ಭಾರತದ ಮುಂದಿನ ಕ್ಷಿಪಣಿಗೆ ಅಬ್ದುಲ್ ಕಲಾಂ ಹೆಸರು
ಬೆಂಗಳೂರು, ಆಗಸ್ಟ್, 06 : ಮುಂದಿನ ದಿನಗಳಲ್ಲಿ ಭಾರತದಿಂದ ಉಡಾವಣೆಯಾಗುವ ಬ್ರಹ್ಮಸ್ ನ ಹೈಪರ್ ಸಾನಿಕ್ ಕ್ಷಿಪಣಿಗೆ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಇಡುವ ನಿರ್ಧಾರ ತೆಗೆದುಕೊಂಡಿದೆ.
ಬ್ರಹ್ಮಸ್ ನ ಮುಖ್ಯಸ್ಥರಾದ ಸುಧೀರ್ ಕುಮಾರ್ ಮಿಶ್ರಾ ಶನಿವಾರ ಈ ನಿರ್ಧಾರ ಪ್ರಕಟಿಸಿದ್ದು, ಈಗಾಗಲೇ ಹೈಪರ್ ಸಾನಿಕ್ ಕ್ಷಿಪಣಿ ಉಡಾವಣೆಗೆ ಬೇಕಾದ ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಅತಿಶೀಘ್ರದಲ್ಲಿ ಕಾರ್ಯವನ್ನು ಪೂರ್ಣಗೊಳಿಸಲಿದ್ದೇವೆ ಎಂದು ತಿಳಿಸಿದರು.[ನಿಷ್ಕ್ರಿಯವಾಯ್ತು ಕಲಾಂರ ಸಾಮಾಜಿಕ ಜಾಲತಾಣ ಖಾತೆಗಳು]

ಇದೀಗ ಉಡಾವಣೆಗೆ ತಯಾರಾಗುತ್ತಿರುವ ಭವಿಷ್ಯದ ಹೈಪರ್ಸಾನಿಕ್ ಕ್ಷಿಪಣಿ ಕುರಿತು ಕಲಾಂ ಬಹು ದೊಡ್ಡ ಕನಸನ್ನು ಇಟ್ಟುಕೊಂಡಿದ್ದರು. ಆ ಕಾರಣಕ್ಕಾಗಿ ಅವರ ಕನಸಿನ ಕೂಸನ್ನು ಅವರ ಹೆಸರಿನಲ್ಲಿಯೇ ಉಡಾವಣೆ ಮಾಡಲು ನಿರ್ಣಯಿಸಿದ್ದೇವೆ ಎಂದರು.
ಬ್ರಹ್ಮಸ್ ನ ಪ್ರತಿಯೊಂದು ಭಾಗಗಳ ಸೃಷ್ಟಿಕರ್ತರು ಗುರುಗಳಾದ ಕಲಾಂ. ಇದು ಅವರ ಯೋಚನೆ, ಯೋಜನೆಯ ಫಲ. ಇದರಲ್ಲಿ ಜೀವಂತಿಕೆ, ಆತ್ಮ ಇದೆ ಎಂದಾದರೆ ಅದು ಕಲಾಂ ಅವರದದ್ದು ಎಂದು ಬಹಳ ಭಾವಪೂರ್ಣವಾಗಿ ಕಲಾಂ ಅವರ ಸಾಮರ್ಥ್ಯವನ್ನು ಮಿಶ್ರಾ ಅವರು ಕೊಂಡಾಡಿದರು.

ಸೂಪರ್ ಸಾನಿಕ್ ಕ್ಷಿಪಣಿಯ ತಯಾರಿಕೆಯಲ್ಲಿ ಹಲವಾರು ಯುವ ವಿಜ್ಞಾನಿಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸಾಕಷ್ಟು ಪರಿಶ್ರಮ ವಹಿಸುವರೆಂಬ ನಂಬಿಕೆ ಇದೆ ಹಾಗೂ ಇದು ಮುಂದಿನ ಪೀಳಿಗೆಗೆ ಮಾದರಿಯಾಗಲಿದೆ ಎಂಬ ವಿಶ್ವಾಸ ಇದೆ ಎಂದು ತಮ್ಮ ಗುಂಪಿನ ಕಾರ್ಯವೈಖರಿ ಕುರಿತು ಭರವಸೆ ವ್ಯಕ್ತಪಡಿಸಿದರು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications