ನಂದಿಬೆಟ್ಟದ ಅತಿಥಿಗೃಹವನ್ನು ಆನ್ ಲೈನ್ ನಲ್ಲಿ ಬುಕ್ ಮಾಡಿ
ಬೆಂಗಳೂರು, ಆ.9 : ನ೦ದಿ ಬೆಟ್ಟದಲ್ಲಿ ವಸತಿ ಸಮಸ್ಯೆ ನಿವಾರಿಸಲು ತೋಟಗಾರಿಕಾ ಇಲಾಖೆ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಜಾರಿಗೊಳಿಸಿದೆ ಎಂದು ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಅತಿಥಿ ಗೃಹವನ್ನು ನೀವು ಈಗ ಆನ್ ಲೈನ್ ಮೂಲಕ ಕಾಯ್ದಿರಿಸಬಹುದಾಗಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಸಚಿವ ಶಾಮನೂರು ಶಿವಶಂಕರಪ್ಪ ನಂದಿಗಿರಿಧಾಮದಲ್ಲಿ ಅತಿಥಿಗೇಹ ಕಾಯ್ದಿರಿಸುವಿಕೆಗೆ ಈಗ ಆನ್ ಲೈನ್ ವ್ಯವಸ್ಥೆ ಆಳವಡಿಸಲಾಗಿದೆ ಎಂದು ಹೇಳಿದರು. ನಂದಿಬೆಟ್ಟದಲ್ಲಿ ಉಂಟಾಗುತ್ತಿದ್ದ ವಸತಿ ಸಮಸ್ಯೆಯನ್ನು ನಿವಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರು http://nandihillsreservations.in/ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಅಲ್ಲಿನ ಅತಿಥಿಗೃಹವನ್ನು ಕಾಯ್ದಿರಿಸಬಹುದಾಗಿದೆ. ಅತಿಥಿ ಗೃಹದ ದರ, ವ್ಯವಸ್ಥೆ ಕುರಿತ ಎಲ್ಲಾ ಮಾಹಿತಿ ವೆಬ್ ಸೈಟ್ ನಲ್ಲಿ ಲಭ್ಯವಿದೆ ಎಂದು ಸಚಿವರು ತಿಳಿಸಿದರು.
ದರ ಪಟ್ಟಿ ಹೀಗಿದೆ : ನಂದಿಬೆಟ್ಟದ ಅತಿಥಿ ಗೃಹದ ದರ ಪಟ್ಟಿಗಳ ವಿವರ ಈ ರೀತಿ ಇದೆ. ತೆರಿಗೆ ಹೊರತು ಪಡಿಸಿ ಒಂದು ದಿನದ ದರಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ವಿವಿಐಪಿ ಕೊಠಡಿ -1,500, ವಿಐಪಿ ಕುಟೀರ - 1000, ಕೊಠಡಿ - 750, ಒಂದು ವಿವಿಐಪಿ ಸಭಾಂಗಣ -500 ರೂ. ಹಾಗೂ ಒಂದು ವಿಐಪಿ ಡೈನಿಂಗ್ ಹಾಲ್ 900 ರೂ. [ಉಳಿದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ]
ಕರ್ನಾಟಕದ ಪ್ರಖ್ಯಾತ ಗಿರಿಧಾಮಗಳಲ್ಲಿ ಒಂದಾಗಿರು ನಂದಿಬೆಟ್ಟ ಸಮುದ್ರ ಮಟ್ಟದಿಂದ 4850 ಅಡಿಗಳ ಮೇಲಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿಬೆಟ್ಟಕ್ಕೆ ಚಿಕ್ಕಬಳ್ಳಾಪುರ ಪಟ್ಟಣದಿ೦ದ 10 ಕಿ.ಮೀ ಸಾಗಬೇಕು. ಬೆ೦ಗಳೂರು ನಗರದಿ೦ದ ವೀಕೆಂಡ್ ಕಳೆಯಲು ಹಲವರು ನಂದಿಬೆಟ್ಟಕ್ಕೆ ತೆರಳುತ್ತಾರೆ. [ನಂದಿಬೆಟ್ಟದ ಬಗ್ಗೆ ಹೆಚ್ಚಿನ ಮಾಹಿತಿ]
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications