ನಿಪಾಹ್ ವೈರಸ್ ಭೀತಿಯಿಂದ ಹಂದಿಗಳ ಸೆರೆ: ಬಿಬಿಎಂಪಿಗೆ ಲಾಭ
ಬೆಂಗಳೂರು, ಜೂನ್ 16: ನಗರಾದ್ಯಂತ ಎಲ್ಲೆಂದರಲ್ಲಿ ಓಡಾಡುವ ಹಂದಿಗಳನ್ನು ಬಿಬಿಎಂಪಿ ಸೆರೆಹಿಡಿಯುತ್ತದೆ. ಹಂದಿಗಳಿಂದ ನಿಪಾಹ್ ವೈರಸ್ ಬರಬಹುದೆಂಬ ಆತಂಕವೂ ಅವುಗಳನ್ನು ಸೆರೆ ಹಿಡಿಯಲು ಕಾರಣವಾಗಿದೆ. ಆದರೆ ಇದರಿಂದ ಬಿಬಿಎಂಪಿ ನಿರೀಕ್ಷಿಸದ ಆದಾಯ ಬರುತ್ತಿದೆ ಎನ್ನುವುದು ಮಾತ್ರ ಸತ್ಯ.
ಸೆರೆ ಹಿಡಿಯುವ ಕಾರ್ಯಾಚರಣೆಗೆ ಬಿಬಿಎಂಪಿಯು ಖರ್ಚು ಮಾಡುತ್ತಿಲ್ಲ ಬದಲಾಗಿ ಹಂದಿಗಳನ್ನು ಹಿಡಿಯುವುದರಿಂದ ಆದಾಯ ಗಳಿಸುತ್ತಿದೆ. ಗುತ್ತಿಗೆದಾರರು ಪಾಲಿಕೆಗೆ ಕೆಜಿಗೆ 70 ರೂ.ನಂತೆ ಪಾವತಿಸುತ್ತಿದ್ದಾರೆ.
ಗುತ್ತಿಗೆದಾರರು 10-15 ಮಂದಿಯ ತಂಡದೊಂದಿಗೆ ಬಿಡಾಡಿ ಹಂದಿಗಳಿರುವ ಸ್ಥಳಕ್ಕೆ ತೆರಳಿ ಸೆರೆ ಹಿಡಿಯುತ್ತಿದ್ದಾರೆ. ಈ ಮೊದಲು ಪಾಲಿಕೆಯೇ ಪ್ರತಿ ಹಂದಿಗಳನ್ನು ಹಿಡಿಯಲು 50 ರೂ. ಸಿಬ್ಬಂದಿಗಳಿಗೆ ನೀಡುತ್ತಿತ್ತು.

ಇದೀಗ ಹಂದಿಗಳನ್ನು ಹಿಡಿಯಲು ಯಾವುದೇ ರೀತಿಯ ಹಣ ವ್ಯಯಿಸುತ್ತಿಲ್ಲ. ಬೆಂಗಳೂರಿನಲ್ಲಿ 2012ರ ಗಣತಿ ಪ್ರಕಾರ 5,821 ಹಂದಿಗಳಿವೆ. ಕಳೆದ 6 ವರ್ಷಗಳಲ್ಲಿ ಅವುಗಳ ಸಂಖ್ಯೆ ನಾಲ್ಕೈದು ಪಟ್ಟು ಹೆಚ್ಚಾಗಿವೆ. ನಗರದ ಮೈಸೂರು ರಸ್ತೆ, ಎಚ್ಎಸ್ಆರ್ ಲೇಔಟ್, ಮಂಗಮ್ಮನಪಾಳ್ಯ, ಮಹದೇವಪುರ, ಬೊಮ್ಮನಹಳ್ಳಿ, ಯಲಹಂಕ ಪ್ರದೇಶಗಳಲ್ಲಿ ಹಂದಿಗಳ ಹಾವಳಿ ಹೆಚ್ಚಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಹಂದಿ ಸಾಕಣೆ ಮಾಡುವ ಹಾಗಿಲ್ಲ, ಇದಕ್ಕೆ ಅನುಮತಿ ಇಲ್ಲ,ಮ ಆದರೆ ಪಾಲಿಕೆ ಗಡಿ ಭಾಗದಲ್ಲಿ ಅಕ್ರಮವಾಗಿ ಹಂದಿಗಳನ್ನು ಸಾಕಣೆ ಮಾಡಲಾಗುತ್ತಿದೆ. ಮಾಲೀಕರು ಹಂದಿಗಳಿಗೆ ಗೂಡುಗಳನ್ನು ಕಟ್ಟಿಸಿ, ಮೇವು ಹಾಕುವ ಬದಲಾಗಿ ಬೀದಿಗೆ ಬಿಡುತ್ತಿದ್ದಾರೆ.
ಇದರಿಂದ ಸ್ಥಳೀಯ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ನಗರ ಜಿಲ್ಲೆ ವ್ಯಾಪ್ತಿಯಲ್ಲಿ 540 ಹಂದಿ ಸಾಕಣೆ ಕೇಂದ್ರಗಳಿವೆ. ಜೂನ್ ತಿಂಗಳಲ್ಲಿ 56 ಹಂದಿಗಳನ್ನು ಸೆರೆಹಿಡಿಯಲಾಗಿದೆ.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
E-Bike: ಗ್ರಾಮೀಣ ಆರೋಗ್ಯ ಸೇವೆಗೆ ಇ-ಬೈಕ್ ವೇಗ: ಮನೆ ಬಾಗಿಲಿಗೆ ವೈದ್ಯಕೀಯ ನೆರವು, ಏನಿದು ಯೋಜನೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್











Click it and Unblock the Notifications