ಬಿಡಿಎ ಮೂಲೆ ನಿವೇಶನಗಳ ಬಹಿರಂಗ ಹರಾಜಿಗೆ ನಿರ್ಧಾರ
ಬಿಡಿಎ ಸ್ವಾಮ್ಯದ ಮೂಲೆ ನಿವೇಶನಗಳ ಬಹಿರಂಗ ಹರಾಜಿಗೆ ನಿರ್ಧಾರ. ವಿವಿಧ ಬಡಾವಣೆಗಳಲ್ಲಿರುವ ಮೂಲೆ ನಿವೇಶನಗಳು.
ಬೆಂಗಳೂರು, ಆಗಸ್ಟ್ 24: ವಿವಿಧ ಬಡಾವಣೆಗಳಲ್ಲಿ ಖಾಲಿ ಇರುವ ತನ್ನ ಸ್ವಾಮ್ಯದ ಮೂಲೆ ನಿವೇಶನಗಳನ್ನು ಮಾರಾಟ ಮಾಡಲು ಬಿಡಿಎ ಮುಂದಾಗಿದೆ. ಈ ಹಿಂದೆ ಆನ್ ಲೈನ್ ನಲ್ಲಿ ಈ ಮೂಲೆ ನಿವೇಶನಗಳನ್ನು ಮಾರಾಟ ಮಾಡಲು ಪ್ರಯತ್ನಿಸಲಾಗಿತ್ತು.
ಆದರೆ, ಆನ್ ಲೈನ್ ಹರಾಜಿಗೆ ಜನರು ನೀರಸ ಪ್ರತಿಕ್ರಿಯೆ ನೀಡಿದ್ದರಿಂದಾಗಿ ಇದೀಗ ಬಹಿರಂಗ ಹರಾಜಿನ ಮೂಲಕ ಈ ಸೈಟುಗಳ ಹರಾಜು ಮಾಡಲು ನಿರ್ಧರಿಸಲಾಗಿದೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ವಿವರಣೆ ನೀಡಿದ ಬಿಡಿಎ ಕಾರ್ಯದರ್ಶಿ ಬಸವರಾಜು, ''ಬಹಿರಂಗ ಹರಾಜು ಪ್ರಕ್ರಿಯೆಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸರ್ಕಾರದಿಂದ ಆದೇಶ ಬಂದ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು'' ಎಂದರು.
ಅವರ ಪ್ರಕಾರ, ಕಳೆದ ವರ್ಷ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಅಪನಗದೀಕರಣದಿಂದಾಗಿ, ಮೂಲೆ ನಿವೇಶನಗಳ ಮಾರಾಟ ಗಣನೀಯ ಮಟ್ಟದಲ್ಲಿ ಕುಸಿದಿದೆ. ಇದಕ್ಕೆ ಹೆಚ್ಚಿನ ಬೆಲೆ ಇರುವುದೇ ಕಾರಣ. ಅಪನಗದೀಕರಣಕ್ಕೂ ಮುಂಚೆ ಮೂಲೆ ನಿವೇಶನಗಳನ್ನು ಕೊಳ್ಳಲು ಜನರು ಮುಗಿಬೀಳುತ್ತಿದ್ದರು. ಈಗ, ಅದು ಕುಸಿದಿದೆ ಎಂದು ಅವರು ತಿಳಿಸಿದರು.
ಸಾಮಾನ್ಯವಾಗಿ, ಇತರ ನಿವೇಶನಗಳಿಗಿಂತ ಶೇ. 20ರಷ್ಟು ಹೆಚ್ಚು ಬೆಲೆಗಳನ್ನು ಮೂಲೆ ನಿವೇಶನಗಳು ಹೊಂದಿರುತ್ತವೆ ಎಂದು ಅವರು ತಿಳಿಸಿದರು.
ಎಲ್ಲೆಲ್ಲಿ ನಿವೇಶನ?
ಕೆಂಗೇರಿ, ಜ್ಞಾನ ಭಾರತಿ, ವಿಶ್ವಭಾರತಿ, ಅಂಜನಾಪುರ, ಎಚ್ ಬಿಆರ್ ಲೇಔಟ್, ಒಎಂಬಿಆರ್ ಲೇಔಟ್ ಮೊದಲಾದ ಕಡೆಗಳಲ್ಲಿರುವ ಮೂಲೆ ನಿವೇಶನಗಳು ಹರಾಜುಗೊಳ್ಳಲಿವೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications