ಜಲ ವಿವಾದಗಳ ಬಗ್ಗೆ ಸರ್ವಪಕ್ಷ ಸಭೆ: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಮಾರ್ಚ್ 18: ಅಂತರ್ರಾಜ್ಯ ಜಲ ವಿವಾದಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಧಾನಮಂಡಲದ ಉಭಯ ನಾಯಕರು, ಕಾನೂನು ತಜ್ಞರು ಹಾಗೂ ಜಲ ಸಂಪನ್ಮೂಲ ಇಲಾಖೆಯ ಮಾಜಿ ಸಚಿವರುಗಳ ಸಭೆಯ ಬಳಿಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
"2011ರಲ್ಲಿ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ, ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸುತ್ತಿದ್ದೇವೆ, ಅದು ಮುಗಿಯುವವರೆಗೆ ನ್ಯಾಯ ಮಂಡಳಿ ನೀಡಿರುವ ತೀರ್ಪು ಕುರಿತು ನೋಟಿಫಿಕೇಷನ್ ಹೊರಡಿಸಬಾರದು ಎಂದು ಹೇಳಿತ್ತು".
"ಇದಾಗಿ ಹನ್ನೊಂದು ವರ್ಷ ಕಳೆದಿದೆ, ಈವರೆಗೆ ಅದನ್ನು ಪರಿಹರಿಸಿಕೊಳ್ಳಲು ಸಾಧ್ಯವಾಗಿಲ್ಲ. ಒಂದೆರೆಡು ಬಾರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದದ್ದು ಬಿಟ್ಟರೆ, ರಾಜ್ಯ ಬಿಜೆಪಿ ಸರ್ಕಾರ ಹೆಚ್ಚಿನ ಒತ್ತಡ ಹಾಕಿಲ್ಲ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕಿತ್ತು," ಎಂದರು.

"ಕೂಡಲೇ ಕೇಂದ್ರ ಸರ್ಕಾರದ ಬಳಿಗೆ ನಿಯೋಗವನ್ನು ಕೊಂಡೊಯ್ಯುವ ಮೂಲಕ ಪ್ರಧಾನಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಬೇಕು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡಬೇಕು ಎಂದು ನಾವು ಇಂದಿನ ಸಭೆಯಲ್ಲಿ ಹೇಳಿದ್ದೇವೆ. ಸರ್ಕಾರ ನಮ್ಮ ನಿಲುವನ್ನು ಒಪ್ಪಿದೆ," ಎಂದು ಸಿದ್ದರಾಮಯ್ಯ ತಿಳಿಸಿದರು.
"ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಫೆಬ್ರವರಿ 16, 2018ರಲ್ಲಿ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಒಂದು ಸಾಮಾನ್ಯ ವರ್ಷದಲ್ಲಿ ಬಿಳಿಗೊಂಡ್ಲುವಿನಿಂದ 177.25 ಟಿಎಂಸಿ ನೀರು ತಮಿಳುನಾಡಿಗೆ ಬಿಡುವಂತೆ ಆದೇಶ ಇದೆ. ಇದನ್ನು ಹೊರತುಪಡಿಸಿ ತಮಿಳುನಾಡಿಗೆ ತಕರಾರು ಮಾಡಲು ಬೇರೆ ಯಾವ ಹಕ್ಕುಗಳು ಇಲ್ಲ. ಇನ್ನುಳಿದಂತೆ ಪರಿಸರ ಅನುಮತಿ ಪತ್ರ ಪಡೆಯಬೇಕು, ಕಾವೇರು ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಂಗೀಕಾರ ಆಗಬೇಕು".

ಈಗಾಗಲೇ ಐದು ಸಭೆಗಳು ನಡೆದಿದ್ದರೂ, ನನ್ನ ಪ್ರಕಾರ ಮೇಕೆದಾಟು ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ಆದ್ದರಿಂದ ತಕ್ಷಣ ಪರಿಸರ ಅನುಮತಿ ಪತ್ರ ಪಡೆಯಬೇಕು ಎಂದು ನಾನು, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಮುಂತಾದವರೆಲ್ಲ ಸರ್ಕಾರಕ್ಕೆ ಸ್ಪಷ್ಟವಾಗಿ ಹೇಳಿದ್ದೇವೆ.
"ಕಾವೇರಿ ನಮ್ಮ ನೀರು. ಹೆಚ್ಚುವರಿಯಾಗಿ ಹರಿದು ಹೋಗುವ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಯೋಜನೆ ಇದು. ಹೊಳೆ ನೀರಿಗೆ ದೊಣ್ಣೆನಾಯಕನ್ನು ಕೇಳಬೇಕಾ? ಇದಕ್ಕೆ ತಮಿಳುನಾಡಿನ ಅಪ್ಪಣೆ ಏಕೆ ಬೇಕು?," ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಮಹಾದಾಯಿ ಯೋಜನೆಗೆ ಪರಿಸರ ಅನುಮತಿ ಪತ್ರ ಬೇಕು. ಕುಡಿಯುವ ನೀರಿನ ಯೋಜನೆಗೆ ಪರಿಸರ ಅನುಮತಿ ಬೇಡ ಎಂದು ಹಿಂದೆ ಹೇಳಿದ್ದರು. ಈಗ ಬೇಕು ಅಂದರೆ ಅನುಮತಿ ಪತ್ರ ತಗೊಳ್ಳಬೇಕಾಗುತ್ತದೆ. ಎರಡೂ ಕಡೆ ಬಿಜೆಪಿ ಸರ್ಕಾರವೇ ಇದೆ. ಹಾಗಾಗಿ ತಕ್ಷಣ ಅನುಮತಿ ಪತ್ರ ಪಡೆಯಿರಿ ಎಂದು ಹೇಳಿದ್ದೇವೆ. ಡಬ್ಬಲ್ ಇಂಜಿನ್ ಸರ್ಕಾರ ಇದೆ ಪಡೆಯಲಿ ಎಂದರು.

"ನದಿಗಳ ಜೋಡಣೆ ವಿಷಯಕ್ಕೆ ವಿರೋಧ ವ್ಯಕ್ತಪಡಿಸಲು ಹೇಳಿದ್ದೇವೆ. ರಾಜ್ಯಕ್ಕೆ ಎಷ್ಟು ಪ್ರಮಾಣದ ನೀರು ಹಂಚಿಕೆಯಾಗುತ್ತದೆ ಗೊತ್ತಿಲ್ಲ, ಬಜೆಟ್ನಲ್ಲಿ ಯೋಜನೆ ಘೋಷಣೆಗೆ ಮೊದಲು ರಾಜ್ಯ ಸರ್ಕಾರವನ್ನು ಕೇಳಿಲ್ಲ. ಅದಕ್ಕೆ ಸರ್ಕಾರ ಈಗಾಗಲೇ ಮುಖ್ಯ ಕಾರ್ಯದರ್ಶಿಗಳು ಪತ್ರ ಬರೆದಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಹೇಳಿದೆ. ಇಂದಿನ ಸಭೆಯಲ್ಲಿ ನಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದೇವೆ. ನದಿಗಳ ಜೋಡಣೆಯಿಂದ ರಾಜ್ಯಕ್ಕೆ ಭಾರಿ ಅನ್ಯವಾಗುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ," ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮೇಕೆದಾಟು ಪಾದಯಾತ್ರೆ ಮಾಡಿದ್ದಕ್ಕೆ ವಿನಾಕಾರಣ ಮೊಕದ್ದಮೆ ದಾಖಲಿಸಿದ್ದೀರಿ, ನಾವು ಜನರ ಪರವಾಗಿ ಹೋರಾಟ ಮಾಡಿದ್ದು. ಬಿಜೆಪಿಯವರು ಸಭೆ ಮಾಡಿದ್ರು ಅವರ ಮೇಲೆ ಯಾವ ಕೇಸ್ ಹಾಕಿಲ್ಲ, ನಮ್ಮ ಮೇಲೆ ಮಾತ್ರ ಯಾಕೆ ಎಂದು ಕೇಳಿದ್ದೇವೆ. ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಬೇಡಿ, ನಮ್ಮ ಮೇಲೆ ಹಾಕಿರುವ ಕೇಸ್ಗಳನ್ನು ವಾಪಸ್ ತಗೊಳ್ಳಿ ಎಂದು ಹೇಳಿದ್ದೇವೆ. ಸರ್ಕಾರ ನೋಡುತ್ತೇವೆ ಎಂಬ ಉತ್ತರ ನೀಡಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
Recommended Video
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications