ಕ್ರಿಕೆಟ್ ಬೆಟ್ಟಿಂಗ್ ಆರೋಪಿಗಳಿಗೆ ಸಹಕರಿಸಿದ ಪೊಲೀಸ್ ಪೇದೆ ಅಮಾನತು
ಬೆಂಗಳೂರು, ಮಾರ್ಚ್ 09: ಆನ್ಲೈನ್ ಆಪ್ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಆರೋಪಿಗಳಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಉಪ್ಪಾರಪೇಟೆಯ ಪೊಲೀಸ್ ಕಾನ್ಸ್ಟೇಬಲ್ ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಶಿವಕುಮಾರ್ ಅಮಾನತಿಗೆ ಒಳಪಟ್ಟ ಪೊಲೀಸ್ ಕಾನ್ಸ್ಟೇಬಲ್. uckland aces v/s otago volts ಬಿಗ್ ಬ್ಯಾಶ್ ಮ್ಯಾಚ್ ಆಪ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತತಿದ್ದ ಆರು ಮಂದಿ ಆರೋಪಿಗಳನ್ನು ನಂದಿನಿ ಬಡಾವಣೆ ಪೊಲೀಸರು ಬಂಧಿಸಿದ್ದರು. ಈ ವೇಳೆ ಹನ್ನೊಂದು ಸಾವಿರ ನಗದು, ಆರು ಮೊಬೈಲ್ ವಶಪಡಿಸಿಕೊಂಡಿದ್ದರು. ಆರೋಪಿಗಳ ವಿಚಾರಣೆ ವೇಳೆ ಪೊಲೀಸ್ ಕಾನ್ಸ್ಟೇಬಲ್ ಶಿವಕುಮಾರ್ ಹೆಸರು ಬಾಯಿಬಿಟ್ಟಿದ್ದರು.
Recommended Video
ಬೆಟ್ಟಿಂಗ್ ಆಡಲು ಆರೋಪಿಗಳಿಗೆ ಸಹಕರಿಸುತ್ತಿದ್ದ ಸಂಗತಿ ಬೆಳಕಿಗೆ ಬಂದಿತ್ತು. ಈ ಕುರಿತು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಅವರು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ ಅವರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಕಾನ್ಸ್ಟೇಬಲ್ ಶಿವಕುಮಾರ್ ನನ್ನು ಅಮಾನತು ಮಾಡಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ ಆದೇಶ ಮಾಡಿದ್ದಾರೆ.