ರಂಗಶಂಕರದಲ್ಲಿ ಒಂದ್ ಸೆಕೆಂಡ್-ವಾಸ್ತವ ಹುಡುಕಾಟದ ನಾಟಕ
ಬೆಂಗಳೂರು, ಡಿಸೆಂಬರ್ 26: ಬೆಂಗಳೂರಿನ ಜನಪ್ರಿಯವಾದ ವಿಮೂವ್ ಥಿಯೇಟರ್ ನಾಟಕ ಸಂಸ್ಥೆಯು ಕಳೆದ ಹದಿಮೂರು ವರ್ಷಗಳಿಂದ ದೇಶದಾದ್ಯಂತ ತನ್ನ ನಾಟಕಗಳ ಪ್ರತಿ ವರ್ಷ ಹಾಗೂ ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ವಿ ಮೂವ್ ತಂಡ ತನ್ನ 16ನೇ ರಂಗ ಪ್ರಯೋಗವಾಗಿ, ''ಒಂದ್ ಸೆಕೆಂಡ್'' ಎಂಬ ಹೊಸ ಕನನ ಡ ನಾಟಕವನ್ನನ ರಂಗದ ಮೇಲೆ ತಂದಿದೆ. ಡಿಸೆಂಬರ್ 27ರಂದು ರಂಗಶಂಕರದಲ್ಲಿ ಪ್ರದರ್ಶನಗೊಳ್ಳುತ್ತಿದೆ.
ನಾಟಕದ ಬಗ್ಗೆ:
ಒಂದ್ ಸೆಕೆಂಡ್ ನಾಟಕವನ್ನು, ಗೋಪಾಲಕೃಷ್ಣಪೆೈ ಅನುವಾದಿಸಿರುವ ಆಧುನಿಕ ಚೀನಿ ಕಥೆಗಳು ಪುಸ್ತಕದಿಂದ ರಂಗಕ್ಕೆ ಅಳವಡಿಸಿಕೊಳ್ಳಲಾಗಿದೆ.

ಈ ನಾಟಕ ಒಬ್ಬ ವ್ಯಕಿಯು ವಾಸ್ತವದ ಹುಡುಕಾಟದ ಕಥೆ, ತನ್ನ ಜೀವನದಲ್ಲಿ ನಡೆದು ಹೋಗಿರುವ ಅತಿ ದೊಡ್ಡ ಸನ್ನಿವೇಶವನ್ನು ಮೆಲುಕು ಹಾಕುತ್ತಾ ಆ ಸನ್ನಿವೇಶ ಹೆೇಗೆ ಅವನ ಜೀವನದ ದಿಕ್ಕನ್ನು ಬದಲಾಯಿಸಿತು ಅನ್ನೋದನ್ನು ಎಳೆ ಎಳೆಯಾಗಿ ಬಿಡಿಸುತ್ತಿರುವಾಗ ಅವನಿಗೆ ಅರಿವಾಗುವ ಸತ್ಯವೇ ಅವನು ಹುಡುಕುತ್ತಿದ್ದ ವಾಸ್ತವವೆೇ? ಅನ್ನೋ ಪ್ರಶ್ನೆಯಿಂದ ನಾಟಕ ಮಕ್ತಾಯವಾಗುತ್ತದೆ.
ನಾಟಕ: ಒಂದ್ ನಾಟಕ
ಸಮಯ: 60 ನಿಮಿಷ.
ರಂಗದ ಮೇಲೆ: ಅನಿರುಧ್ ಮಹೇಶ್
ಸಂಗೀತ: ಅಭಿಷೇಕ್ ನರೈನ್
ಬೆಳಕು: ಮಂಜು ನಾರಾಯಣ್
ರಚನೆ, ನಿರ್ದೇಶನ: ಅಭಿಷೇಕ್ ಅಯ್ಯಂಗಾರ್
ಸ್ಥಳ: ರಂಗ ಶಂಕರ, ಜೆಪಿ ನಗರ, ಬೆಂಗಳೂರು
ದಿನಾಂಕ: ಡಿಸೆಂಬರ್ 27, ಸಂಜೆ 7.30

ಒಬ್ಬ ಮನುಷ್ಯನ ಒಳ ಯೋಚನೆಗಳನ್ನು ಪ್ರತಿಬಿಂಬಿಸುವ ಪ್ರಯತ್ನದಲ್ಲಿ ಹೆೇಗೆ ಜೀವನದ ಕೆಲವು ಮುಖ್ಯ ಸನ್ನಿವೇಶಗಳು ಒಂದು ಜೀವನವನ್ನೇ ಬದಲಾಯಿಸುವುದು ಅನ್ನೋದೆ ನಾಟಕದ ತಿರುಳು! ನಾಟಕದ ಪಾತ್ರಧಾರಿ ತನ್ನ ಕಥೆಯನ್ನು ವ್ಯಕ್ತಪಡಿಸುತ್ತ, ತನ್ನಲ್ಲಿ ಪ್ರತಿಯೊಬ್ಬ ಪ್ರೇಕ್ಷಕನನ್ನು ಬಿಂಬಿಸುವ ತಂತ್ರವನ್ನು ನಾಟಕದಲ್ಲಿ ಅಳವಡಿಸಲಾಗಿದೆ. ನಾಟಕ ವಿಡಂಬನಾತ್ಮಕ ಶೈಲಿಯಲ್ಲಿದ್ದು, ಪಾತ್ರಧಾರನ ಕಥೆಯನ್ನು ಸಮಾಜದ ಆಗು ಹೋಗುಗಳ ಮಧ್ಯೆ ಬಿಂಬಿಸುವ ತನ್ನಲ್ಲಿ ಅಡಗಿರೋ ಪ್ರಶ್ನೆಗಳನ್ನು ಪ್ರೇಕ್ಷಕನಿಗೆ ಕೇಳುತ್ತ ಸಂವಾದಾತ್ಮಕ ಮಾದರಿಯಲ್ಲಿ ನಾಟಕವನ್ನು ಕಟ್ಟಿ ಕೊಡಲು ಪ್ರಯತ್ನ ಮಾಡಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications