ಕೋವಿಡ್; ಬೆಂಗಳೂರು ಉತ್ತರದಲ್ಲಿ ತೆರೆದ ಚಿತಾಗಾರ ಸಿದ್ಧ

ಬೆಂಗಳೂರು, ಏಪ್ರಿಲ್ 27; ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಶವ ಸಂಸ್ಕಾರ ಮಾಡುವುದು ಸವಾಲಾಗಿದೆ. ಈಗಿರುವ ಚಿತಾಗಾರಗಳ ಬಳಿ ಆಂಬ್ಯುಲೆನ್ಸ್‌ಗಳು ಸಾಲುಗಟ್ಟಿ ನಿಲ್ಲುತ್ತಿವೆ.

ಉತ್ತರ ಬೆಂಗಳೂರಿನ ತಾವರೆಕೆರೆಯ ಗಿಡ್ಡನಹಳ್ಳಿಯಲ್ಲಿ ತೆರೆದ ಚಿತಾಗಾರವನ್ನು ತಯಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ಇಲ್ಲಿ ಮಾಡಲಾಗುತ್ತದೆ.

ಬೆಂಗಳೂರಿನಲ್ಲಿ ಶವಗಳ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾದ ಹಿನ್ನಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಹೊಸ ಚಿತಾರಾರವನ್ನು ಆರಂಭಿಸುವುದಾಗಿ ಘೋಷಣೆ ಮಾಡಿದ್ದರು.

Open Air Crematorium Set Up At North Bengaluru

ಬೆಂಗಳೂರು ನಗರದಲ್ಲಿರುವ ವಿದ್ಯುತ್ ಚಿತಾಗಾರಗಳಲ್ಲಿ ಶವಗಳ ಅಂತ್ಯ ಸಂಸ್ಕಾರ ಸವಾಲಾಗಿದೆ. ಚಿತಾಗಾರಗಳ ಮುಂದೆ ಸೋಂಕಿತರ ಶವಗಳನ್ನು ಹೊತ್ತ ಅಂಬ್ಯಲೆನ್ಸ್ ಗಂಟೆಗಟ್ಟಲೇ ಕಾಯಬೇಕಾಗಿದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಸಂಬಂಧಿಕರು ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದರು. ಶವಗಳ ಅಂತ್ಯಸಂಸ್ಕಾರಕ್ಕೆ ಸಹ ವ್ಯವಸ್ಥೆ ಮಾಡಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದರು.

ಗಿಡ್ಡನಹಳ್ಳಿಯಲ್ಲಿರುವ ತೆರೆದ ಚಿತಾಗಾರದಲ್ಲಿ ಶವಗಳ ಅಂತ್ಯ ಸಂಸ್ಕಾರ ಮಾಡಲು ಅರಣ್ಯ ಇಲಾಕೆ ಕಟ್ಟಿಗೆಯನ್ನು ಪೂರೈಕೆ ಮಾಡಲಿದೆ. ಈ ಚಿತಾಗಾರದ ಸಮೀಪವೇ 40 ಶವಗಳ ಸಂಸ್ಕಾರ ಮಾಡುವ ಮತ್ತೊಂದು ಚಿತಾಗಾರವನ್ನು ಸಿದ್ದಗೊಳಿಸಲಾಗುತ್ತಿದೆ.

ಸೋಮವಾರ ಬೆಂಗಳೂರು ನಗರದಲ್ಲಿ 16,545 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 105 ಜನರು ಮೃತಪಟ್ಟಿದ್ದಾರೆ. ಇದುವರೆಗೂ ನಗರದಲ್ಲಿ ಮೃತಪಟ್ಟವರ ಸಂಖ್ಯೆ 5,905.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+