ಆಪರೇಷನ್ ಅಲುಮೇಲಮ್ಮ ಖ್ಯಾತಿಯ ನಟ ಮನಿಷ್ ವಿರುದ್ಧ ಕೇಸ್
ಬೆಂಗಳೂರು, ಅಕ್ಟೋಬರ್ 14 : ಆಪರೇಷನ್ ಅಲುಮೇಲಮ್ಮ ಖ್ಯಾತಿಯ ನಟ ಮನಿಷ್ ರಿಷಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಸ್ವಂತ ಚಿಕ್ಕಮ್ಮನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಮನಿಷ್ ವಿರುದ್ಧ ಬಂದಿದೆ.
ಸುನಿ ಅವರ ನಿರ್ದೇಶನದ ಆಪರೇಷನ್ ಅಲುಮೇಲಮ್ಮ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಾಯಕ ರಿಷಿ ಅವರು ತಮ್ಮ, ಚಿಕ್ಕಮ್ಮ ವಿಕಲ ಚೇತನರಾಗಿರುವ ಶಾಲಿನಿ ಗುರುಮೂರ್ತಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಸವೇಶ್ವರನಗರದಲ್ಲಿರುವ ಮನೆಯಲ್ಲಿ ಈ ಘಟನೆ ನಡೆದಿದೆ.
ತಾತನ ಮನೆಯಲ್ಲೇ ರಿಷಿ ಮತ್ತು ಆತನ ತಂದೆ ತಾಯಿ ವಾಸವಿದ್ದು, ಶಾಲಿನಿಗೆ ಸ್ಟ್ಯಾಂಪ್ ಪೇಪರ್ಗೆ ಸಹಿ ಮಾಡಿ ಒಳಗೆ ಬರುವಂತೆ ಬೆದರಿಕೆ ಒಡ್ಡಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ರಿಷಿ ಜತೆಗೆ ತಾಯಿ ಅನಲಾ ಮತ್ತು ತಂದೆ ನಾಗರಾಜ್ ಸೇರಿ ಶಾಲಿನಿ ಮೇಲೆ ಹಲ್ಲೆ ನಡೆಸಿದ್ದಾರೆ.

ಶಾಲಿನಿ ತಂದೆ ಬೋರಯ್ಯನವರು ಸ್ಟ್ರೋಕ್ನಿಂದ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಲೆಂದು ಮನೆಗೆ ತೆರಳಿದ್ದಾರೆ. ಈ ವೇಳೆ, ಆಸ್ತಿ ಹಂಚಿಕೆಗಾಗಿ ಮಾತುಕತೆ ನಡೆದಿದೆ. ಸ್ಟಾಂಪ್ ಪೇಪರ್ ಮೇಲೆ ಸಹಿ ಹಾಕಲು ಶಾಲಿನಿ ಅವರಿಗೆ ಒತ್ತಾಯ ಮಾಡಲಾಗಿದೆ.
ಇದಕ್ಕೆ ಒಪ್ಪದ ಕಾರಣ ರಿಷಿ ಮತ್ತು ಆತನ ತಂದೆ ನಾಗರಾಜ್, ತಾಯಿ ಅನಲಾ ಅವರು ಶಾಲಿನಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಜಾರಿಯಲ್ಲಿದೆ.
-
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು











Click it and Unblock the Notifications