ಮೆಟ್ರೋ, ಬಿಎಂಟಿಸಿ, ಉಪನಗರ ರೈಲಿಗೆ ಒಂದೇ ಸ್ಮಾರ್ಟ್ಕಾರ್ಡ್!
ಬೆಂಗಳೂರು, ಮಾರ್ಚ್ 22: ನಮ್ಮ ಮೆಟ್ರೋ, ಬಿಎಂಟಿಸಿ, ಉಪನಗರ ರೈಲುಗಳಲ್ಲಿ ಒಂದೇ ಸ್ಮಾರ್ಟ್ ಕಾರ್ಡ್ ಬಳಸಿ ಸಂಚರಿಸಬಹುದು. ಹೌದು ಇಂತಹ ವಿನೂತನ ಯೋಜನೆ ಕಾರ್ಯರೂಪಕ್ಕೆ ನಗರಾಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬಿಎಂಟಿಸಿ, ಕೆಎಸ್ಆರ್ ಟಿಸಿ, ಬಿಎಂಆರ್ ಸಿಎಲ್ ಮತ್ತು ನಗರ ಭೂ ಸಾರಿಗೆ ನಿರ್ದೇಶನಾಲಯಕ್ಕೆ ಪತ್ರ ಬರೆದಿರುವ ಇಲಾಖೆ, ತಮ್ಮ ತಮ್ಮ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ.ಪ್ರಸ್ತುತ ಎಲ್ಲ ಸಾರಿಗೆ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಷ್ಟೇ ಕಾರ್ಯ ನಿರ್ವಹಿಸುತ್ತಿವೆ. ಇದರಿಂದಾಗಿಯೇ ಹಲವು ವಿಷಯಗಳಲ್ಲಿ ಸಮನ್ವಯ ಕೊರತೆ ಇದ್ದು, ಪ್ರಯಾಣಿಕರು ದಿನೇ ದಿನೇ ಖಾಸಗಿ ವಾಹನಗಳ ಬಳಕೆ ಮಾಡುವವರ ಸಂಖ್ಯೆ ಅಧಿಕವಾಗುತ್ತಿದೆ.
ಇದೀಗ ಮೆಜೆಸ್ಟಿಕ್ನಲ್ಲಿ ಮೆಟ್ರೋ, ಬಸ್ ಮತ್ತು ರೈಲು ನಿಲ್ದಾಣ ಸಂಪರ್ಕಿಸುವಂತೆ ಸಮರ್ಪಕ ಪಾದಚಾರಿ ಮಾರ್ಗ ಇತ್ತೀಚೆಗಷ್ಟೇ ಪ್ರಾರಂಭವಾಗಿದೆ. ಈ ಮೂಲಕ ಪ್ರಯಾಣಿಕರು ತಾವು ಬಯಸಿದ ನಿಲ್ದಾಣಕ್ಕೆ ನೇರವಾಗಿ ಹೋಗಬಹುದು. ಇದೇ ರೀತಿ ಮೆಟ್ರೋ ರೈಲು ಮತ್ತು ಬಸ್ ಸೇವೆ ಜತೆಯಾಗುವ ಯಶವಂತಪುರ, ಕಂಟೋನ್ಮೆಂಟ್, ಬೈಯಪ್ಪನಹಳ್ಳಿ, ಕೆಂಗೇರಿ, ಪೀಣ್ಯ ಸೇರಿ ನಗರದ ಹಲವೆಡೆ ಸಾರಿಗೆ ಸೇವೆಗಳನ್ನು ಜೋಡಿಸಬೇಕಾಗಿದೆ.

ಈ ಜವಾಬ್ದಾರಿಯನ್ನು ನಗರ ಭೂ ಸಾರಿಗೆ ನಿರ್ದೇಶನಾಲಯಕ್ಕೆ ನಗರಾಭಿವೃದ್ಧಿ ಇಲಾಖೆ ನೀಡಿದೆ.
ಟಿಕೇಟ್ ಪಡೆಯಲು ಒಂದೇ ಸ್ಮಾರ್ಟ್ ಕಾರ್ಡ್ ತಯಾರಿ, ಬಸ್ ನಲ್ಲೇ ಮೆಟ್ರೋ ರೈಲು ಮಾಹಿತಿ, ಮೆಟ್ರೋದಲ್ಲಿ ಫೀಡರ್ ಸೇವೆ ಮಾಹಿತಿ ಹೀಗೆ ಮಾಹಿತಿ ಹಂಚಿಕೆ ಸೌಲಭ್ಯದ ಕುರಿತು ಶೀಘ್ರ ಸಭೆ ನಡೆಯಲಿದೆ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ತಿಳಿಸಿದ್ದಾರೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications