ಸಲಿಂಗ ಪ್ರೀತಿ, ಮನದ ತಲ್ಲಣ ಎಲ್ಲದರ ಮಿಶ್ರಣ 'ಒಂದು ಪ್ರೀತಿಯ ಕಥೆ'
ಬೆಂಗಳೂರು, ಫೆಬ್ರವರಿ 26 : ಬೆಂಗಳೂರು ಥಿಯೇಟರ್ ಕಲೆಕ್ಟೀವ್ 'ಒಂದು ಪ್ರೀತಿಯ ಕಥೆ' ಎನ್ನುವ ನಾಟಕ ಪ್ರದರ್ಶನವನ್ನು ರಂಗಶಂಕರದಲ್ಲಿ ಮಾರ್ಚ್ 2 ಹಾಗೂ3 ರಂದು ಹಮ್ಮಿಕೊಂಡಿದೆ.
ವಿಜಯ್ ತೆಂಡೂಲ್ಕರ್ ಅನುವಾದಿತ, ವೆಂಕಟೇಶ್ ಪ್ರಸಾಸ್ ನಿರ್ದೇಶನದ ಮರಾಠಿ ಮೂಲದ ಒಂದು ಪ್ರೀತಿಯ ಕಥೆ ನಾಟಕ ಪ್ರದರ್ಶನಗೊಳ್ಳುತ್ತಿದೆ. ಸಂಜೆ 7.30 ಕ್ಕೆ ಪ್ರಾರಂಭವಾಗಲಿದೆ. ಪ್ರೀತಿ ಎನ್ನುವುದು ದೇಶ ಕಾಲಗಳನ್ನು ಮೀರಿದ ಸಂವೇದನೆ, ಪ್ರೀತಿ ಎನ್ನುವುದು ಎಲ್ಲ ಜೀವಿಗಳಲ್ಲೂ ಇರಬಹುದಾದ, ಬಣ್ಣಿಸಲಾಗದ, ಬಿಡಿಸಲಾಗದ ಮತ್ತು ಬದುಕಿಗೆ ಅವಶ್ಯಕವಾದ ಅನುಬಂಧ.
ಹಾಗಿದ್ದರೂ ನಾಗರಿಕ ಜಗತ್ತಿನಲ್ಲಿ ಪ್ರೀತಿಗಿರಬಹುದಾದ ನೈತಿಕ ಚೌಕಟ್ಟು, ಸಾಮಾಜಿಕ ಕಟ್ಟುಪಾಡುಗಳು, ರೂಪುರೇಷೆಗಳು ಬೇರಾವ ಸಂವೇದನೆಗೂ ಕಾಣಸಿಗುವುದಿಲ್ಲ. ದ್ವೇಷ, ಸಿಟ್ಟು, ಅಸೂಯೆಯನ್ನು ವ್ಯಕ್ತಪಡಿಸುವಷ್ಟು ಸುಲಭವಾಗಿ ಪ್ರೀತಿಯನ್ನು ವ್ಯಕ್ತಪಡಿಸಲಾಗದಿರುವುದು ಆಧುನಿಕ ಜಗತ್ತಿನ ಬಹು ದೊಡ್ಡ ವ್ಯಂಗ್ಯ.

ಪ್ರೀತಿಯ ಪರಿಭಾಷೆಗಳು ಕಾಲ ಕಾಲಕ್ಕೆ ಬದಲಾಗುತ್ತಿದ್ದರೂ, ಪ್ರೀತಿಗಂಟಿದ ಪೂರ್ವಾಗ್ರಹಗಳು ಇಂದು ನಿನ್ನೆಯದಲ್ಲ. ಅವುಗಳಲ್ಲಿ ಬಹಳ ಮುಖ್ಯವಾದುದು, ಗಂಡು - ಹೆಣ್ಣಿನ ನಡುವಿನ ಪ್ರೀತಿಯೇ ಸಹಜ ಪ್ರೀತಿ, ಉಳಿದಿದ್ದೆಲ್ಲ ಅಸಹಜ ಪ್ರೀತಿ ಎಂಬುದು. ಸಂತಾನೋತ್ಪತ್ತಿಯೇ ಪ್ರೀತಿಯ ಬಹುಮುಖ್ಯ ಅಗತ್ಯ ಎಂಬ ಸಾಮಾಜಿಕ, ಧಾರ್ಮಿಕ ಕಾರಣಗಳೂ ಈ ಪೂರ್ವಾಗ್ರಹವನ್ನು ಬೆಳೆಸಿವೆ, ಪೋಷಿಸಿವೆ, ನಮ್ಮೆಲ್ಲರಲ್ಲಿ ಬೇರುಬಿಟ್ಟ ಮರವಾಗಿಸಿವೆ.
ಈ ಪೂರ್ವಾಗ್ರಹಗಳ ಆಚೆ ಇರಬಹುದಾದ ಒಂದು ಸಹಜ ಪ್ರೀತಿಯ ಕಥೆಯೇ ನಮ್ಮ 'ಒಂದು ಪ್ರೀತಿಯ ಕಥೆ' . ಮೈಸೂರಿನ ಎಂಜಿನೀಯರ್ ಕಾಲೇಜೊಂದರದಲ್ಲಿ ನಡೆದಿರಬಹುದಾದ ಈ ಕಥೆ ಗಂಡು-ಹೆಣ್ಣಿನ ಮಧ್ಯೆ ಇರುವ ಪ್ರೀತಿ ಎಷ್ಟು ಸಹಜವೋ, ಅಷ್ಟೇ ಸಹಜವಾಗಿ ಹೆಣ್ಣು ಮತ್ತೊಂದು ಹೆಣ್ಣಿನ ಮೇಲೆ ತೋರುವ ಪ್ರೀತಿಯನ್ನು ಪ್ರತಿಫಲಿಸುತ್ತದೆ. ಸಲಿಂಗ ಪ್ರೀತಿ ಪ್ರಕೃತಿಗೆ ವಿರುದ್ದವಾದುದು, ಅಸಹಜವಾದುದು ಎನ್ನುವ ಪೂರ್ವಾಗ್ರಹವನ್ನು ತೊಲಗಿಸುವ ನಿಟ್ಟಿನಲ್ಲಿ ಈ ನಾಟಕ ಪ್ರಯೋಗಿಸಲಾಗುತ್ತಿದೆ.
ಸಲಿಂಗ ಪ್ರೇಮಿಗಳನ್ನು ಮುಖ್ಯವಾಹಿನಿಯ ಕಲಾಪ್ರಕಾರಗಳಲ್ಲಿ ಹಾಸ್ಯದ ವಸ್ತುವಾಗಿ ಬಳಸಿಕೊಂಡದ್ದೇ ಹೆಚ್ಚು; ಅಥವಾ ಅವರು ಕಥೆಯ ಬಲಿಪಶುಗಳು ಎಂಬುದನ್ನು ವೈಭವೀಕರಿಸಿ ಬಿಂಬಿಸಲಾಗುತ್ತಿದೆ. ಆದರೆ ಈ ಎರಡೂ ಸಿದ್ಧ ಮಾದರಿಯ ಸಾಧ್ಯತೆಗಳಾಚೆ ಸಲಿಂಗ ಪ್ರೀತಿ ಅತ್ಯಂತ ಸಹಜ ಎನ್ನುವುದನ್ನು ಗಟ್ಟಿಯಾದ ನಿಲುವಿನೊಂದಿಗೆ ಪ್ರತಿಪಾದಿಸಲು 'ಬೆಂಗಳೂರು ಥಿಯೇಟರ್ ಕಲೆಕ್ಟಿವ್' ಈ ಪ್ರಯೋಗದ ಮೂಲಕ ಪ್ರಯತ್ನ ಪಡುತ್ತಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications