ಬನ್ನಿ ಹೋಗೋಣ 'ಸಿರಿ' ವೈಭವ ಕಣ್ತುಂಬಿಕೊಳ್ಳೋಣ
ಬೆಂಗಳೂರು, ಜುಲೈ, 22 : ರಂಗಭೂಮಿ ಪರಂಪರೆಯಲ್ಲಿ ವಿಭಿನ್ನ ಪ್ರಯೋಗ ಕೈಗೊಳ್ಳುತ್ತಾ ಜಗದ್ವಿಖ್ಯಾತಿ ಪಡೆದ ರಾಷ್ಟ್ರೀಯ ನಾಟಕ ಶಾಲೆ (ಎನ್ಎಸ್ ಡಿ) 3 ದಿನಗಳ ಕಾಲ ನಾಟಕ ಪ್ರದರ್ಶನ ಆಯೋಜಿಸಿದೆ.
ಪ್ರತಿವರ್ಷ ಪದವಿ ಮುಗಿದ ಯುವಕ ಯುವತಿಯರಿಗೆ ರಂಗಭೂಮಿ ಕುರಿತಾಗಿ ತರಬೇತಿ ನೀಡುತ್ತಾ ಪ್ರಪಂಚದಾದ್ಯಂತ ತನ್ನ ವಿದ್ಯಾರ್ಥಿಗಳನ್ನು ಹೊಂದಿರುವ ಎನ್ಎಸ್ಡಿಯು ತನ್ನ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು 'ಸಿರಿ' ಎಂಬ ನಾಟಕ ಪ್ರದರ್ಶನಕ್ಕೆ ಮುಂದಾಗಿದೆ.[ಚೆರಿ ತೋಟದಲ್ಲಿ ವಿಹರಿಸಲು ರಂಗಶಂಕರಕ್ಕೆ ಬನ್ನಿ]

ಜನಪದ ಕಥಾವಸ್ತು ಹೊಂದಿರುವ 'ಸಿರಿ' ನಾಟಕವನ್ನು ಬಿ. ಜಯಶ್ರೀ ಅವರು ವಿನ್ಯಾಸಗೊಳಿಸಿ ನಿರ್ದೇಶಿಸಿದ್ದು, ಡಾ. ನಾ ದಾಮೋದರ ಶೆಟ್ಟಿ ಅವರ ರಚನೆ ಹಾಗೂ ಪ್ರವೀಣ್ ಡಿ. ರಾವ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬರಲಿದೆ.
ಸಿರಿ ನಾಟಕ ಜುಲೈ 23ರ ಬುಧವಾರದಿಂದ, 24, 25 ಶುಕ್ರವಾರದವರೆಗೆ ಸಂಜೆ 7 ಗಂಟೆಗೆ ಎನ್ ಎಸ್ ಡಿ ಸಿಟಿ ಕ್ಯಾಂಪಸ್, ಗುರುನಾನಕ್ ಭವನ್ , ಜೈನ್ ಆಸ್ಪತ್ರೆಯ ಹತ್ತಿರ, ಮಿಲ್ಲರ್ಸ್ ಟಾಂಕ್ ಬಂಡ್ ರಸ್ತೆ, ವಸಂತ ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಬೆಂಗಳೂರಿನ ಎನ್ಎಸ್ಡಿ ನಿರ್ದೇಶಕರಾದ ಬಸವಲಿಂಗಯ್ಯ ತಿಳಿಸಿದ್ದಾರೆ.
ನಾಟಕದ ಆನ್ ಲೈನ್ ಟಿಕೆಟ್ ಗಳು bookmyshow ನಲ್ಲಿ ಹಾಗೂ ಕಲಾಗ್ರಾಮ, ಮಲ್ಲತಹಳ್ಳಿಯಲ್ಲಿ ದೊರೆಯಲಿದೆ.
ಹೆಚ್ಚಿನ ಮಾಹಿತಿಗಾಗಿ
ಫೋ.ನಂ : 080-23183027
ಇ-ಮೇಲ್ : [email protected]
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications