ಎಚ್ಎಸ್ಆರ್ ಲೇಔಟ್ ವಾಹನ ಮುಕ್ತ 'ಓಪನ್ ಸ್ಟ್ರೀಟ್'
ಬೆಂಗಳೂರು, ಸೆ. 13: ಎಚ್ಎಸ್ಆರ್ ಲೇಔಟ್ ಬಡಾವಣೆ ನಾಗರಿಕರು, ಸ್ಥಳೀಯ ಸರ್ಕಾರೇತರ ಸಂಸ್ಥೆಗಳ ಮನವಿಗೆ ಪುರಸ್ಕರಿಸಿರುವ ಕರ್ನಾಟಕ ಸರ್ಕಾರ ಸೆಪ್ಟೆಂಬರ್ 20 ರಂದು ಬಡಾವಣೆಯ ಎಲ್ಲಾ ರಸ್ತೆಗಳನ್ನು ಓಪನ್ ಸ್ಟ್ರೀಟ್ ಮಾಡುವುದಾಗಿ ಘೋಷಿಸಿದೆ.
ಸೆ.20ರಂದು ಸರ್ಕಾರಿ ವಾಹನ ಹೊರತುಪಡಿಸಿ ಬೇರೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಬೆಳಗ್ಗೆ 6 ರಿಂದ ರಾತ್ರಿ 9 ಗಂಟೆ ತನಕ ಖಾಸಗಿ ವಾಹನಗಳ ಸಂಚಾರಕ್ಕೆ ಬ್ರೇಕ್ ಬೀಳಲಿದೆ. ಎಚ್ ಎಸ್ ಆರ್ ಲೇಔಟ್ ನ ಎಲ್ಲಾ 7 ಸೆಕ್ಟರ್ ಗಳ ರಸ್ತೆಗಳು ಓಪನ್ ಸ್ಟ್ರೀಟ್ ಆಗಲಿವೆ. ಸಂಚಾರ ದಟ್ಟಣೆ, ವಾಯುಮಾಲಿನ್ಯ ನಿಯಂತ್ರಿಸಲು ಈ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಏಕ್ ರೂಪ್ ಕೌರ್ ಅವರು ಹೇಳಿದ್ದಾರೆ.

ಓಪನ್ ಸ್ಟ್ರೀಟ್ ಯೋಜನೆಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಅಂದು ಬಿಎಂಟಿಸಿ ಬಸ್ ಗಳು ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ. ಕೆ.ಆರ್ ಮಾರುಕಟ್ಟೆ, ಮೆಜೆಸ್ಟಿಕ್, ಶಿವಾಜಿನಗರ, ಜಯನಗರ ಸೇರಿದಂತೆ ಉಳಿದೆಡೆಗೆ ಬಸ್ ಗಳು ಸಂಚರಿಸಲಿವೆ. ಉಳಿದಂತೆ ಕಸದ ವಾಹನ, ಆಂಬುಲೆನ್ಸ್, ನೀರಿನ ಟ್ಯಾಂಕರ್ ಸೇರಿದಂತೆ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದರು.
ಕಬ್ಬನ್ ಪಾರ್ಕ್ ನಲ್ಲಿ ಪ್ರತಿ ಭಾನುವಾರದಂದು ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವ ಕ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.ಈಗ ಓಪನ್ ಸ್ಟ್ರೀಟ್ ಗೆ ಉತ್ತಮ ಪ್ರತಿಕ್ರಿಯೆ ಬಂದರೆ ಉಳಿದ ಬಡಾವಣೆಗಳಲ್ಲೂ ಹಂತ ಹಂತವಾಗಿ ಜಾರಿಗೊಳಿಸಲಾಗುತ್ತದೆ. ಲಂಡನ್, ಕೇಪ್ ಟೌನ್ ಮುಂತಾದ ನಗರಗಳಲ್ಲಿ ಈ ಯೋಜನೆ ಯಶಸ್ವಿಯಾಗಿದೆ ಎಂದರು.
ಈ ಯೋಜನೆಗೆ ಡಿಯುಎಲ್ ಟಿ, ಬಿಎಂಟಿಸಿ, ನಗರ ಟ್ರಾಫಿಕ್ ಪೊಲೀಸ್, ಬಿಎಂಆರ್ ಸಿಎಲ್, ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಬಿಬಿಎಂಪಿ ಇನ್ನಿತರ ಇಲಾಖೆ ಹಾಗೂ ಸಂಸ್ಥೆಗಳು ಕೈಜೋಡಿಸಿವೆ.
ಹೆಚ್ಚಿನ ಮಾಹಿತಿಗಳಿಗಾಗಿ
* ಓಪನ್ ಸ್ಟ್ರೀಟ್ಸ್ ಬೆಂಗಳೂರು ವೆಬ್ ಸೈಟ್
* ಅರ್ಬನ್ ಟ್ರಾನ್ಸ್ ಪೋರ್ಟ್ ವೆಬ್ ಸೈಟ್
* ಮೈಬಿಎಂಟಿಸಿ
* ಸೈಕಲ್ ಡೇ ಫೇಸ್ ಬುಕ್ ನೋಡಿ
(ಒನ್ ಇಂಡಿಯಾ ಸುದ್ದಿ)
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications