Onion Price Hike: 70 ರೂಪಾಯಿ ದಾಟಿದ ಈರುಳ್ಳಿ ಬೆಲೆ: ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಸಾಧ್ಯತೆ!
Onion Price Hike: ಟೊಮೆಟೋ ಬೆಲೆ ಗಗನಕ್ಕೇರಿದ ನಂತರ ಈಗ ಈರುಳ್ಳಿ ದೇಶಾದ್ಯಂತ ಹೆಚ್ಚು ಸದ್ದು ಮಾಡುತ್ತಿದೆ. ಕರ್ನಾಟಕದಲ್ಲಿ ಒಂದು ವಾರದಲ್ಲೇ ಈರುಳ್ಳಿ ಬೆಲೆ 75 ರೂಪಾಯಿ ತಲುಪಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಕರ್ನಾಟಕ, ಮಹಾರಾಷ್ಟ್ರದಲ್ಲಿ ಕಡಿಮೆ ಮಳೆಯಾಗಿದ್ದು ಈರುಳ್ಳಿ ಉತ್ಪಾದನೆ ಮೇಲೆ ಭಾರಿ ಪರಿಣಾಮ ಬೀರಿದ್ದು ಪೂರೈಕೆ ತೀವ್ರ ಪ್ರಮಾಣದಲ್ಲಿ ಕುಸಿತ ಕಂಡಿದ್ದು ಬೆಲೆ ಏರಿಕೆಗೆ ಕಾರಣವಾಗಿದೆ. ಈ ವೇಳೆಗಾಗಲೆ ಮಾರುಕಟ್ಟೆಗೆ ಹೊಸ ಈರುಳ್ಳಿ ಹೆಚ್ಚಿನ ಪ್ರಮಾಣದಲ್ಲಿ ಬರಬೇಕಿತ್ತು, ಆದರೆ ಕಳೆದ ಒಂದು ವಾರದಿಂದ ಈರುಳ್ಳಿ ಆವಕದಲ್ಲಿ ಭಾರಿ ಕುಸಿತ ಕಂಡಿದೆ.

ವರದಿಗಳ ಪ್ರಕಾರ, ಒಂದು ವಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಈರುಳ್ಳಿ ಪ್ರತಿ ಕಿಲೋಗ್ರಾಂಗೆ 40 ರಿಂದ 50 ಪ್ರತಿಶತದಷ್ಟು ಏರಿಕೆ ಕಂಡಿದೆ. ಭಾನುವಾರ, ಕೆಲವು ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ (HOPCOMPS) ಮಳಿಗೆಗಳಲ್ಲಿ ಈರಳ್ಳಿಯನ್ನು ಕೆಜಿಗೆ 75 ರೂಪಾಯಿಯಂತೆ ಮಾರಾಟ ಮಾಡಿದ್ದರೆ, ಕಳೆದ ವಾರದಲ್ಲಿ, ಈರುಳ್ಳಿ ಬೆಲೆ ಕೆಜಿಗೆ ₹ 40 ರಿಂದ ₹ 45 ರ ನಡುವೆ ಇತ್ತು.
ಅತಿ ಹೆಚ್ಚು ಈರುಳ್ಳಿ ಬೆಳೆಯುವ ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲವಿರುವುದು ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ರಬಿ ಸ್ಟಾಕ್ ಕಡಿದಾದ ಕುಸಿತವನ್ನು ಕಂಡಿದ್ದರಿಂದ ಮತ್ತು ತಾಜಾ ಖಾರಿಫ್ ಸ್ಟಾಕ್ ಇನ್ನೂ ಬರದ ಕಾರಣ ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ದೇಶಾದ್ಯಂತ ದರ ಹೆಚ್ಚಳ
ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಈರುಳ್ಳಿ ಬೆಲೆ ಖರೀದಿದಾರರನ್ನು ಕಂಗಾಲಾಗಿಸಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ನವದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಈರುಳ್ಳಿಯ ಗರಿಷ್ಠ ಬೆಲೆ ಪ್ರತಿ ಕಿಲೋಗ್ರಾಂಗೆ ₹ 70 - ₹90 ಕ್ಕೆ ಏರಿದೆ. ಡಿಸೆಂಬರ್ವರೆಗೆ ಬೆಲೆ ಹೆಚ್ಚಳವಾಗುವ ಸಾಧ್ಯತೆಯಿದೆ.
