ಮತ್ತೆ ಜನರಿಂದ ದೂರವಾಗುತ್ತಿರುವ ಈರುಳ್ಳಿ

ಮಹಾರಾಷ್ಟ್ರದ ನಾಸಿಕ್ ಮತ್ತು ಪುಣೆಯಿಂದ ಕರ್ನಾಟಕಕ್ಕೆ ಈರುಳ್ಳಿ ಸರಬರಾಜಾಗುತ್ತಿತ್ತು. ಆದರೆ, ಈ ಬಾರಿ ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆ ಸುರಿದ ಪರಿಣಾಮ ಬೆಳೆ ಹಾನಿಯಾಗಿದ್ದು, ಹೊಸ ಈರುಳ್ಳಿ ಮಾರುಕಟ್ಟೆಗೆ ಬರುತ್ತಿಲ್ಲ. ಆದ್ದರಿಂದ ಈರುಳ್ಳಿ ಬೆಲೆ ಕೆ.ಜಿ.ಗೆ 70 ರೂ. ಆಗಿದೆ.
ಬುಧವಾರ ಬೆಂಗಳೂರಿನ ಹಾಪ್ಕಾಮ್ಸ್ ಗಳಲ್ಲಿ ಕೆ.ಜಿ.ಈರುಳ್ಳಿ ಬೆಲೆ 75 ರೂ. ಆಗಿದ್ದರೆ, ಚಿಲ್ಲರೆ ಮಾರಾಟ ಮಳಿಗೆ ಮತ್ತು ಮಾಲ್ ಗಳಲ್ಲಿ 66 ರಿಂದ 70 ರೂ. ಆಗಿದೆ. ಮುಂದಿನ ದಿನಗಳಲ್ಲಿ ಬೆಲೆ ಮತ್ತಷ್ಟು ಏರಿಕೆ ಆಗಬಹುದು ಎಂದು ವರ್ತಕರು ಹೇಳುತ್ತಿದ್ದಾರೆ.
ಚಿತ್ರದುರ್ಗ, ಚಳ್ಳಕೆರೆ ಹಾಗೂ ಹೊಸದುರ್ಗದಿಂದ ಮಂಗಳವಾರ ಯಶವಂತಪುರ ಮಾರುಕಟ್ಟೆಗೆ 80 ರಿಂದ 90 ಸಾವಿರ ಮೂಟೆ ಈರುಳ್ಳಿ ಬಂದಿದೆ. ಆದರೆ, ಹುಬ್ಬಳ್ಳಿ, ಗದಗ ಸೇರಿದಂತೆ ಉತ್ತರ ಕರ್ನಾಟಕದ ವಿವಿಧೆಡೆಗಳಿಂದ ಬರಬೇಕಾದ ಈರುಳ್ಳಿ ಮಾರುಕಟ್ಟೆಗೆ ತಲುಪಿಲ್ಲ.
ಮಹಾರಾಷ್ಟ್ರದ ನಾಸಿಕ್ ಮತ್ತು ಪುಣೆಯಿಂದ ಕರ್ನಾಟಕಕ್ಕೆ ಈರುಳ್ಳಿ ಸರಬರಾಜಾಗಲು ಒಂದು ತಿಂಗಳು ಕಾಯಬೇಕಾಗಿದೆ ಆದ್ದರಿಂದ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಈರುಳ್ಳಿ ಬೆಲೆ ಮತ್ತಷ್ಟು ಹೆಚ್ಚಾಗಬಹುದು ಎಂದು ಈರುಳ್ಳಿ ವ್ಯಾಪಾರಿಗಳು ಹೇಳಿದ್ದಾರೆ. (ಈರುಳ್ಳಿ ಬೆಲೆ ಎಷ್ಟಾದರೂ ಆ ಗ್ರಾಮಸ್ಥರಿಗೆ ಕಣ್ಣೀರು ಬರಲ್ಲ!)
ಬೆಂಗಳೂರಿನಲ್ಲಿ ಒಂದೊಂದು ಕಡೆ ಈರುಳ್ಳಿಗೆ ಒಂದೊಂದು ಬೆಲೆ ನಿಗದಿಯಾಗಿದೆ. ರೈತರಿಂದ ನೇರವಾಗಿ ಹಾಪ್ಕಾಮ್ಸ್ ಮೂಲಕ ಗ್ರಾಹಕರಿಗೆ ತಲುಪುವ ಈರುಳ್ಳಿ ಬೆಲೆಯೇ ಮಾರುಕಟ್ಟೆ ಬೆಲೆಗಿಂತ ಹೆಚ್ಚಾಗಿದೆ. ಮಾಲ್ ಹಾಗೂ ತರಕಾರಿ ಮಾರುಕಟ್ಟೆಗಳಲ್ಲಿ ಹಾಪ್ಕಾಮ್ಸ್ ಗಿಂತ ಕಡಿಮೆ ದರವಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಹೊಸ ಈರುಳ್ಳಿ ಸರಬರಾಜು ಆಗುವ ತನಕ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗುವುದಿಲ್ಲ ಎಂದು ಎಪಿಎಂಸಿ ವರ್ತರಕ ಸಂಘದ ಅಧ್ಯಕ್ಷ ಬಿ.ಎಲ್.ಶಂಕರಪ್ಪ ಹೇಳಿದ್ದಾರೆ. ಆದ್ದರಿಂದ ಈರುಳ್ಳಿ ಖರೀದಿ ಮಾಡುವ ಮೊದಲೇ ಹೆಚ್ಚು ಹಣ ಜೇಬಿನಲ್ಲಿರಲಿ. (ಪಿಟಿಐ ಚಿತ್ರ)
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications