ಅಕ್ಟೋಬರ್ನಲ್ಲಿ ಈರುಳ್ಳಿ ಬೆಲೆ 100 ರೂಪಾಯಿ!
ಬೆಂಗಳೂರು, ಜೂ.19: ಈರುಳ್ಳಿ ಬೆಲೆ ಮತ್ತೊಮ್ಮೆ ಏರಿಕೆಯಾಗಲಿದ್ದು ಅಕ್ಟೋಬರ್ ವೇಳೆಗೆ ಒಂದುಕೆ.ಜಿ ಈರುಳ್ಳಿ ಬೆಲೆ ನೂರು ರೂಪಾಯಿಗೆ ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ಪಂಡಿತರು ವಿಶ್ಲೇಷಿಸಿದ್ದಾರೆ.
ದೇಶದಲ್ಲಿ ಕಳೆದ ಅಕ್ಟೋಬರ್ನಲ್ಲಿ ಈರುಳ್ಳಿ ಬೆಲೆ ಕೆ.ಜಿಗೆ 100 ರೂಪಾಯಿ ಗಡಿ ದಾಟಿತ್ತು. ಈ ಬಾರಿಯೂ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಳವಾಗಲಿದೆ ಎನ್ನುವುದನ್ನು ಮನಗಂಡಿರುವ ಕೇಂದ್ರ ಸರ್ಕಾರ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಈರುಳ್ಳಿ ಬೆಲೆ ಏರಿಕೆಯನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಇದೀಗ ಕನಿಷ್ಠ ರಫ್ತು ದರ (ಎಮ್ಇಪಿ) ನಿಗದಿ ಮಾಡಿದೆ. ಈ ದರ ಪ್ರಕಾರ ಪ್ರತಿ ಟನ್ ಈರುಳ್ಳಿಗೆ 300 ಡಾಲರ್ (ಅಂದಾಜು 18 ಸಾವಿರ ರೂ) ನಿಗದಿ ಮಾಡಿದೆ. ಒಂದು ವೇಳೆ ರಫ್ತು ಮಾಡುವ ವೇಳೆ ಈ ದರ ಸಿಗದಿದ್ದರೆ, ಈರುಳ್ಳಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಬೇಕಾಗುತ್ತದೆ. ಹೀಗಾಗಿ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಬರಬಹುದು ಎನ್ನುವ ಲೆಕ್ಕಾಚಾರ ಸರ್ಕಾರದ್ದು.[ಕಳೆದ ಬಾರಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು ಹೇಗೆ?]
ಸರ್ಕಾರ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಈರುಳ್ಳಿ ಬೆಲೆ ಈ ವರ್ಷವು ಜಾಸ್ತಿಯಾಗಲಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಈರುಳ್ಳಿಯನ್ನು ಹೆಚ್ಚು ಬೆಳೆಯಲಾಗುತ್ತಿದ್ದು 2013-14ರಲ್ಲಿ 192 ಟನ್ ಈರುಳ್ಳಿ ಉತ್ಪಾದನೆಯಾಗಿತ್ತು.

ಮಾರ್ಚ್ ನಿಂದ ಮೇವರೆಗೆ ಬೇಸಿಗೆಯಲ್ಲಿ ಬಿದ್ದ ಅಕಾಲಿಕ ಮಳೆಯಿಂದಾಗಿ ಬೇಸಿಗೆ ಬೆಳೆ ಅಥವಾ ರಬಿ ಕ್ರಾಪ್ ಹಾಳಾಗಿದೆ. ದೇಶದ ಶೇ.50ರಷ್ಟು ಭಾಗ ಈರುಳ್ಳಿಯ ಬೇಸಿಗೆ ಬೆಳೆಯನ್ನು ಅವಲಂಬಿಸಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಈರುಳ್ಳಿ ಬಿತ್ತನೆ ಬೀಜದ ಬೆಲೆ ಶೇ.400 ರಷ್ಟು ಏರಿಕೆಯಾಗಿದೆ. ಹೀಗಾಗಿ ದೇಶದಲ್ಲಿ ಬಹಳಷ್ಟು ಈರುಳ್ಳಿ ಬೆಳೆಯುವ ರೈತರು ಬೀಜ ಬಿತ್ತನೆಯನ್ನು ಮಾಡಿಲ್ಲ. ಜೊತೆಗೆ ಈಗ ಮಾನ್ಸೂನ್ ಅಭಾವದಿಂದಾಗಿ ಈರುಳ್ಳಿ ಉತ್ಪಾದನೆ ಕಡಿಮೆಯಾಗಬಹುದು ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಇರಾಕ್ನಲ್ಲಿ ನಡೆಯುತ್ತಿರುವ ಕಲಹದಿಂದಾಗಿ ಡಿಸೇಲ್ ಬೆಲೆ ಹೆಚ್ಚಳವಾಗುವ ಸಾಧ್ಯತೆಯಿದೆ. ಒಂದು ವೇಳೆ ಹೀಗೆ ಏನಾದರೂ ಆದಲ್ಲಿ ಈರುಳ್ಳಿ ಬೆಲೆ ಮತ್ತಷ್ಟು ಏರಲಿದೆ.[ಇರಾಕ್ ಮರಣಮೃದಂಗ: ಅಪಹೃತ 39 ಭಾರತೀಯರ ಹತ್ಯೆ?]
"ಕಳೆದ ಮೂರು ದಿನಗಳ ಹಿಂದೆ 15 - 20 ರೂಪಾಯಿ ಇದ್ದ ಈರುಳ್ಳಿ ಬೆಲೆ ಈಗ 25-30 ರೂಪಾಯಿಗೆ ತಲುಪಿದೆ. ಸದ್ಯದಲ್ಲೇ ಬೆಲೆ ಹೆಚ್ಚಾಗಲಿದೆ. ಈರುಳ್ಳಿ ಬೆಳೆಯುವ ರಾಜ್ಯದಿಂದಲೇ ಸರಿಯಾಗಿ ಈರುಳ್ಳಿ ವಿತರಣೆ ಆಗುತ್ತಿಲ್ಲ"
ಅಬ್ದುಲ್ ಹಾಜಿಂ, ಕೆ.ಆರ್.ಮಾರುಕಟ್ಟೆ ಈರುಳ್ಳಿ ವಾಪಾರಸ್ಥರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು












Click it and Unblock the Notifications