ರಾಜ್ಯದಲ್ಲಿಂದು ಪತ್ತೆಯಾಗಿದ್ದು ಒಂದೇ ಒಂದು ಕೊವಿಡ್ ಕೇಸ್
ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ಇಂದು ಕೇವಲ ಒಂದು ಕೊರೊನಾ ವೈರಸ್ ಪ್ರಕರಣ ದೃಢಪಟ್ಟಿದೆ. ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದವರೆಗೂ ರಾಜ್ಯದಲ್ಲಿ ಒಬ್ಬರಿಗೆ ಮಾತ್ರ ಸೋಂಕು ದೃಢಪಟ್ಟಿದೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 501ಕ್ಕೆ ಏರಿಕೆ ಕಂಡಿದೆ. ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಮೇ 3ರ ನಂತರ ಯಾವ್ಯಾವ ರಾಜ್ಯಗಳಲ್ಲಿ ಲಾಕ್ಡೌನ್ ವಿಸ್ತರಣೆ ಆಗುತ್ತೆ?
501ನೇ ಸೋಂಕಿತ ವ್ಯಕ್ತಿ 47 ವರ್ಷ ಮಹಿಳೆಯಾಗಿದ್ದು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಇವರು 432ನೇ ಸೋಂಕಿತನ ಸಂಪರ್ಕದಲ್ಲಿದ್ದರು. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು 18 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 177 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 1 ಹೊಸ #Covid19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 501ಕ್ಕೆ ಏರಿದೆ. ಇದುವರೆಗೆ ಒಟ್ಟು 177 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #ಮನೆಯಲ್ಲೇಇರಿ pic.twitter.com/orCQbJB2J6
— B Sriramulu (@sriramulubjp) April 26, 2020
ವಿಶ್ವಾದ್ಯಂತ ಕೊರೊನಾಗೆ 2 ಲಕ್ಷ ಸಾವು, ಟಾಪ್ 5 ದೇಶಗಳ ಪಟ್ಟಿ ಇಲ್ಲಿದೆ
ಅಂದ್ಹಾಗೆ, ಈ ವರದಿ ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆವರೆಗಿನ ಮಾಹಿತಿ ಒಳಗೊಂಡಿದೆ. ಸಂಜೆ ಮತ್ತೊಮ್ಮೆ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಲಿದ್ದು, ಆಗ ಮತ್ತಷ್ಟು ಹೊಸ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.