ಬೆಂಗಳೂರು : ಜೀವಂತ ಹೃದಯ ಸಾಗುತ್ತಿದೆ ದಾರಿ ಬಿಡಿ
ಬೆಂಗಳೂರು, ಜುಲೈ 31 : ಬೆಂಗಳೂರು ಇಂದು ಮತ್ತೊಂದು ಜೀವಂತ ಹೃದಯ ಸಾಗಣೆಗೆ ಸಾಕ್ಷಿಯಾಗಲಿದೆ. ಯಶವಂತಪುರದಿಂದ ಎಲೆಕ್ಟ್ರಾನಿಕ್ ಸಿಟಿಗೆ ಜೀವಂತ ಹೃದಯವನ್ನು ತೆಗೆದುಕೊಂಡು ಹೋಗಲಾಗುತ್ತಿದೆ. ಸಂಚಾರಿ ಪೊಲೀಸರು ಆಂಬ್ಯುಲೆನ್ಸ್ ಸಂಚಾರಕ್ಕಾಗಿ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿದ್ದಾರೆ.
ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ನಾರಾಯಣ ಹೃದಯಾಲಯಕ್ಕೆ ಜೀವಂತ ಹೃದಯ ಸಾಗಣೆ ಮಾಡಲಾಗುತ್ತದೆ. 17 ವರ್ಷದ ಯುವಕನ ಹೃದಯವನ್ನು 43 ವರ್ಷದ ವ್ಯಕ್ತಿಗೆ ಆಳವಡಿಸಲಾಗುತ್ತದೆ. [ಅಂಗಾಂಗ ದಾನ ಮಾಡಿ ನಾಲ್ವರಿಗೆ ಮರು ಜೀವ ನೀಡಿದರು]

ಅಂದಹಾಗೆ ಕಳೆದ ಗುರುವಾರ ಮತ್ತು ಭಾನುವಾರ ಬೆಂಗಳೂರು ಎರಡು ಜೀವಂತ ಹೃದಯ ಸಾಗಣೆಗೆ ಸಾಕ್ಷಿಯಾಗಿತ್ತು. ಜುಲೈ 23ರ ಗುರುವಾರ ಮಂಡ್ಯ ಮೂಲದ 22 ವರ್ಷದ ಚೇತನ್ ಹೃದಯವನ್ನು ದಾನ ಮಾಡಿದ್ದರು. ಸಾಗರ್ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯಕ್ಕೆ ಜೀವಂತ ಹೃದಯವನ್ನು ತೆಗೆದುಕೊಂಡು ಹೋಗಲಾಗಿತ್ತು. [ಸಾವಿನ ಬಳಿಕ ಮತ್ತೊಂದು ಜೀವಕ್ಕೆ ಚೇತನ ತುಂಬಿದ ಚೇತನ್]
ಜುಲೈ 26 ಭಾನುವಾರ ಬನ್ನೇರುಘಟ್ಟ ರಸ್ತೆಯ ಸಾಗರ್ ಆಸ್ಪತ್ರೆಯಿಂದ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೃದಯಾಲಯಕ್ಕೆ ಜೀವಂತ ಹೃದಯವನ್ನು ತೆಗೆದುಕೊಂಡು ಹೋಗಲಾಗಿತ್ತು. ಚೆನ್ನೈ ಮೂಲದ ಇಳವರಸನ್ (32) ತಮ್ಮ ಹೃದಯ, ಕಿಡ್ನಿ, ಕಣ್ಣು, ಲೀವರ್ ದಾನ ಮಾಡಿದ್ದರು.
Dear Friends,BTP making another signal free Corridor to transport "LIVE HEART" today around 11AM. The LIVE HEART is...
Posted by Bengaluru Traffic Police onThursday, July 30, 2015
ಹೃದಯ ದಾನದ ಪ್ರಕರಣಗಳು
* 2014ರಲ್ಲಿ ಎರಡು ಬಾರಿ ಬೆಂಗಳೂರಿನಿಂದ ಚೆನ್ನೈಗೆ ಜೀವಂತ ಹೃದಯವನ್ನು ಸಾಗಣೆ ಮಾಡಲಾಗಿತ್ತು
* 2015ರ ಜನವರಿಯಲ್ಲಿ ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಬಿಜಿಎಸ್ ಆಸ್ಪತ್ರೆಗೆ ಹೃದಯ ಸಾಗಣೆ ಮಾಡಲಾಗಿತ್ತು
* 2015ರ ಫೆ. 28ರಂದು ಬೆಂಗಳೂರಿನಿಂದ ಹೈದರಾಬಾದ್ ಜೀವಂತ ಹೃದಯವನ್ನು ಸಾಗಣೆ ಮಾಡಲಾಗಿತ್ತು
* 2015ರ ಏ.13ರಂದು ಮಂಗಳೂರಿನಿಂದ ಜೀವಂತ ಹೃದಯವನ್ನು ಬಿಜಿಎಸ್ ಆಸ್ಪತ್ರೆಗೆ ತೆಗೆದುಕೊಂಡು ಬರಲಾಗಿತ್ತು
* 2015ರ ಜುಲೈ 23ರಂದು ಚೇತನ್ ಹೃದಯವನ್ನು ದಾನ ಮಾಡಲಾಗಿತ್ತು
* 2015ರ ಜುಲೈ 26ರಂದು ಇಳವರಸನ್ ಹೃದಯ ದಾನ ಮಾಡಿದ್ದರು.
-
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications