ಬೆಂಗಳೂರು; ಓಲಾ, ಊಬರ್ ಟ್ಯಾಕ್ಸಿಗಳ ದರ ಏರಿಕೆ
ಬೆಂಗಳೂರು, ಫೆಬ್ರವರಿ 19; ಬೆಂಗಳೂರು ನಗರದಲ್ಲಿ ಓಲಾ, ಊಬರ್ ಸೇರಿದಂತೆ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿಗಳ ದರದಲ್ಲಿ ಏರಿಕೆಯಾಗಲಿದೆ. ಸಾರಿಗೆ ಇಲಾಖೆ ಕೆಲವೇ ದಿನಗಳಲ್ಲಿ ಹೊಸ ದರಗಳನ್ನು ಘೋಷಣೆ ಮಾಡಲಾಗಿದೆ.
ಸಾರಿಗೆ ಇಲಾಖೆಯ ಆಯುಕ್ತರು ಜನವರಿಯಲ್ಲಿ ಸಾರಿಗೆ ಇಲಾಖೆಗೆ ಸಿಟಿ ಟ್ಯಾಕ್ಸಿ, ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿಗಳ ದರಗಳನ್ನು ಪರಿಷ್ಕರಣೆ ಮಾಡುವಂತೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು.
ಫೆಬ್ರವರಿ 1ರಿಂದ ಸಿಟಿ ಟ್ಯಾಕ್ಸಿಗಳ ದರಗಳಲ್ಲಿ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಕೆಲವೇ ದಿನಗಳಲ್ಲಿ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ಸೇವೆಗಳ ದರಗಳನ್ನು ಹೆಚ್ಚಳ ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ದರ ಹೆಚ್ಚಳವಾಗಲಿದೆ.

ಓಲಾ, ಊಬರ್ ಸೇರಿದಂತೆ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ಸೇವೆಗಳಿಗೆ ಸರ್ ಚಾರ್ಜ್ ಅನ್ನು ಮೂರು ಪಟ್ಟು ಹೆಚ್ಚಳ ಮಾಡಲು ಅವಕಾಶ ಸಿಗಲಿದೆ. ಇದರಿಂದಾಗಿ ಟ್ಯಾಕ್ಸಿಗಳ ದರ ದುಬಾರಿಯಾಗುವುದು ಖಚಿತವಾಗಿದೆ.
ಫೆಬ್ರವರಿ ಅಂತ್ಯದಲ್ಲಿ ಹೊಸ ದರಪಟ್ಟಿಯನ್ನು ಸಾರಿಗೆ ಇಲಾಖೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಮಾರ್ಚ್ 1ರಿಂದ ಜಾರಿಗೆ ಬರುವಂತೆ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿಗಳು ದರ ಹೆಚ್ಚಳ ಮಾಡುವ ನಿರೀಕ್ಷೆ ಇದೆ.
2013ರಲ್ಲಿ ರಾಜ್ಯದಲ್ಲಿ ಸಿಟಿ ಟ್ಯಾಕ್ಸಿ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ಬಳಿಕ ಫೆಬ್ರವರಿ ಮೊದಲ ವಾರದಲ್ಲಿ ದರಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿತ್ತು. ಎಲ್ಲಾ ನಗರ ಪ್ರದೇಶಗಳಿಗೂ ಹೊಸ ದರ ಅನ್ವಯವಾಗುತ್ತದೆ.
ಎಸಿ ರಹಿತ ಟ್ಯಾಕ್ಸಿಗಳಿಗೆ 4 ಕಿ. ಮೀ. ತನಕ ಕನಿಷ್ಠ ಪ್ರಯಾಣ ದರ 75ಕ್ಕೆ ಏರಿಕೆ ಮಾಡಲಾಗಿದೆ. ನಂತರದ ಪ್ರತಿ ಕಿ. ಮೀ.ಗೆ 18 ರೂ. ನಿಗದಿ ಮಾಡಲಾಗಿದೆ. ಎಸಿ ಸೌಲಭ್ಯ ಹೊಂದಿರುವ ಟ್ಯಾಕ್ಸಿಗಳಿಗೆ 4 ಕಿ. ಮೀ. ತನಕ ಕನಿಷ್ಠ ದರ 100 ರೂ., ನಂತರದ ಪ್ರತಿ ಕಿ. ಮೀ.ಗೆ 24 ರೂ. ದರವನ್ನು ನಿಗದಿ ಮಾಡಲಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications