"ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ 120ರುಗೆ ನಿಗದಿ ಪಡಿಸಿ"
ಬೆಂಗಳೂರು, ಮಾ. 06: ಕರ್ನಾಟಕದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ನಿಗದಿಪಡಿಸಲು ಆಗ್ರಹಿಸಲಾಗಿದೆ. ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಮಲ್ಟಿಪೆಕ್ಸ್ ಚಿತ್ರಮಂದಿರದ ಪ್ರದರ್ಶಕರು ಟಿಕೆಟ್ ದರವನ್ನು ಸರಿಯಾಗಿ ನಿಗದಿ ಪಡಿಸಿಲ್ಲ. 120 ರು ನಿಂದ 450 ರು ತನಕ ಟಿಕೆಟ್ ಬೆಲೆ ಇದೆ. ಕನ್ನಡ ಸಿನಿಮಾ ಟಿಕೆಟ್ ಬೆಲೆ ವಾರದ ದಿನಗಳಲ್ಲಿ ಮಾತ್ರ 120 ರು ನಷ್ಟಿರುತ್ತದೆ.
ವಾರಾಂತ್ಯದಲ್ಲಿ ಟಿಕೆಟ್ ದರದಲ್ಲಿ ಭಾರಿ ವ್ಯತ್ಯಾಸ ಕಂಡು ಬರುತ್ತದೆ. ಇದು ಜನ ಸಾಮಾನ್ಯರಿಗೆ ಭಾರಿ ತೊಂದರೆ ಉಂಟು ಮಾಡುತ್ತಿದೆ. ಸರಿಯಾದ ಕಲೆಕ್ಷನ್ ಇಲ್ಲ ಎಂದು ಹೇಳಿ ಪ್ರದರ್ಶಕರು ಕನ್ನಡ ಚಿತ್ರಗಳನ್ನು ನಿರ್ಲಕ್ಷಿಸುತ್ತಿದ್ದಾರೆ. [ಕಾಂಗ್ರೆಸ್ ಸರ್ಕಾರದಿಂದ 'ಜನತಾ ಥಿಯೇಟರ್' ಸ್ಥಾಪನೆ]

ತಮಿಳುನಾಡಿನಲ್ಲಿ ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ಬೆಲೆ ಗರಿಷ್ಠ 120 ರು ನಷ್ಟಿದೆ. ಇದು ಎಲ್ಲಾ ಸಿನಿಮಾ ಹಾಗೂ ವಾರದ ಎಲ್ಲಾ ದಿನಗಳಿಗೂ ಅನ್ವಯವಾಗುತ್ತದೆ. ಇದೇ ರೀತಿ ಏಕರೂಪ ಟಿಕೆಟ್ ನಿಗದಿ ನಿಯಮವನ್ನು ಕರ್ನಾಟಕದಲ್ಲೂ ಜಾರಿಗೊಳಿಸಬೇಕು. [ಅಗ್ಗದ ದರದಲ್ಲಿ ಕೇಬಲ್ ಸೇವೆ ನೀಡಲಿದೆ ಸರ್ಕಾರ]
ವಾರದ ಎಲ್ಲಾ ದಿನಗಳಲ್ಲಿ ಮಲ್ಟಿಪ್ಲೆಕ್ಸ್ ಗಳಲ್ಲಿ ಒಂದೇ ರೂಪದ ಟಿಕೆಟ್ ದರವನ್ನು ಜಾರಿಗೊಳಿಸುವಂತೆ ಈ ಮೂಲಕ ಮನವಿ ಸಲ್ಲಿಸಲಾಗುತ್ತಿದೆ ಎಂದು ಚಿತ್ರಕರ್ಮಿ ದಯಾಳ್ ಪದ್ಮನಾಭನ್ ಅವರು ತಮ್ಮ ಪಿಟೀಷನ್ ನಲ್ಲಿ ಹೇಳಿದ್ದಾರೆ.['ಆಕ್ಟರ್' ಅಂತರಂಗ ಕಂಡ ವಿಮರ್ಶಕರು ನೀಡಿದ ಮಾರ್ಕ್ಸ್ ಎಷ್ಟು?]
ದಯಾಳ್ ಪದ್ಮನಾಭನ್ ಅವರ ಆನ್ ಲೈನ್ ಅರ್ಜಿಗೆ ನಿರ್ಮಾಪಕ ಕೆಎಂ ವೀರೇಶ್, ನಟ ನವೀನ್ ಕೃಷ್ಣ, ಧನಂಜಯ್ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ದಯಾಳ್ ಅವರ ಮನವಿಗೆ ಸಮ್ಮತಿಸುವವರು ಆನ್ ಲೈನ್ ಅರ್ಜಿಗೆ ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications