ಕಾಂಗ್ರೆಸ್ ಆಡಳಿತದಲ್ಲಿ ಜಾತಿ ನಿಂದನೆ ವಿರುದ್ಧ ದಲಿತರ ದಿಟ್ಟತನ: ಪರಂ
ಬೆಂಗಳೂರು, ಮೇ 11: ''ಕಾಂಗ್ರೆಸ್ ಆಡಳಿತದಲ್ಲಿ ದಲಿತರು ತಮ್ಮ ವಿರುದ್ಧದ ನಿಂದನೆಗಳ ಬಗ್ಗೆ ಧೈರ್ಯವಾಗಿ ದೂರು ದಾಖಲಿಸಲು ಮುಂದಾಗುತ್ತಿರುವುದರಿಂದಲೇ ಹೆಚ್ಚಿನ ಮಟ್ಟದಲ್ಲಿ ದಲಿತ ವಿರೋಧಿ ದೂರುಗಳು ದಾಖಲಾಗುತ್ತಿವೆ'' ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
2013ರಲ್ಲಿ ಕೊನೆಗೊಂಡ ಬಿಜೆಪಿ ಸರ್ಕಾರದ ಕಾಲದಲ್ಲಿ ದಾಖಲಾಗುತ್ತಿದ್ದ ಜಾತಿ ನಿಂದನೆ ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾತಿ ನಿಂದನೆ ಪ್ರಕರಣಗಳು ದಾಖಲಾಗುತ್ತಿವೆ ಎಂಬುದನ್ನು ಅಂಕಿ-ಅಂಶಗಳು ಸಾಬೀತುಪಡಿಸಿವೆ.

ಈ ಹಿನ್ನೆಲೆಯಲ್ಲೇ ಪರಮೇಶ್ವರ್, ಕಾಂಗ್ರೆಸ್ ಸರ್ಕಾರದಲ್ಲಿ ದಲಿತರು ನಿರ್ಭಯವಾಗಿ ದೂರು ದಾಖಲಿಸುತ್ತಿದ್ದಾರೆಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸರ್ಕಾರಕ್ಕೂ ಹಿಂದಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ದಲಿತರಿಂದ ದಾಖಲಾದ ಜಾತಿ ನಿಂದನೆ ಕೇಸುಗಳ ಸಂಖ್ಯೆ 1,531. ಈಗ, ಇವುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಕೆಲವಾರು ಅಂಕಿ ಅಂಶಗಳು ಹೇಳುತ್ತಿವೆ.
2012ರಲ್ಲಿ, ಅಂದರೆ, ಬಿಜೆಪಿ ಆಡಳಿತದ ಕೊನೆಯ ವರ್ಷದಲ್ಲಿ 1,531 ದಲಿತರ ಜಾತಿನಿಂದನೆ ಕೇಸುಗಳು ದಾಖಲಾಗಿದ್ದವು. 2013ರಲ್ಲಿ ಅಂದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ವರ್ಷದಲ್ಲಿ 1,758 ದೂರುಗಳು ದಾಖಲಾಗಿವೆ. 2014ರಲ್ಲಿ 1,857 ದೂರುಗಳು ದಾಖಲಾಗಿವೆ. 2015ರಲ್ಲಿ 1,825 ಕೇಸುಗಳು ದಾಖಲಾಗಿವೆ. ಇನ್ನು, ಕಳೆದ ವರ್ಷ 1,765 ಕೇಸುಗಳು ದಾಖಲಾಗಿವೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications