ವಿಧಾನ ಪರಿಷತ್ನಲ್ಲೂ ಆಡಿಯೋ ಪ್ರಕರಣದ್ದೇ ಸದ್ದು, ಕಲಾಪ ಬಲಿ
ಬೆಂಗಳೂರು, ಫೆಬ್ರವರಿ 11: ವಿಧಾನಸಭೆಯಲ್ಲಿ ಕಾವೇರಿದ ಚರ್ಚೆಗೆ ಕಾರಣವಾದ ಆಪರೇಷನ್ ಕಮಲ ಆಡಿಯೋ ಕ್ಲಿಪ್, ವಿಧಾನಪರಿಷತ್ನಲ್ಲೂ ಭಾರಿ ಸದ್ದು ಮಾಡಿತು.
ಮೇಲ್ಮನೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿಯು ಶಾಸಕರ ಖರೀದಿಗೆ ಇಳಿದಿದೆ. ಆ ಮೂಲಕ ಸದನವನ್ನು ಹರಾಜಿಗಿಟ್ಟಂತಾಗಿದೆ. ಇದರ ವಿರುದ್ಧ ತನಿಖೆ ಆಗಬೇಕು ಎಂದು ಆಡಳಿತ ಪಕ್ಷದ ಸದಸ್ಯರು ಒತ್ತಾಯಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯರು ನೀವೇನು ಸಾಚಾಗಳಾ? ಸತ್ಯ ಹರಿಶ್ಚಂದ್ರರಾ ಎಂದು ವಾಗ್ದಾಳಿ ಆರಂಭಿಸಿದರು. ಈ ಸಮಯ ಪರಸ್ಪರ ಬಿರುಸಿನ ಮಾತಿನ ಚಕಮಕಿ ನಡೆಯಿತು.

ಪ್ರಶ್ನೋತ್ತರ ವೇಳೆ ಇದಾಗಿದ್ದು, ಆಡಿಯೋ ಕ್ಲಿಪ್ ಬಗ್ಗೆ ಚರ್ಚಿಸಲು ನೀವು ನೊಟೀಸ್ ನೀಡಿಲ್ಲ ಎಂದು ಸಭಾಪತಿಗಳು ಆಡಳಿತ ಪಕ್ಷದ ಸದಸ್ಯರ ಮೇಲೆ ಗರಂ ಆದರು. ಆದರೂ ಸಹ ಗದ್ದಲ ಕಡಿಮೆ ಆಗಲಿಲ್ಲ.
ಪರಿಷತ್ನಲ್ಲಿ ಗದ್ದಲದ ಕಾರಣದಿಂದ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಎರಡು ಬಾರಿ ಕಲಾಪವನ್ನು ಮುಂದೂಡಿದರು ಆದರೂ ಸಹ ಗದ್ದಲ ಕಡಿಮೆ ಆಗದೆ ಅಂತಿಮವಾಗಿ ಕಲಾಪವನ್ನು ನಾಳೆಗೆ (ಮಂಗಳವಾರಕ್ಕೆ) ಮುಂದೂಡಲಾಯಿತು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications