ಆರ್ ಆರ್ ನಗರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಅಡ್ಡಿ, ಗಲಾಟೆ!
ಬೆಂಗಳೂರು, ಅ. 27: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರಚಾರಕ್ಕೆ ತಡೆಯೊಡ್ಡಿದ ಘಟನೆ ರಾಜರಾಜೇಶ್ವರಿ ನಗರ ಕ್ಷೇತ್ರ ವ್ಯಾಪ್ತಿಯ ಯಶವಂತಪುರದ ಬಿ.ಕೆ. ನಗರದಲ್ಲಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರೋಡ್ ಶೋ ಮೂಲಕ ಪ್ರಚಾರ ಭಾಷಣವನ್ನು ಮಾಡುತ್ತಿದ್ದರು.
ಇದೇ ವೇಳೆ ಯಶವಂತಪುರದ ಬಿ.ಕೆ. ನಗರಕ್ಕೆ ಸಿದ್ದರಾಮಯ್ಯ ಅವರು ಬರುತ್ತಿದ್ದಂತೆಯೆ ಪ್ರಧಾನಿ ಮೋದಿ ಪರವಾಗಿ ಕೆಲವರು ಘೋಷಣೆ ಹಾಕಲು ಆರಂಭಿಸಿದರು. ಜೊತೆಗೆ ಸಿದ್ದರಾಮಯ್ಯ ಅವರ ವಾಹನ ಮುಂದೆ ಹೋಗದಂತೆ ತಡೆಯಲಾಯ್ತು.
ಘಟನೆಯಿಂದ ಆಕ್ರೋಶಗೊಂಡ ಸಿದ್ದರಾಮಯ್ಯ ಅವರು ಸ್ಥಳದಲ್ಲಿದ್ದ ಪೊಲೀಸರಿಗೆ ತಡೆ ಒಡ್ಡದವರನ್ನು ವಶಕ್ಕೆ ಪಡೆಯುವಂತೆ ಸಿದ್ದರಾಮಯ್ಯ ಅವರು ಸೂಚಿಸಿದರು. ಇಲ್ಲದಿದ್ದರೆ ಪೊಲೀಸ್ ಠಾಣೆಗೆ ಬಂದು ಧರಣಿ ಮಾಡು ಎಚ್ಚರಿಕೆಯನ್ನೂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಕೊಟ್ಟರು. ಜೊತೆಗೆ ಬೆಂಗಳೂರು ಮಹಾನಗರ ಪೊಲೀಸ್ ಕಮಿಶನರ್ ಅವರಿಗೂ ದೂರವಾಣಿಯಲ್ಲಿ ಮಾತನಾಡಿ ಗೂಂಡಾಗಳ ದೌರ್ಜನ್ಯವನ್ನು ತಡೆಯದಿದ್ದರೆ ನಿಮ್ಮ ನಿವಾಸದ ಎದುರು ಬಂದು ಧರಣಿ ಮಾಡುತ್ತೇನೆ ಎಂದು ಎಚ್ಚರಿಸಿದರು.

ಈ ಗೂಂಡಾಗಿರಿಗೆ ಯಾರೂ ಹೆದರಬೇಡಿ
ಏಯ್! ಯಾರೂ ಹೆದರಿಕೊಳ್ಳಬೇಡಿ. ಈ ಗೂಂಡಾಗಿರಿಗೆ ಹೆರದಬೇಡಿ. ಇದೇ ರೀತಿ ಗೂಂಡಾಗಿರಿ ಮುಂದುವರೆಸಿದರೆ ಬಿಜೆಪಿ ಎಲ್ಲಿಯೂ ಸಭೆ ಮಾಡಲು ಬಿಡುವುದಿಲ್ಲ. ಬಿಜೆಪಿಯವರು ಎಲ್ಲಿಯೂ ಕೂಡ ಸಭೆ ಮಾಡಲು ನಾವು ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ಗೂಂಡಾಗಿರಿ, ದೌರ್ಜನ
ಈ ಗೂಂಡಾಗಿರಿ, ದೌರ್ಜನ ಇದಕ್ಕೆಲ್ಲ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ ಎಂದರು. ಪೊಲೀಸರನ್ನು ತರಾಟೆಗೆ ತಡಗೆದುಕೊಂಡ ಸಿದ್ದರಾಮಯ್ಯ ಅವರು ನಿಮ್ಮ ಪೊಲೀಸ್ ಠಾಣೆಗೆ ಬಂದು ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದಕ್ಕೆಲ್ಲ ಹೆದರುವ ಮಕ್ಕಳಲ್ಲ ನಾವು
ಇಂತಹ ಗಲಾಟೆ ಮಾಡುವವರನ್ನು ಸಾವಿರಾರು ಜನರನ್ನು ನಾವು ನೋಡಿದ್ದೇವೆ. ಇದಕ್ಕೆಲ್ಲ ಹೆದರುವ ಮಕ್ಕಳಲ್ಲ ನಾವು. ಇದಕ್ಕೆಲ್ಲ ಬೆದರುವ ಮಕ್ಕಳಲ್ಲ ನಾವು. ಬಗ್ಗುವ ಮಕ್ಕಳಲ್ಲ ನಾವು ಎಂದು ಪ್ರಚಾರಕ್ಕೆ ತಡೆ ಒಡ್ಡಿದವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಚ್ಚರಿಕೆ ಕೊಟ್ಟರು.
Recommended Video

ಮುನಿರತ್ನಗೆ ಸೋಲಿನ ಭಯ
ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಗಲಾಟೆ ಮಾಡಲು ಇವರನ್ನು ಕಳಿಸಿದ್ದಾರೆ. ಸಿದ್ದರಾಮಯ್ಯ ಬಂದಿದ್ದಾರೆ. ಹೀಗಾಗಿ ಸೋಲುತ್ತೇನೆ ಎಂದು ಮುನಿರತ್ನ ಗೂಂಡಾಗಳನ್ನು ಕಳುಹಿಸಿದ್ದಾರೆ. ಇದನ್ನು ಮತದಾರರು ಗಮನಿಸುತ್ತಿದ್ದಾರೆ. ನವೆಂಬರ್ 3ರಂದು ಇದಕ್ಕೆಲ್ಲ ಮತದಾರರು ತಕ್ಕ ಉತ್ತರವನ್ನು ಕೊಡುತ್ತಾರೆ, ಹುಷಾರ್ ಎಂದು ಸಿದ್ದರಾಮಯ್ಯ ಅವರು ಎಚ್ಚರಿಕೆ ಕೊಟ್ಟರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications