ಬೆಂಗಳೂರಿನಲ್ಲಿ ಅನಿವಾಸಿ ಬರಹಗಾರರ ಪುಸ್ತಕ ಪ್ರಸವ
ಬೆಂಗಳೂರು, ಫೆಬ್ರವರಿ 03 : ದೂರದ ಅಮೆರಿಕದಲ್ಲಿ ಕನ್ನಡ ಸಾಹಿತ್ಯದ ಫಸಲು ಸಮೃದ್ಧಿಯಾಗಿ ಬೆಳೆಯುತ್ತಿದೆ ಎನ್ನುವುದಕ್ಕೆ ಇದೇ ಶನಿವಾರ, ಫೆಬ್ರವರಿ 6ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪುಸ್ತಕಗಳ ಬಿಡುಗಡೆಯ ಕಾರ್ಯಕ್ರಮ ಸಾಕ್ಷಿಯಾಗಲಿದೆ.
ಒಂದಲ್ಲ ಎರಡಲ್ಲ ಮೂರು ವೈವಿಧ್ಯಮಯ ವಿಷಯಗಳನ್ನುಳ್ಳ ಹೊತ್ತಗೆಗಳು ಪುಸ್ತಕ ಪ್ರೇಮಿಗಳ ಕೈಸೇರಲಿವೆ. ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಮನೋರಮಾ ಸಭಾಂಗಣದಲ್ಲಿ ಅಮೆರಿಕನ್ನಡಿಗರು ಮತ್ತು ಬೆಂಗಳೂರಿನ ಕನ್ನಡಿಗರ ಮಿನಿ ಸಮ್ಮಿಳನವಾಗುವುದು ನಿಶ್ಚಿತ.
ಅಮೆರಿಕದ ನ್ಯೂಜೆರ್ಸಿಯಲ್ಲಿರುವ, ಎರಡು ವರ್ಷಗಳಿಗೊಮ್ಮೆ ವಸಂತಸಾಹಿತ್ಯೋತ್ಸವ ನಡೆಸುತ್ತ ಬಂದಿರುವ ಕನ್ನಡ ಸಾಹಿತ್ಯ ರಂಗ ಮತ್ತು ಬೆಂಗಳೂರಿನ ವಿಜಯನಗರದಲ್ಲಿರುವ ಅಭಿನವ ಪ್ರಕಾಶನ ಸಂಯುಕ್ತ ಆಶ್ರಯದಲ್ಲಿ ಸಂಜೆ 6 ಗಂಟೆಗೆ ಮನೋರಮಾ ಸಭಾಂಗಣದಲ್ಲಿ ಜರುಗಲಿದೆ.

ಬಿಡುಗಡೆಯಾಗುತ್ತಿರುವ ಪುಸ್ತಕಗಳ ವಿವರ
ಪುಸ್ತಕ : ಅನುವಾದ ಸಂವಾದ (ಬೇರೆ ಬೇರೆ ಭಾಷೆಗಳಿಂದ ಅನುವಾದಿತ ಬರಹಗಳು)
ಸಂಪಾದನೆ : ಶ್ರೀಕಾಂತ ಬಾಬು, ನ್ಯೂಜೆರ್ಸಿ
ಬಿಡುಗಡೆ : ಗಿರಡ್ಡಿ ಗೋವಿಂದರಾಜ, ಹಿರಿಯ ವಿಮರ್ಶಕ, ಧಾರವಾಡ
ಪುಸ್ತಕ : ಸಾಹಿತ್ಯ ಸ್ಪಂದನ (ವಿಮರ್ಶಾ ಲೇಖನಗಳು)
ಲೇಖಕ : ಆಹಿತಾನಲ (ನಾಗ ಐತಾಳ), ಆರ್ಕೇಡಿಯಾ, ಲಾಸ್ ಏಂಜಲಿಸ್
ಬಿಡುಗಡೆ : ಜೋಗಿ, ಪತ್ರಕರ್ತ, ಬೆಂಗಳೂರು
ಪುಸ್ತಕ : ಕಥೆಯಂ ಕೇಳೆಲೋ ಕಂದ (ಕಥಾ ಸಂಕಲನ)
ಲೇಖಕ : ಮೈ.ಶ್ರೀ. ನಟರಾಜ, ಮೇರಿಲ್ಯಾಂಡ್, ವಾಷಿಂಗ್ಟನ್ ಡಿಸಿ
ಬಿಡುಗಡೆ : ಮಹೇಶ್ ಹರವೆ, ಉಪನ್ಯಾಸಕ, ಮೈಸೂರು
ನ್ಯೂಜೆರ್ಸಿಯ ಕನ್ನಡ ಸಾಹಿತ್ಯ ರಂಗದಲ್ಲಿ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಲೇಖಕಿ ನಳಿನಿ ಮೈಯ, ಕವಯಿತ್ರಿ ಜ್ಯೋತಿ ಮಹಾದೇವ್ ಅವರು ನಾಗ ಐತಾಳ ಮತ್ತು ಮೈ.ಶ್ರೀ. ನಟರಾಜ ಅವರೊಂದಿಗೆ ಪುಸ್ತಕ ಪ್ರಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸ್ನೇಹಿತರನ್ನು ಭೇಟಿ ಮಾಡಿ, ಪುಸ್ತಕ ಕೊಂಡು, ಒಂದಿಷ್ಟು ಹರಟೆ ಹೊಡೆದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಇದಕ್ಕಿಂತ ಸಮಯ ಬೇಕೆ?
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ











Click it and Unblock the Notifications