ಬೆಂಗಳೂರಿನಲ್ಲಿ ಅನಿವಾಸಿ ಬರಹಗಾರರ ಪುಸ್ತಕ ಪ್ರಸವ
ಬೆಂಗಳೂರು, ಫೆಬ್ರವರಿ 03 : ದೂರದ ಅಮೆರಿಕದಲ್ಲಿ ಕನ್ನಡ ಸಾಹಿತ್ಯದ ಫಸಲು ಸಮೃದ್ಧಿಯಾಗಿ ಬೆಳೆಯುತ್ತಿದೆ ಎನ್ನುವುದಕ್ಕೆ ಇದೇ ಶನಿವಾರ, ಫೆಬ್ರವರಿ 6ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪುಸ್ತಕಗಳ ಬಿಡುಗಡೆಯ ಕಾರ್ಯಕ್ರಮ ಸಾಕ್ಷಿಯಾಗಲಿದೆ.
ಒಂದಲ್ಲ ಎರಡಲ್ಲ ಮೂರು ವೈವಿಧ್ಯಮಯ ವಿಷಯಗಳನ್ನುಳ್ಳ ಹೊತ್ತಗೆಗಳು ಪುಸ್ತಕ ಪ್ರೇಮಿಗಳ ಕೈಸೇರಲಿವೆ. ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಮನೋರಮಾ ಸಭಾಂಗಣದಲ್ಲಿ ಅಮೆರಿಕನ್ನಡಿಗರು ಮತ್ತು ಬೆಂಗಳೂರಿನ ಕನ್ನಡಿಗರ ಮಿನಿ ಸಮ್ಮಿಳನವಾಗುವುದು ನಿಶ್ಚಿತ.
ಅಮೆರಿಕದ ನ್ಯೂಜೆರ್ಸಿಯಲ್ಲಿರುವ, ಎರಡು ವರ್ಷಗಳಿಗೊಮ್ಮೆ ವಸಂತಸಾಹಿತ್ಯೋತ್ಸವ ನಡೆಸುತ್ತ ಬಂದಿರುವ ಕನ್ನಡ ಸಾಹಿತ್ಯ ರಂಗ ಮತ್ತು ಬೆಂಗಳೂರಿನ ವಿಜಯನಗರದಲ್ಲಿರುವ ಅಭಿನವ ಪ್ರಕಾಶನ ಸಂಯುಕ್ತ ಆಶ್ರಯದಲ್ಲಿ ಸಂಜೆ 6 ಗಂಟೆಗೆ ಮನೋರಮಾ ಸಭಾಂಗಣದಲ್ಲಿ ಜರುಗಲಿದೆ.

ಬಿಡುಗಡೆಯಾಗುತ್ತಿರುವ ಪುಸ್ತಕಗಳ ವಿವರ
ಪುಸ್ತಕ : ಅನುವಾದ ಸಂವಾದ (ಬೇರೆ ಬೇರೆ ಭಾಷೆಗಳಿಂದ ಅನುವಾದಿತ ಬರಹಗಳು)
ಸಂಪಾದನೆ : ಶ್ರೀಕಾಂತ ಬಾಬು, ನ್ಯೂಜೆರ್ಸಿ
ಬಿಡುಗಡೆ : ಗಿರಡ್ಡಿ ಗೋವಿಂದರಾಜ, ಹಿರಿಯ ವಿಮರ್ಶಕ, ಧಾರವಾಡ
ಪುಸ್ತಕ : ಸಾಹಿತ್ಯ ಸ್ಪಂದನ (ವಿಮರ್ಶಾ ಲೇಖನಗಳು)
ಲೇಖಕ : ಆಹಿತಾನಲ (ನಾಗ ಐತಾಳ), ಆರ್ಕೇಡಿಯಾ, ಲಾಸ್ ಏಂಜಲಿಸ್
ಬಿಡುಗಡೆ : ಜೋಗಿ, ಪತ್ರಕರ್ತ, ಬೆಂಗಳೂರು
ಪುಸ್ತಕ : ಕಥೆಯಂ ಕೇಳೆಲೋ ಕಂದ (ಕಥಾ ಸಂಕಲನ)
ಲೇಖಕ : ಮೈ.ಶ್ರೀ. ನಟರಾಜ, ಮೇರಿಲ್ಯಾಂಡ್, ವಾಷಿಂಗ್ಟನ್ ಡಿಸಿ
ಬಿಡುಗಡೆ : ಮಹೇಶ್ ಹರವೆ, ಉಪನ್ಯಾಸಕ, ಮೈಸೂರು
ನ್ಯೂಜೆರ್ಸಿಯ ಕನ್ನಡ ಸಾಹಿತ್ಯ ರಂಗದಲ್ಲಿ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಲೇಖಕಿ ನಳಿನಿ ಮೈಯ, ಕವಯಿತ್ರಿ ಜ್ಯೋತಿ ಮಹಾದೇವ್ ಅವರು ನಾಗ ಐತಾಳ ಮತ್ತು ಮೈ.ಶ್ರೀ. ನಟರಾಜ ಅವರೊಂದಿಗೆ ಪುಸ್ತಕ ಪ್ರಸವ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸ್ನೇಹಿತರನ್ನು ಭೇಟಿ ಮಾಡಿ, ಪುಸ್ತಕ ಕೊಂಡು, ಒಂದಿಷ್ಟು ಹರಟೆ ಹೊಡೆದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಇದಕ್ಕಿಂತ ಸಮಯ ಬೇಕೆ?
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications