"ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ 120ರುಗೆ ನಿಗದಿ ಪಡಿಸಿ"
ಬೆಂಗಳೂರು, ಮಾ. 06: ಕರ್ನಾಟಕದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ನಿಗದಿಪಡಿಸಲು ಆಗ್ರಹಿಸಲಾಗಿದೆ. ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಮಲ್ಟಿಪೆಕ್ಸ್ ಚಿತ್ರಮಂದಿರದ ಪ್ರದರ್ಶಕರು ಟಿಕೆಟ್ ದರವನ್ನು ಸರಿಯಾಗಿ ನಿಗದಿ ಪಡಿಸಿಲ್ಲ. 120 ರು ನಿಂದ 450 ರು ತನಕ ಟಿಕೆಟ್ ಬೆಲೆ ಇದೆ. ಕನ್ನಡ ಸಿನಿಮಾ ಟಿಕೆಟ್ ಬೆಲೆ ವಾರದ ದಿನಗಳಲ್ಲಿ ಮಾತ್ರ 120 ರು ನಷ್ಟಿರುತ್ತದೆ.
ವಾರಾಂತ್ಯದಲ್ಲಿ ಟಿಕೆಟ್ ದರದಲ್ಲಿ ಭಾರಿ ವ್ಯತ್ಯಾಸ ಕಂಡು ಬರುತ್ತದೆ. ಇದು ಜನ ಸಾಮಾನ್ಯರಿಗೆ ಭಾರಿ ತೊಂದರೆ ಉಂಟು ಮಾಡುತ್ತಿದೆ. ಸರಿಯಾದ ಕಲೆಕ್ಷನ್ ಇಲ್ಲ ಎಂದು ಹೇಳಿ ಪ್ರದರ್ಶಕರು ಕನ್ನಡ ಚಿತ್ರಗಳನ್ನು ನಿರ್ಲಕ್ಷಿಸುತ್ತಿದ್ದಾರೆ. [ಕಾಂಗ್ರೆಸ್ ಸರ್ಕಾರದಿಂದ 'ಜನತಾ ಥಿಯೇಟರ್' ಸ್ಥಾಪನೆ]

ತಮಿಳುನಾಡಿನಲ್ಲಿ ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ಬೆಲೆ ಗರಿಷ್ಠ 120 ರು ನಷ್ಟಿದೆ. ಇದು ಎಲ್ಲಾ ಸಿನಿಮಾ ಹಾಗೂ ವಾರದ ಎಲ್ಲಾ ದಿನಗಳಿಗೂ ಅನ್ವಯವಾಗುತ್ತದೆ. ಇದೇ ರೀತಿ ಏಕರೂಪ ಟಿಕೆಟ್ ನಿಗದಿ ನಿಯಮವನ್ನು ಕರ್ನಾಟಕದಲ್ಲೂ ಜಾರಿಗೊಳಿಸಬೇಕು. [ಅಗ್ಗದ ದರದಲ್ಲಿ ಕೇಬಲ್ ಸೇವೆ ನೀಡಲಿದೆ ಸರ್ಕಾರ]
ವಾರದ ಎಲ್ಲಾ ದಿನಗಳಲ್ಲಿ ಮಲ್ಟಿಪ್ಲೆಕ್ಸ್ ಗಳಲ್ಲಿ ಒಂದೇ ರೂಪದ ಟಿಕೆಟ್ ದರವನ್ನು ಜಾರಿಗೊಳಿಸುವಂತೆ ಈ ಮೂಲಕ ಮನವಿ ಸಲ್ಲಿಸಲಾಗುತ್ತಿದೆ ಎಂದು ಚಿತ್ರಕರ್ಮಿ ದಯಾಳ್ ಪದ್ಮನಾಭನ್ ಅವರು ತಮ್ಮ ಪಿಟೀಷನ್ ನಲ್ಲಿ ಹೇಳಿದ್ದಾರೆ.['ಆಕ್ಟರ್' ಅಂತರಂಗ ಕಂಡ ವಿಮರ್ಶಕರು ನೀಡಿದ ಮಾರ್ಕ್ಸ್ ಎಷ್ಟು?]
ದಯಾಳ್ ಪದ್ಮನಾಭನ್ ಅವರ ಆನ್ ಲೈನ್ ಅರ್ಜಿಗೆ ನಿರ್ಮಾಪಕ ಕೆಎಂ ವೀರೇಶ್, ನಟ ನವೀನ್ ಕೃಷ್ಣ, ಧನಂಜಯ್ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ದಯಾಳ್ ಅವರ ಮನವಿಗೆ ಸಮ್ಮತಿಸುವವರು ಆನ್ ಲೈನ್ ಅರ್ಜಿಗೆ ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications