ನಮ್ಮ ಬೆಂಗಳೂರು ಪ್ರಶಸ್ತಿ 2019ಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 31 : ಪ್ರತಿಫಲಕ್ಕೆ ಆಸೆಪಡದೆ ಸರಿಯಾದ ಮಾರ್ಗದಲ್ಲಿ ಸಾಗುತ್ತ ತಮ್ಮ ಕರ್ತವ್ಯ ನಿಭಾಯಿಸುತ್ತಿರುವ ಎಲೆಮರೆಯ ಕಾಯಿಗಳಂಥ ವ್ಯಕ್ತಿಗಳನ್ನು ಗುರುತಿಸಿ ಅಂಥವರಿಗೆ ಪ್ರತಿಷ್ಠಿತ 'ನಮ್ಮ ಬೆಂಗಳೂರು ಪ್ರಶಸ್ತಿ' ನೀಡಲು ಅರ್ಹ ಬೆಂಗಳೂರಿಗರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶುಕ್ರವಾರ ಫೆಬ್ರವರಿ 1ರಂದು ನಗರದ ಗೋಲ್ಡ್ ಫಿಂಚ್ ಹೋಟೆಲ್ನಲ್ಲಿ ನಮ್ಮ ಬೆಂಗಳೂರು ಅವಾರ್ಡ್ಸ್ ಟ್ರಸ್ಟ್ ಸುದ್ದಿಗೋಷ್ಠಿ ಕರೆದಿದ್ದು ನಮ್ಮ ಬೆಂಗಳೂರು ಪ್ರಶಸ್ತಿಯ 10ನೇ ಆವೃತ್ತಿಯ ಬಗ್ಗೆ ಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಿದೆ.
ಈ ಬಾರಿ ಆನ್ಲೈನ್ ಮೂಲಕ ಮಾತ್ರವೇ ಪ್ರಶಸ್ತಿಗೆ ನೊಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ನಮ್ಮ ಬೆಂಗಳೂರು ಅವಾರ್ಡ್ಸ್ ಟ್ರಸ್ಟ್ ಹೇಳಿದೆ. ಪ್ರತಿಫಲಾಪೇಕ್ಷೆಯಿಲ್ಲದೆ ಬೆಂಗಳೂರಿನ ಏಳ್ಗೆಗಾಗಿ ತುಡಿಯುವ ನಿಜವಾದ ಹೀರೋಗಳನ್ನು ಗುರುತಿಸಿ ಅವರಿಗೆ 'ಧನ್ಯವಾದ' ಅರ್ಪಿಸುವ ಪ್ರಯತ್ನ ಇದಾಗಿದೆ.

ವರ್ಷದ ವ್ಯಕ್ತಿ, ರೈಸಿಂಗ್ ಸ್ಟಾರ್ ಆಫ್ ಬೆಂಗಳೂರು, ಮಾಧ್ಯಮದ ಸಾಧಕ, ಸೋಷಿಯಲ್ ಎಂಟರ್ಪ್ರನರ್ ಆಫ್ ದಿ ಇಯರ್, ವರ್ಷದ ಸರ್ಕಾರಿ ನೌಕರ, 'ನಮ್ಮ ಬೆಂಗಳೂರಿಗ' ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ಈಗಾಗಲೇ ಆನ್ಲೈನ್ ನೋಂದಾವಣಿ ಆರಂಭವಾಗಿದೆ. ಫೆಬ್ರವರಿ 28ರ ವರೆಗೆ ನೋಂದಾವಣಿ ಮಾಡಿಕೊಳ್ಳಬಹುದಾಗಿದೆ.
ಕಳೆದ ಒಂಬತ್ತು ಆವೃತ್ತಿಗಳಲ್ಲಿ 'ನಮ್ಮ ಬೆಂಗಳೂರು ಪ್ರಶಸ್ತಿ'ಗೆ 2.58 ಲಕ್ಷ ಜನ ನೋಂದಾವಣಿ ಮಾಡಿಕೊಂಡಿದ್ದರು. 261 ಮಂದಿ ಅಂತಿಮ ಸುತ್ತಿಗೆ ಆಯ್ಕೆ ಆಗಿದ್ದರು. ಹಾಗೂ 87 ಪ್ರಶಸ್ತಿಗಳನ್ನು ಈವರೆಗೆ ನೀಡಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು ಎಂದು 'ನಮ್ಮ ಬೆಂಗಳೂರು ಪ್ರಶಸ್ತಿ'ಯನ್ನು ಪರಿಗಣಿಸಲಾಗುತ್ತದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bda: ಬಿಡಿಎ ಮುಕ್ತ ಸಂವಾದದಿಂದ ಸೈನಿಕರ ಸಮಸ್ಯೆಗೆ ಪರಿಹಾರ: ಬೆಂಗಳೂರು ಆಸ್ತಿದಾರರಿಗೆ ಇಲ್ಲಿದೆ ಗುಡ್ನ್ಯೂಸ್ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ












Click it and Unblock the Notifications