ಬೆಂಗಳೂರು ಲಾಕ್ ಡೌನ್; ಯಡಿಯೂರಪ್ಪ ಮಹತ್ವದ ಟ್ವೀಟ್
ಬೆಂಗಳೂರು, ಜುಲೈ 13 : ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಮಂಗಳವಾರದಿಂದ ಲಾಕ್ ಡೌನ್ ಜಾರಿಗೆ ಬರಲಿದೆ. ಜನರು ಆತಂಕಗೊಂಡು ನಗರ ಬಿಟ್ಟು ಊರಿನತ್ತ ತೆರಳುತ್ತಿದ್ದಾರೆ.
Recommended Video
ಕರ್ನಾಟಕ ಸರ್ಕಾರ ಶನಿವಾರ ಬೆಂಗಳೂರು ನಗರದಲ್ಲಿ ಜುಲೈ 14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ತನಕ ಒಂದು ವಾರದ ಲಾಕ್ ಡೌನ್ ಮಾಡುವುದಾಗಿ ಘೋಷಣೆ ಮಾಡಿದೆ. ಸೋಮವಾರ ಯಡಿಯೂರಪ್ಪ ಟ್ವೀಟ್ ಮೂಲಕ ಮತ್ತೊಂದು ಸ್ಪಷ್ಟನೆಯನ್ನು ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಭಾನುವಾರ ನಗರದಲ್ಲಿ 1525 ಹೊಸ ಪ್ರಕರಣ ದಾಖಲಾಗಿದ್ದು, ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 18,387ಕ್ಕೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಒಂದು ವಾರದ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.

ಸೋಮವಾರ ಯಡಿಯೂರಪ್ಪ ಅವರು ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿದರು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಇಂದು ಮುಖ್ಯಮಂತ್ರಿ ಶ್ರೀ@BSYBJPರವರು ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿದರು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕಪಡದೆ, ವದಂತಿಗಳಿಗೆ ಕಿವಿಗೊಡದೆ, ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದ್ದಾರೆ (1/2) pic.twitter.com/Gy5Xp4W6Z7
— CM of Karnataka (@CMofKarnataka) July 13, 2020
ಬೆಂಗಳೂರು ನಗರದಲ್ಲಿನ ಲಾಕ್ ಡೌನ್ ಒಂದು ವಾರದ ಬಳಿಕ ಮುಂದುವರೆಯಲಿದೆ ಎಂಬ ಆತಂಕದಲ್ಲಿ ಜನರು ಊರುಗಳತ್ತ ಹೊರಟಿದ್ದಾರೆ. ಆದ್ದರಿಂದ, ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications