್ಲಿ , ಕೂತಲ್ಲಿ , ಹೆಂಡತಿ ನಿದ್ರಿಸುತ್ತಿರುವಾಗ, ಫೋನ್ ನಲ್ಲಿ, ವಾಟ್ಸಪ್ ನಲ್ಲಿ ತಲಾಖ್ ಮೂಲಕ ವಿಚ್ಚೇಧನ ನೀಡುವುದಕ್ಕೆ ಇಸ್ಲಾಂನಲ್ಲಿ ಅವಕಾಶ ಇಲ್ಲ ಆದರೆ ತಲಾಖ್ ನೀಡಿದಾಕ್ಷಣ ಜೈಲುಶಿಕ್ಷೆ ಸರಿಯಲ್ಲ ಎಂದು ಎಂಇಪಿ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಖ್ ತಿಳಿಸಿದ್ದಾರೆ.
ಮಂಗಳವಾರ ಪ್ರೆಸ್ಕ್ಲಬ್ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಲಾಖೆ ನೀಡಿದಾಕ್ಷಣ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದರೆ ಗಂಡ-ಹೆಂಡತಿ ಮತ್ತೆ ಒಂದಾಗುವ ಸಾಧ್ಯಾಸಾಧ್ಯತೆಗಳೇ ತಪ್ಪಿದಂತಾಗುತ್ತದೆ. ಜತೆಗೆ, ತಲಾಖೆ ಹೇಳಿದವನ ಕುಟುಂಬ ಬೀದಿಪಾಲಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕನಿಗೆ ಲಾಭ ಇಲ್ಲವೇ ನಷ್ಟ ಉಂಟು ಮಾಡಲು ನಾವು ರಾಜಕೀಯ ಪಕ್ಷ ಸ್ಥಾಪಿಸಿಲ್ಲ, ಜನರಿಗೆ ಲಾಭ ತಂದು ಕೊಡುವುದು, ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವುದು, ಉತ್ತಮ ಆಡಳಿತ ನೀಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇವೆ. ಸೋಲು-ಗೆಲುವು ನಮ್ಮ ಗುರಿ ಉದ್ದೇಶಗಳನ್ನು ಬದಲಿಸುವುದಿಲ್ಲ ಎಂದರು.

ಒಬ್ಬ ಉದ್ಯಮಿಯಾಗಿ ಏಕೆ ರಾಜಕೀಯಕ್ಕೆ ಬಂದಿದ್ದಾರೆ ? ಎಂಬ ಪ್ರಶ್ನೆ ಮೇಲಿಂದ ಮೇಲೆ ಕೇಳಿಬರುತ್ತಿದೆ. 25 ವರ್ಷ ಸಾಮಾಜಿಕ ಕಾರ್ಯಕರ್ತೆಯಾಗಿ ದುಡಿದ್ದಿದ್ದು, ಸ್ವತಃ ಮಹಿಳೆಯಾಗಿ ಬಹಳ ಹತ್ತಿರದಿಂದ ಮಹಿಳೆಯರ ಕಷ್ಟ-ನಷ್ಟಗಳನ್ನು ನೋಡಿದ್ದೇನೆ. ಬಾಲ್ಯದಿಂದಲೇ ಹೆಣ್ಣು ಮಕ್ಕಳು ದುರ್ಬಲರು ಎಂಬ ಭಾವನೆ ಕೌಟಂಬಿಕ ಪರಿಸರದಿಂದಲೇ ಮೂಡಿಸಲಾಗುತ್ತಿದೆ. ಆದರೆ, ವಾಸ್ತವಿಕವಾಗಿ ಹೆಣ್ಣು ಅಬಲೆ ಅಲ್ಲ. ಸಬಲೆ.
ಎಂಇಪಿ ಪಕ್ಷದ ಸ್ಥಾಪನೆಯ ಹಿಂದೆ ಯಾವ ದೊಡ್ಡ ನಾಯಕನ ಪಾತ್ರವೂ ಇಲ್ಲ. ನಮಗೆ ಯಾರಿಂದಲೂ ಹಣದ ನೆರವು ಹರಿದು ಬರುತ್ತಿಲ್ಲ. ಜನರ ವಂತಿಗೆ ಹಾಗೂ ತಮ್ಮ ಕೈಯಿಂದ ಹಣ ವ್ಯಯ ಮಾಡುತ್ತಿದ್ದೇನೆ. ಉತ್ತಮ ಹಿನ್ನೆಲೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರಾಜಕೀಯಕ್ಕೆ ಕರೆ ತರುವುದೇ ನಮ್ಮ ಮುಖ್ಯ ಉದ್ದೇಶ. ಪಕ್ಷದ ಅಭ್ಯರ್ಥಿಗಳೂ ಕೂಡ ಚುನಾವಣಾ ಆಯೋಗದ ಚೌಕಟ್ಟಿನಲ್ಲಿ ತಮ್ಮ ಖರ್ಚುವೆಚ್ಚಗಳನ್ನು ತಾವೇ ಭರಿಸುತ್ತಿದ್ದಾರೆ. ಯಾರಿಗೂ ನಾವು ಹಣ ಹಂಚುವುದಿಲ್ಲ. ಮತದಾರರಿಗೆ ಆಮಿಷವೊಡ್ಡಿ ಓಟು ಕೇಳುವುದು ನಮ್ಮ ನೀತಿಯಲ್ಲ.

ವ್ಯವಸ್ಥೆಯಲ್ಲಿ ಬದಲಾವಣೆ ಬರಬೇಕು. ಕಾನೂನುಗಳು ಬದಲಾಗಬೇಕು. ಉತ್ತಮ ಆಡಳಿತದ ಉದ್ದೇಶವನ್ನಿಟ್ಟುಕೊಂಡು ಅಧಿಕಾರ ಹಿಡಿಯುವುದೇ ನಮ್ಮ ಗುರಿ. ಇದಕ್ಕೆ ಪೂರ್ವಭಾವಿ ತಯಾರಿ ಮಾಡಿಕೊಂಡೇ ಬಂದಿದ್ದೇವೆ. ಕರ್ನಾಟಕ ವಿಧಾನಸಭೆ ಚುನಾವಣೆ ನಂತರ ನಾವು ಲೋಕಸಭೆ ಹಾಗೂ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲೂ ಪಕ್ಷ ಸ್ಪರ್ಧಿಸಲಿದೆ ಎಂದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications