ಒಂದು ಕೊಲೆ ಯತ್ನ: ಹಿಂದಿನ ಆರು ಪ್ರಕರಣಗಳು ರೀ ಓಪನ್
ಬೆಂಗಳೂರು, ಜನವರಿ 18: ಒಂದು ಕೊಲೆ ಯತ್ನದಿಂದ ಹಿಂದಿನ ಎಲ್ಲಾ ಆರು ಪ್ರಕರಣಗಳು ರೀ ಓಪನ್ ಆಗಿವೆ.
ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್ ಹಾಕಿದ್ದ ಆರು ಆರೋಪಿಗಳು ಈ ಹಿಂದೆ ಮಾಡಿದ್ದ ಆರು ಪ್ರಕರಣಗಳು ಬೆಳಕಿಗೆ ಬಂದಿವೆ. ಆರು ಆರೋಪಿಗಳು ಆರೋಪಕ್ಕೆ ಸಾಕ್ಷ್ಯವೇ ಇಲ್ಲದ ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದರು.
ಸಂಸದ ತೇಜಸ್ವಿ , ಸೂಲಿಬೆಲೆ ಕೊಲೆಗೆ ಸಂಚು: ಪೊಲೀಸರಿಂದ ಬಂತು ಆಘಾತಕಾರಿ ಮಾಹಿತಿ
ಈ ಆರು ಆರೋಪಿಗಳ ಪೈಕಿ ನಾಲ್ವರು ಆರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಆ ಆರು ಪ್ರಕರಣದಲ್ಲಿ ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣವೂ ಒಂದು ಎಂಬುದು ತಿಳಿದುಬಂದಿದೆ.
ಈ ಎಲ್ಲಾ ಪ್ರಕರಣದಲ್ಲೂ ಪೊಲೀಸರಿಗೆ ಸರಿಯಾದ ಸಾಕ್ಷ್ಯ ಸಿಕ್ಕದೇ ಸಿ-ರಿಪೋರ್ಟ್ ಹಾಕಿದ್ದರು. ಕೊಲೆ ಯತ್ನ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಗಳು ಬೆಂಗಳೂರಿನ ಮೊಹಮದ್ ಖಲಿ ಎಂಬವವರ ಕಾರು ಸುಟ್ಟು ಹಾಕಿದ್ದರು. ಅದರಲ್ಲೂ ಇರ್ಫಾನ್ ಖಲಿಯ ಕಾರನ್ನು ಸುಟ್ಟು ಹಾಕಿದ್ದ.
Comments
English summary
All six previous cases were reopened with one attempted murder.
Story first published: Saturday, January 18, 2020, 16:00 [IST]