ಬೆಂಗಳೂರು ಎಟಿಎಂ ದಾಳಿಗೆ ಒಂದು ವರ್ಷ, ಆರೋಪಿ ಎಲ್ಲಿ?
ಬೆಂಗಳೂರು, ನ.19 : ಅಂದು ಬೆಳಗ್ಗೆ ಬೆಂಗಳೂರಿನ ಬಿಬಿಎಂಪಿ ಕಚೇರಿ ಮುಂಭಾಗದಲ್ಲಿರುವ ಕಾರ್ಪೊರೇಷನ್ ಬ್ಯಾಂಕ್ ಎಟಿಎಂಗೆ ಹೋದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಹಲ್ಲೆ ನಡೆದ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು. ಅದನ್ನು ನೋಡಿದ ಜನರು ಬೆಚ್ಚಿಬಿದ್ದಿದ್ದರು. ಬೆಂಗಳೂರಿನ ಎಟಿಎಂ ದಾಳಿಗೆ ಇಂದಿಗೆ ಒಂದು ವರ್ಷ ಆದರೆ, ಆರೋಪಿ ಮಾತ್ರ ಇನ್ನೂ ಪತ್ತೆಯಾಗಿಲ್ಲ.
2013ರ ನ.19ರಂದು ಬೆಳಗ್ಗೆ 7.10ರ ಸುಮಾರಿಗೆ ಕಾರ್ಪೋರೇಷನ್ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಅವರ ಮೇಲೆ ಅಪರಿಚಿತ ವ್ಯಕ್ತಿ ಎಲ್ಐಸಿ ಕಟ್ಟಡದಲ್ಲಿರುವ ಎಟಿಎಂನಲ್ಲಿ ಹಲ್ಲೆ ನಡೆಸಿದ್ದ. ಹಲ್ಲೆ ನಂತರ ಆರೋಪಿ ಶಟರ್ ಅನ್ನು ಮುಚ್ಚಿ ಪರಾರಿಯಾಗಿದ್ದ. ಈ ಕೃತ್ಯ ನಡೆದ ಸುಮಾರು ನಾಲ್ಕು ಗಂಟೆಗಳ ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಜ್ಯೋತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಜ್ಯೋತಿ ಉದಯ್ ಚೇತರಿಸಿಕೊಂಡಿದ್ದು, ಬ್ಯಾಂಕಿನಲ್ಲಿ ಕೆಲಸ ಮುಂದುವರೆಸಿದ್ದಾರೆ. ಸಿಸಿಟಿವಿಯಲ್ಲಿ ಹಲ್ಲೆಯ ದೃಶ್ಯಗಳು ರೆಕಾರ್ಡ್ ಆಗಿದ್ದರೂ ಒಂದು ವರ್ಷವಾದರೂ ಆರೋಪಿಯನ್ನು ಹಿಡಿಯಲು ಸಾಧ್ಯವಾಗಿಲ್ಲ. ಬೆಂಗಳೂರು ಪೊಲೀಸರು ರಚಿಸಿರುವ ವಿಶೇಷ ತಂಡ ಆರೋಪಿಗಾಗಿ ಹುಡುಕಾಟ ನಡೆಸುತ್ತಲೇ ಇದೆ. [ಘಟನೆ ಬಗ್ಗೆ ಜ್ಯೋತಿ ಉದಯ್ ಹೇಳಿದ್ದೇನು?]
ಹಲ್ಲೆ ಆರೋಪಿ ಆಂಧ್ರಪ್ರದೇಶದಲ್ಲಿದ್ದಾನೆ ಎಂದು ಪೊಲೀಸರು ನಡೆಸಿದ ಹುಡುಕಾಟ ಫಲ ನೀಡಿಲ್ಲ. ವ್ಯಕ್ತಿಯ ಮುಖಚಹರೆ ಹೊಂದುವ ಹಲವು ಜನರನ್ನು ಪೊಲೀಸರು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ. ಆರೋಪಿಯ ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಆದರೆ, ಆರೋಪಿ ಮಾತ್ರ ಸಿಕ್ಕಿಬಿದ್ದಿಲ್ಲ.

ಎಟಿಎಂನಲ್ಲಿ ಹಲ್ಲೆ ನಡೆದ ನಂತರ ಪೊಲೀಸರು ಎಟಿಎಂಗಳಲ್ಲಿ ಜನರ ಸುರಕ್ಷತೆಗಾಗಿ ನೀಡಿರುವ ಮಾರ್ಗಸೂಚಿ ಎಲ್ಲಾ ಎಟಿಎಂಗಳಲ್ಲೂ ಪಾಲನೆಯಾಗಿಲ್ಲ. ಇಂದಿಗೂ ಹಲವಾರು ಎಟಿಎಂಗಳಲ್ಲಿ ಸೈರನ್, ಸಿಸಿಟಿವಿ ಮತ್ತು ಸೆಕ್ಯೂರಿಟಿ ಗಾರ್ಡ್ಗಳಿಲ್ಲ.
ಆರೋಪಿಯನ್ನು ಪತ್ತೆ ಹಚ್ಚುತ್ತೇವೆ : ಎಟಿಎಂನಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯನ್ನು ಬಂಧಿಸುವ ಕಾರ್ಯಕ್ಕೆ ಸಂಬಂಧಿಸಿದಂತೆ ನಮ್ಮ ಪ್ರಯತ್ನ ಮುಂದುವರಿದಿದೆ. ಆದರೆ ಆರೋಪಿಯ ಬಗ್ಗೆ ಇನ್ನೂ ಯಾವುದೇ ಸುಳಿವು ಪತ್ತೆಯಾಗಿಲ್ಲ. ಶೀಘ್ರವೇ ಆರೋಪಿಯ ಬಂಧಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಹೇಳಿದ್ದಾರೆ.

ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ : 'ನನ್ನ ಮೇಲೆ ಹಲ್ಲೆ ನಡೆದ ಆರೋಪಿಯನ್ನು ಇನ್ನೂ ಬಂಧಿಸಲು ಸಾಧ್ಯವಾಗಿಲ್ಲ. ಪೊಲೀಸರು ತಮ್ಮ ಪ್ರಯತ್ನ ಮಾಡುತ್ತಿದ್ದಾರೆ. ಪೊಲೀಸರನ್ನು ನಾನು ದೂರುವುದಿಲ್ಲ' ಎಂದು ಜ್ಯೋತಿ ಉದಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಎಟಿಎಂ ದಾಳಿಯ ವಿಡಿಯೋ ಇಲ್ಲಿದೆ
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.











Click it and Unblock the Notifications