ಮಾಧ್ಯಮ ಮತ್ತು ಪೊಲೀಸ್ ವಿಚಾರ ಸಂಕಿರಣ
ಬೆಂಗಳೂರು, ಫೆ.14 : ಬೆಂಗಳೂರು ಪೊಲೀಸ್ ಕಮೀಷನರೇಟ್ ಗೆ 50 ಮತ್ತು ಕರ್ನಾಟಕದ ಮಾಧ್ಯಮ ಅಕಾಡೆಮೆಗೆ 30 ವರ್ಷಗಳ ತುಂಬಿದ ಹಿನ್ನಲೆಯಲ್ಲಿ ಮಾಧ್ಯಮ ಮತ್ತು ಪೊಲೀಸ್ ಎಂಬ ವಿಚಾರ ಸಂಕಿರಣವನ್ನು ಫೆ.15ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಆಯೋಜಿಸಲಾಗಿದೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಫೆ.15ರ ಶನಿವಾರ ಬೆಳಗ್ಗೆ 10.30ಕ್ಕೆ 4ನೇ ಮಹಡಿಯ ಕೊಠಡಿ ಸಂಖ್ಯೆ 419ರಲ್ಲಿ ನಡೆಯಲಿರುವ ಈ ವಿಚಾರ ಸಂಕಿರಣವನ್ನು ಗೃಹ ಸಚಿವ ಕೆಜೆ ಜಾರ್ಜ್ ಉದ್ಘಾಟಿಸಲಿದ್ದಾರೆ. ವಾರ್ತಾ ಸಚಿವ ರೋಷನ್ ಬೇಗ್ ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

ವಿಚಾರ ಸಂಕಿರಣದ ಮುಖ್ಯ ಅತಿಥಿಗಳಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಪೊಲೀಸ್ ಮಹಾನಿರ್ದೇಶಕ ಲಾಲ್ ರುಕುಂಪಚವೋ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಕೆ.ಆರ್.ನಿರಂಜನ್ ಭಾಗವಹಿಸಲಿದ್ದಾರೆ. ವಿಚಾರ ಸಂಕಿರಣದ ಆಶಯ ನುಡಿಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಆಡಲಿದ್ದು, ಮಾಧ್ಯಮ ಅಕಾಡಮೆ ಅಧ್ಯಕ್ಷ ಎಂ.ಎ.ಪೊನಪ್ಪ ಅವರು ಭಾಗವಹಿಸಲಿದ್ದಾರೆ. [ಹೆಲ್ಮೆಟ್ ಧರಿಸಿ ಇಲ್ಲವೇ ದಂಡ ಕಟ್ಟಿ]
ಬೆಳಗ್ಗೆ 11.30ರಿಂದ ಸಂಜೆ 4 ಗಂಟೆಯವರೆಗೆ ನಾಲ್ಕು ವಿಚಾರಗಳ ಕುರಿತು ವಿಚಾರ ಗೋಷ್ಠಿಯನ್ನು ಆಯೋಜಿಸಲಾಗಿದೆ. ಅಪರಾಧ ತಡೆಯುವಲ್ಲಿ ಮಾಧ್ಯಮಗಳ ಪಾತ್ರ, ಸಂಚಾರ ದಟ್ಟಣೆ ಪರಿಹಾರ, ಅಪರಾಧ ತಡೆಗೆ ಮಾಧ್ಯಮಗಳ ಚೌಕಟ್ಟು, ವಂಚನೆ ಪ್ರಕರಣಗಳು ನ್ಯಾಯ-ನೆರವು ಎಂಬ ವಿಚಾರದ ಕುರಿತು ಗೋಷ್ಠಿಗಳು ನಡೆಯಲಿವೆ.
ನಿವೃತ್ತ ಪೊಲೀಸ್ ಅಧಿಕಾರಿ ಕಸ್ತೂರಿ ರಂಗನ್, ಟೈಮ್ಸ್ ಆಫ್ ಇಂಡಿಯಾದ ಮಧುಸೂಧನ್, ಈ ಸಂಜೆ ಪತ್ರಿಕೆಯ ವರದಿಗಾರ ರಾಮಸ್ವಾಮಿ, ಸುವರ್ಣ ನ್ಯೂಸ್ ಹಿರಿಯ ವರದಿಗಾರ್ತಿ ವಿಜಯಲಕ್ಷ್ಮೀ ಶಿಬರೂರು, ಪ್ರಜಾವಾಣಿ ಮುಖ್ಯ ಉಪ ಸಂಪಾದಕ ಎಚ್.ಎಚ್.ದಯಾನಂದ, ಹಿರಿಯ ನ್ಯಾಯವಾದಿ ಎಂ.ಟಿ.ನಾಣಯ್ಯ, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಹ, ಡಿಎನ್ಎ ಬ್ಯುರೋ ಮುಖ್ಯಸ್ಥ ನವೀನ್ ಅಮ್ಮೆಂಬಳ, ನ್ಯೂಸ್ 9 ವರದಿಗಾರ ಬನ್ನಿ ಕಾಳಪ್ಪ ಭಾಗವಹಿಸಲಿದ್ದಾರೆ.
ಮಧ್ಯಾಹ್ನದ ಗೋಷ್ಠಿಗಳಲ್ಲಿ ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸುರೇಶ್ ಬಾಬು, ಹಿರಿಯ ನ್ಯಾಯವಾದಿ ಸಿ.ಎಚ್.ಹನುಮಂತರಾಯ, ಉದಯವಾಣಿ ಹಿರಿಯ ವರದಿಗಾರ ಎ.ಎಂ.ಸುರೇಶ್, ವಿಜಯವಾಣಿ ಹಿರಿಯ ವರದಿಗಾರ ಡಿ.ಎಸ್.ಶಿವರುದ್ರಪ್ಪ, ಪಬ್ಲಿಕ್ ಟಿವಿ ಹಿರಿಯ ವರದಿಗಾರ ಅರವಿಂದ್, ಹಿರಿಯ ಪತ್ರಕರ್ತ ಬಾಲಕೃಷ್ಣ ಕಾಕತ್ಕರ್, ಇಂಡಿಯನ್ ಎಕ್ಸ್ ಪ್ರೆಸ್ ಸುದ್ದಿ ವಿಭಾಗದ ಮುಖ್ಯಸ್ಥರಾದ ಎಸ್.ರಾಜಶೇಖರ್, ಟೈಮ್ಸ್ ಆಫ್ ಇಂಡಿಯಾ ವಿಶೇಷ ವರದಿಗಾರ ಡಿ.ಎನ್.ಶಿವಕುಮಾರ್ ಭಾಗವಹಿಸಲಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications