ಜ.29ರಂದು ''ಒಂದ್ ಸೆಕೆಂಡ್'' ರಂಗಶಂಕರದಲ್ಲಿ ಮತ್ತೆ ಪ್ರದರ್ಶನ
ಬೆಂಗಳೂರು, ಜನವರಿ 28: ಬೆಂಗಳೂರಿನ ಜನಪ್ರಿಯವಾದ ವಿಮೂವ್ ಥಿಯೇಟರ್ ನಾಟಕ ಸಂಸ್ಥೆಯು ಕಳೆದ ಹದಿಮೂರು ವರ್ಷಗಳಿಂದ ದೇಶದಾದ್ಯಂತ ತನ್ನ ನಾಟಕಗಳ ಪ್ರತಿ ವರ್ಷ ಹಾಗೂ ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ವಿ ಮೂವ್ ತಂಡ ತನ್ನ 16ನೇ ರಂಗ ಪ್ರಯೋಗ ''ಒಂದ್ ಸೆಕೆಂಡ್'' ಎಂಬ ಹೊಸ ಕನ್ನಡ ನಾಟಕವನ್ನು ರಂಗದ ಮೇಲೆ ತಂದಿದೆ. ಜನವರಿ 29ರಂದು ರಂಗಶಂಕರದಲ್ಲಿ ಪ್ರದರ್ಶನಗೊಳ್ಳುತ್ತಿದೆ.
ಒಂದ್ ಸೆಕೆಂಡ್ ನಾಟಕವನ್ನು, ಗೋಪಾಲಕೃಷ್ಣಪೆೈ ಅನುವಾದಿಸಿರುವ ಆಧುನಿಕ ಚೀನಿ ಕಥೆಗಳು ಪುಸ್ತಕದಿಂದ ರಂಗಕ್ಕೆ ಅಳವಡಿಸಿಕೊಳ್ಳಲಾಗಿದೆ.
ಈ ನಾಟಕ ಒಬ್ಬ ವ್ಯಕಿಯು ವಾಸ್ತವದ ಹುಡುಕಾಟದ ಕಥೆ, ತನ್ನ ಜೀವನದಲ್ಲಿ ನಡೆದು ಹೋಗಿರುವ ಅತಿ ದೊಡ್ಡ ಸನ್ನಿವೇಶವನ್ನು ಮೆಲುಕು ಹಾಕುತ್ತಾ ಆ ಸನ್ನಿವೇಶ ಹೆೇಗೆ ಅವನ ಜೀವನದ ದಿಕ್ಕನ್ನು ಬದಲಾಯಿಸಿತು ಅನ್ನೋದನ್ನು ಎಳೆ ಎಳೆಯಾಗಿ ಬಿಡಿಸುತ್ತಿರುವಾಗ ಅವನಿಗೆ ಅರಿವಾಗುವ ಸತ್ಯವೇ ಅವನು ಹುಡುಕುತ್ತಿದ್ದ ವಾಸ್ತವವೆೇ? ಅನ್ನೋ ಪ್ರಶ್ನೆಯಿಂದ ನಾಟಕ ಮಕ್ತಾಯವಾಗುತ್ತದೆ.

ನಾಟಕ: ಒಂದ್ ನಾಟಕ
ಸಮಯ: 60 ನಿಮಿಷ.
ರಂಗದ ಮೇಲೆ: ಅನಿರುಧ್ ಮಹೇಶ್
ಸಂಗೀತ: ಅಭಿಷೇಕ್ ನರೈನ್
ಬೆಳಕು: ಮಂಜು ನಾರಾಯಣ್ ರಚನೆ,
ನಿರ್ದೇಶನ: ಅಭಿಷೇಕ್ ಅಯ್ಯಂಗಾರ್
ಸ್ಥಳ: ರಂಗ ಶಂಕರ, ಜೆಪಿ ನಗರ, ಬೆಂಗಳೂರು
ದಿನಾಂಕ: ಜನವರಿ 29, ಸಂಜೆ 7.30
ಒಬ್ಬ ಮನುಷ್ಯನ ಒಳ ಯೋಚನೆಗಳನ್ನು ಪ್ರತಿಬಿಂಬಿಸುವ ಪ್ರಯತ್ನದಲ್ಲಿ ಹೆೇಗೆ ಜೀವನದ ಕೆಲವು ಮುಖ್ಯ ಸನ್ನಿವೇಶಗಳು ಒಂದು ಜೀವನವನ್ನೇ ಬದಲಾಯಿಸುವುದು ಅನ್ನೋದೆ ನಾಟಕದ ತಿರುಳು! ನಾಟಕದ ಪಾತ್ರಧಾರಿ ತನ್ನ ಕಥೆಯನ್ನು ವ್ಯಕ್ತಪಡಿಸುತ್ತ, ತನ್ನಲ್ಲಿ ಪ್ರತಿಯೊಬ್ಬ ಪ್ರೇಕ್ಷಕನನ್ನು ಬಿಂಬಿಸುವ ತಂತ್ರವನ್ನು ನಾಟಕದಲ್ಲಿ ಅಳವಡಿಸಲಾಗಿದೆ. ನಾಟಕ ವಿಡಂಬನಾತ್ಮಕ ಶೈಲಿಯಲ್ಲಿದ್ದು, ಪಾತ್ರಧಾರನ ಕಥೆಯನ್ನು ಸಮಾಜದ ಆಗು ಹೋಗುಗಳ ಮಧ್ಯೆ ಬಿಂಬಿಸುವ ತನ್ನಲ್ಲಿ ಅಡಗಿರೋ ಪ್ರಶ್ನೆಗಳನ್ನು ಪ್ರೇಕ್ಷಕನಿಗೆ ಕೇಳುತ್ತ ಸಂವಾದಾತ್ಮಕ ಮಾದರಿಯಲ್ಲಿ ನಾಟಕವನ್ನು ಕಟ್ಟಿ ಕೊಡಲು ಪ್ರಯತ್ನ ಮಾಡಲಾಗಿದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications