Bengaluru: ತೆರವು ಕಾರ್ಯಾಚರಣೆ ವೇಳೆ ದರ್ಗಾ ಕುಸಿತ, ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರಿನ ಅವೆನ್ಯೂ ರಸ್ತೆ ಬಳಿ ಮಂಗಳವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು, ಮಾರ್ಚ್. 01 : ರಾಜಧಾನಿ ಬೆಂಗಳೂರಿನಲ್ಲಿ ದರ್ಗಾ ಅಧಿಕಾರಿಗಳು ತೆರವು ಕಾರ್ಯಾಚರಣೆ ವೇಳೆ ದರ್ಗಾದ ಒಂದು ಭಾಗವು ಕುಸಿದುಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಅವೆನ್ಯೂ ರಸ್ತೆ ಬಳಿ ಮಂಗಳವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಕೆಟ್ ವೃತ್ತದ ಬಳಿ ದರ್ಗಾ ಆಡಳಿತ ಮಂಡಳಿ ಅಧಿಕಾರಿಗಳು ದರ್ಗಾ ತೆರವು ಕಾರ್ಯಾಚರಣೆಗೆ ಗುತ್ತಿಗೆ ನೀಡಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.

"ಅವೆನ್ಯೂ ರಸ್ತೆ, ಮಾರ್ಕೆಟ್ ವೃತ್ತದ ಬಳಿ ದರ್ಗಾ ತೆರವು ಕಾರ್ಯಾಚರಣೆ ಕೆಲಸ ನಡೆಯುತ್ತಿತ್ತು. ಇಬ್ಬರು ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದರು. ಮಂಗಳವಾರ ಇದ್ದಕ್ಕಿದ್ದಂತೆ ದರ್ಗಾದ ಒಂದು ಮಹಡಿ ಕುಸಿದು ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಅಜರ್ ಉಲ್ ಹಕ್ ಎಂಬುವವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ" ಎಂದು ಪಶ್ಚಿಮ ಬೆಂಗಳೂರು ಡಿಸಿಪಿ ಲಕ್ಷ್ಮಣ್ ಬಿ.ನಿಂಬರಗಿ ತಿಳಿಸಿದ್ದಾರೆ.

ದುರ್ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡಿದ್ದು ಅವರನ್ನು ಸಮೀಪದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಶ್ಚಿಮ ಬೆಂಗಳೂರು ಡಿಸಿಪಿ ಲಕ್ಷ್ಮಣ್ ಬಿ.ನಿಂಬರಗಿ ಮಾಹಿತಿ ನೀಡಿದ್ದಾರೆ.
ಅವೆನ್ಯೂ ರಸ್ತೆಯಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದಿರಿ ದರ್ಗಾದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಕೋಲ್ಕತ್ತಾ ಮೂಲದ 21 ವರ್ಷದ ಅಜರ್ ಉಲ್ ಹಕ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಮೊಹಮ್ಮದ್ ಸಕಿಮುದ್ದೀನ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ದರ್ಗಾ ಸಮಿತಿಯು ಹಳೆಯ ಕಟ್ಟಡವನ್ನು ತೆಗೆದುಹಾಕಲು ನಿರ್ಧರಿಸಿತ್ತು. ಕಟ್ಟಡ ತೆರುವು ಮಾಡಲು ಖಾಸಗಿ ಗುತ್ತಿಗೆದಾರರಿಗೆ ತೆರವು ಗುತ್ತಿಗೆಯನ್ನು ನೀಡಿತು. ಕಳೆದ ಕೆಲ ದಿನಗಳಿಂದ ಕಟ್ಟಡ ಕೆಡವುವ ಕೆಲಸ ನಡೆಯುತ್ತಿತ್ತು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications