ಓಲಾ ಆ್ಯಪ್ ನಲ್ಲಿ ಪೊಲೀಸರಿಗೆ ತುರ್ತು ಸಂದೇಶ ರವಾನೆಗೆ ಅವಕಾಶ
ಬೆಂಗಳೂರು, ಜೂನ್ 8: ಪ್ರಯಾಣಿಕರು ಪೊಲೀಸ್ ನಿಯಂತ್ರಣ ಕೊಠಡಿಗೆ ನೇರವಾಗಿ ಸಂದೇಶ ರವಾನಿಸುವ ವ್ಯವಸ್ಥೆಯನ್ನು ಓಲಾ ಅಪ್ಲಿಕೇಷನ್ನನ್ನು ಅಳವಡಿಸಲು ಓಲಾ ಸಂಸ್ಥೆ ಒಪ್ಪಿಗೆ ನೀಡಿದೆ.
ನಗರದಲ್ಲಿ ಮೂರು ದಿನಗಳ ಹಿಂದೆ ತಡರಾತ್ರಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಯುವತಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. ಕ್ಯಾಬ್ನಲ್ಲಿ ಚಲಿಸುವಾಗ ಇಂತಹ ಘಟನೆಗಳು ಸಂಭವಿಸಿದರೆ ತಮ್ಮ ಆಪ್ತರಿಗೆ ಮಾಹಿತಿ ನೀಡಲು ಓಲಾ ಅಪ್ಲಿಕೇಷನ್ನಲ್ಲಿ ತುರ್ತು ಸಂಖ್ಯೆಯ ಅವಕಾಶವನ್ನು ನೀಡಲಾಗಿದೆ.
ಅದರಲ್ಲಿ ಐದು ಸಂಖ್ಯೆಯನ್ನು ಪ್ರಯಾಣಿಕರೇ ನಮೂದಿಸಿ, ತುರ್ತು ಸಂದರ್ಭದಲ್ಲಿ ಟ್ಯಾಪ್ ಮಾಡಿ ಮಾಹಿತಿ ರವಾನಿಸಬಹುದು, ಆದರೆ ಅಲ್ಲಿ ಯಾರ ಸಂಖ್ಯೆ ನಮೂದಿಸಲಾಗಿರುತ್ತದೆಯೋ ಅವರಿಗೆ ಮಾತ್ರ ಕರೆ ಹೋಗುತ್ತದೆ. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಬೇಕಾಗುತ್ತದೆ.

ಓಲಾ ಕಂಪನಿಯು ತಮ್ಮ ಕಾರುಗಳಲ್ಲಿರುವಮ ಸುರಕ್ಷತೆ ಕುರಿತು ದಿಢೀರ್ ಪರಿಶೀಲನೆ ನಡೆಸಬೇಕು. ಮಾರ್ಗ ಬದಲಾವಣೆ ಮಾಡಿರುವುದು, ಅರ್ಧಕ್ಕೆ ಟ್ರಿಪ್ ಮುಗಿಸಿಸಿರುವುದು ಸೇರಿದಂತೆ ಒಟ್ಟಾರೆ ಟ್ರಿಪ್ ನ ಪೈಕಿ ಶೇ.10ರಷ್ಟು ಟ್ರಿಪ್ಗಳನ್ನು ಲಾಟರಿ ರೀತಿಯಲ್ಲಿ ಆಯ್ಕೆ ಮಾಡಿ ಚಾಲಕರನ್ನು ವಿಚಾರಿಸಬೇಕು. ಇದರಿಂದ ಚಾಲಕರಿಗೆ ತಮ್ಮ ಮೇಲೆ ನಿಗಾ ಇರಿಸಲಾಗಿದೆ ಎಂಬ ಅರಿವು ಇರುತ್ತದೆ ಎಂಬ ಸಲಹೆಯನ್ನು ನೀಡಲಾಗಿದೆ.
ಬೆಂಗಳೂರು ಪೊಲೀಸ್ ಘಟಕದಿಂದ ಈಗಾಗಲೇ ಸುರಕ್ಷತಾ ಅಪ್ಲಿಕೇಷನ್ ಬಿಡುಗಡೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಎಸ್ಒಎಸ್ ಮೇಲೆ ಟ್ಯಾಪ್ ಮಾಡಿದರೆ ಆ ಮಾಹಿತಿಯು ಪೊಲೀಸ್ ನಿಯಂತ್ರಣ ಕೊಠಡಿಗೆ ಬಳಿಕ ಅಲ್ಲಿಂದಪೊಲೀಸರಿಗೆ ಮಾಹಿತಿ ರವಾನೆಯಾಗಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications