ಬೆಂಗಳೂರಿನ ಒಬಿಸಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರ ಬರಿಗೈಯಲ್ಲಿ ಶೌಚಾಲಯ ಸ್ವಚ್ಛ ಮಾಡಿಸಿದ ವಾರ್ಡನ್
ಬೆಂಗಳೂರು, ಜ. 03: ಯಾವ್ಯಾವುದೋ ಊರಿನಿಂದ ನಗರಗಳಿಗೆ ಬಂದು ಒಂದು ಉತ್ತಮ ಜೀವನ ರೂಪಿಸಿಕೊಳ್ಳುವ ಹಂಬಲದಿಂದ ಕಾಲೇಜು ಸೇರಿ ಹಾಸ್ಟೆಲ್ನಲ್ಲಿ ಉಳಿದುಕೊಳ್ಳೂತ್ತಾರೆ ವಿದ್ಯಾರ್ಥಿಗಳು. ತಂದೆ ತಾಯಿಯಿಂದ ದೂರವಿದ್ದು ಹಾಸ್ಟೆಲ್ಗಳಲ್ಲಿ ಓದುವ ವಿದ್ಯಾರ್ಥಿಗಳನ್ನು ವಾರ್ಡನ್ಗಳು ತುಂಬಾ ಕೆಟ್ಟದಾಗಿ ನಡೆಸಿಕೊಂಡಿರುವ ಹಲವು ಘಟನೆಗಳು ದಾಖಲಾಗಿವೆ.
Shocked to hear of abuse, ill treatment, human rights violations of young female students at the Backward Classes hostel in RR Nagar. Girls came to me deeply distressed about disturbing incidents. Urge Min Kota Srinivas Poojary for strict action against the warden, Taluka Officer pic.twitter.com/X9IJt7KPHo
— Sowmya | ಸೌಮ್ಯ (@Sowmyareddyr) January 2, 2023
ಇಂತಹದ್ದೇ ಒಂದು ಮನಕಲುಕುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ನಡೆದಿದೆ. ಆರ್ಆರ್ ನಗರದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಹಾಸ್ಟೆಲ್ನ ವಿದ್ಯಾರ್ಥಿಗಳು ತಮ್ಮ ಬರಿಗೈಯಿಂದಲೇ ಶೌಚಾಲಯಗಳನ್ನು ಸ್ವಚ್ಛಗೊಳಿಸಿರುವ ಘಟನೆ ನಡೆದಿದೆ.
ಮೂರು ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿಗೆ ಚಾಲನೆ
ಇಂತಹ ದಾರುಣ ಸ್ಥಿತಿಯಲ್ಲಿದ್ದರೂ ಭಯದಿಂದ ಬದುಕುತ್ತಿರುವ ಈ ಹೆಣ್ಣುಮಕ್ಕಳ ಕಷ್ಟ ಹೇಳತೀರದು. ತಮ್ಮ ಕೈಗಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಮತ್ತು ಯಾವುದೇ ಹಾಸಿಗೆಯಿಲ್ಲದೆ ಈ ಚಳಿಯಲ್ಲಿಯೂ ಕಬ್ಬಿಣದ ಹಾಸಿಗೆಗಳ ಮೇಲೆ ಮಲಗುತ್ತಾರೆ.

ಇಷ್ಟೆ ಅಲ್ಲದೆ ಹಾಸ್ಟೆಲ್ನಲ್ಲಿ ಈ ಬಾಲಕಿಯರು ರಜಾದಿನಗಳಲ್ಲಿ ತಮ್ಮ ತಮ್ಮ ಮನೆಗೆ ಹೋಗಲು ವಾರ್ಡನ್ ಅನುಮತಿ ಕೂಡ ನೀಡುವುದಿಲ್ಲ ಎಂದು ಆರೋಪಿಸಿದ್ದಾರೆ.
"ನಮ್ಮ ಮನೆಗಳಿಗೆ ಹೋಗಲು ಅನುಮತಿ ನೀಡುವುದಿಲ್ಲ. ಒಂದು ವೇಳೆ ಹೊದರೂ ಕೂಡ ವಾರ್ಡನ್ ಅವರ ವೈಯಕ್ತಿಕ ಬಳಕೆಗಾಗಿ ಮಿಕ್ಸ್ನಂತಹ ದುಬಾರಿ ಉಡುಗೊರೆಗಳನ್ನು ತರುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಾರೆ" ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.
"ನಾವು ನಮ್ಮ ಫೋನ್ಗಳು ಮತ್ತು ಲ್ಯಾಪ್ಟಾಪ್ಗಳನ್ನು ಚಾರ್ಜ್ ಮಾಡುವಾಗ ನಾವು ಬೇಗ ಬೇಗ ಚಾರ್ಜ್ ಮಾಡಿಕೊಳ್ಳಬೇಕು. ವಾರ್ಡನ್ ಕೆಲವು ಗಂಟೆಗಳುಮಾತ್ರ ಕರೆಂಟ್ ಬಳಸಲು ಅನುಮತಿ ನೀಡುತ್ತಾರೆ. ಪ್ರರ್ಶನೆ ಮಾಡಿದರೇ, ಬಾಯಿಗೆ ಬಂದಂತೆ ಬೈಯುತ್ತಾರೆ. ಜೊತೆಗೆ ಹಾಸ್ಟೆಲ್ನಿಂದ ಹೊರಹಾಕುವ ಬಗ್ಗೆ ಎಚ್ಚರಿಕೆ ನೀಡುತ್ತಾರೆ" ಎಂದಿದ್ದಾರೆ.
ಈ ಸಮಸ್ಯೆಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ವಾರ್ಡನ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು ನಮಗೆ ಬೆದರಿಕೆಗಳು ಬಂದಿವೆ. ನಾವು ಅನೇಕ ಬಾರಿ ಮನವಿ ಪತ್ರವನ್ನು ಸಲ್ಲಿಸಿದ್ದೇವೆ. ಆದರೆ, ಏನೂ ಬದಲಾಗಿಲ್ಲ. ನಮ್ಮ ಹೆಸರುಗಳನ್ನು ಬರೆದುಕೊಂಡುಯ ನಮ್ಮನ್ನೇ ಹಾಸ್ಟೆಲ್ ಬಿಟ್ಟು ಕಳುಹಿಸುವುದಾಗಿ ಬೆದರಿಸಿದ್ದಾರೆ ಎಂದು ತಮ್ಮ ದುಖಃ ತೋಡಿಕೊಂಡಿದ್ದಾರೆ.
ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಟ್ವಿಟರ್ನಲ್ಲಿ ಹಾಸ್ಟೆಲ್ನಲ್ಲಿನ ಕಳಪೆ ಸ್ಥಿತಿ ಮತ್ತು ದೌರ್ಜನ್ಯವನ್ನು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸ್ಥಿತಿ ಬಗ್ಗೆ ನಾನು ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ ಯಾರೂ ಪ್ರತಿಕ್ರಿಯಿಸಲಿಲ್ಲ. ಈಗ ಕ್ರಮ ಕೈಗೊಳ್ಳುವಂತೆ ಸಚಿವರ ಬಳಿ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಪತ್ರ ಬರೆದು ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
(ಮಾಹಿತಿ ಕೃಪೆ- ದಿ ನ್ಯೂಸ್ ಮಿನಿಟ್)
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ











Click it and Unblock the Notifications