ಬೆಲೆ ನಿಯಂತ್ರಣಕ್ಕೆ ಮುಂದಾದ ಕೇಂದ್ರ
ಬೆಲೆಯಲ್ಲಿ ತೀವ್ರ ಏರಿಕೆಯಾಗಿರುವ ರಾಜ್ಯಗಳಲ್ಲಿ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಗಳಲ್ಲಿ ಈರುಳ್ಳಿಯನ್ನು ಬಫರ್ ಸ್ಟಾಕ್ನಿಂದ ಬಿಡುಗಡೆ ಮಾಡಲಾಗುತ್ತಿದೆ ಎಂದು ಕೇಂದ್ರ ಗ್ರಾಹಕ ಸಚಿವಾಲಯ ತಿಳಿಸಿದೆ. ಆಗಸ್ಟ್ ಮಧ್ಯದಿಂದ, ಸುಮಾರು 1.7 ಲಕ್ಷ ಟನ್ಗಳಷ್ಟು ಬಫರ್ ಈರುಳ್ಳಿಯನ್ನು 22 ರಾಜ್ಯಗಳಲ್ಲಿ ವಿವಿಧ ಸ್ಥಳಗಳಲ್ಲಿ ಬಿಡುಗಡೆ ಮಾಡಲಾಗಿದೆ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಅಕ್ಟೋಬರ್ 29 ರಿಂದ ಡಿಸೆಂಬರ್ 31, 2023 ರವರೆಗೆ ಅನ್ವಯವಾಗುವಂತೆ ಈರುಳ್ಳಿ ರಫ್ತಿಗೆ ಎಫ್ಒಬಿ ಆಧಾರದ ಮೇಲೆ ಮೆಟ್ರಿಕ್ ಟನ್ (MT) ಗೆ $800 ರ ಕನಿಷ್ಠ ರಫ್ತು ಬೆಲೆಯನ್ನು (MEP) ಕೇಂದ್ರವು ಸೂಚಿಸಿದೆ.
ಈರುಳ್ಳಿ ರಫ್ತು ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ಈರುಳ್ಳಿಯ ಸಂಗ್ರಹವನ್ನು ಪ್ರಮಾಣವನ್ನು ಹೆಚ್ಚಿಸಿ ಕೈಗೆಟುಕುವ ಬೆಲೆಯಲ್ಲಿ ದೇಶೀಯ ಗ್ರಾಹಕರಿಗೆ ಸಾಕಷ್ಟು ಈರುಳ್ಳಿ ಲಭ್ಯತೆಯನ್ನು ಕಾಪಾಡಿಕೊಳ್ಳಲು ಯೋಜಿಸಿದೆ.
ಈರುಳ್ಳಿ ರಫ್ತಿನ ಮೇಲೆ ಎಂಇಪಿ ಹೇರುವ ನಿರ್ಧಾರದ ಜೊತೆಗೆ, ಕೇಂದ್ರವು ಬಫರ್ಗಾಗಿ ಹೆಚ್ಚುವರಿ 2 ಲಕ್ಷ ಟನ್ ಈರುಳ್ಳಿಯನ್ನು ಈಗಾಗಲೇ ಸಂಗ್ರಹಿಸಿರುವ 5 ಲಕ್ಷ ಟನ್ಗಳಿಗಿಂತ ಹೆಚ್ಚಿನದನ್ನು ಸಂಗ್ರಹಿಸುವುದಾಗಿ ಘೋಷಿಸಿದೆ.
ಬಫರ್ನಿಂದ ಈರುಳ್ಳಿಯನ್ನು ದೇಶಾದ್ಯಂತದ ಪ್ರಮುಖ ಬಳಕೆ ಕೇಂದ್ರಗಳಲ್ಲಿ ಆಗಸ್ಟ್ನ ಎರಡನೇ ವಾರದಿಂದ ನಿರಂತರವಾಗಿ ವಿಲೇವಾರಿ ಮಾಡಲಾಗಿದೆ ಮತ್ತು ಎನ್ಸಿಸಿಎಫ್ ಮತ್ತು ನಾಫೆಡ್ ನಿರ್ವಹಿಸುವ ಮೊಬೈಲ್ ವ್ಯಾನ್ಗಳ ಮೂಲಕ ಚಿಲ್ಲರೆ ಗ್ರಾಹಕರಿಗೆ 25/ಕೆಜಿಗೆ ಸರಬರಾಜು ಮಾಡಲಾಗಿದೆ. ಇಲ್ಲಿಯವರೆಗೆ ಸುಮಾರು 1.70 ಲಕ್ಷ ಮೆಟ್ರಿಕ್ ಟನ್ ಈರುಳ್ಳಿಯನ್ನು ಬಫರ್ನಿಂದ ವಿಲೇವಾರಿ ಮಾಡಲಾಗಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications