Opposition Meeting in Bengaluru:ಸರ್ವಾಧಿಕಾರಿ ಪ್ರಭುತ್ವದ ವಿರುದ್ದದ ಹೋರಾಟ- ವಿಪಕ್ಷ ನಾಯಕರನ್ನು ಸ್ವಾಗತಿಸಿದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 17: ಬೆಂಗಳೂರಿನಲ್ಲಿ ಇಂದು ಆರಂಭವಾಗಲಿರುವ ವಿಪಕ್ಷಗಳ ಸಭೆಯಲ್ಲಿ ದೇಶದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯು ಭಾರೀ ಮಹತ್ವ ಪಡೆದುಕೊಂಡಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ತಂತ್ರಗಳನ್ನು ರೂಪಿಸುವುದು ಈ ಸಭೆಯ ಉದ್ದೇಶವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಸರ್ವಾಧಿಕಾರಿ, ಕೋಮುವಾದಿ ಮತ್ತು ಭ್ರಷ್ಟ ಪ್ರಭುತ್ವದ ವಿರುದ್ದದ ಹೋರಾಟದಲ್ಲಿ ಒಂದಾಗಲು ಆಗಮಿಸುತ್ತಿರುವ ದೇಶದ ಪ್ರಮುಖ ವಿರೋಧಪಕ್ಷಗಳ ನಾಯಕರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ' ಎಂದು ಹೇಳಿದ್ದಾರೆ.

'ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಪ್ರಭುತ್ವದ ಆಶಯಗಳ ಕೂಡು ಬದುಕಿನ ದೀರ್ಘ ಪರಂಪರೆ ಹೊಂದಿರುವ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಬಿತ್ತಿದ ಬೀಜ, ಬೆಳೆದು ಫಲ ನೀಡಲಿ ಎನ್ನುವುದು ಕನ್ನಡಿಗರೆಲ್ಲರ ಒಕ್ಕೊರಲಿನ ಹಾರೈಕೆ' ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಕರೆದಿರುವ ಸಭೆಯಲ್ಲಿ 24 ವಿರೋಧ ಪಕ್ಷಗಳು ಭಾಗವಹಿಸುವ ನಿರೀಕ್ಷೆಯಿದೆ. ವಿರೋಧ ಪಕ್ಷಗಳ ನಾಯಕರು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಮಾತುಕತೆ ಮೂಲಕ ಒಂದಾಗಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
2024ರ ಲೋಕಸಭಾ ಚುನಾವಣೆಗೆ ವಿರೋಧ ಪಕ್ಷಗಳ ಮೈತ್ರಿಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮತ್ತು ಸಂವಹನ ಅಂಶಗಳನ್ನು ರೂಪಿಸಲು ಉಪಸಮಿತಿಯನ್ನು ರಚಿಸುವ ಪ್ರಸ್ತಾವನೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಮೈತ್ರಿಕೂಟಕ್ಕೆ ಹೆಸರನ್ನು ನೀಡಲು ವಿರೋಧ ಪಕ್ಷಗಳ ನಾಯಕರು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆ ದಿನಗಟ್ಟಲೆ ಚರ್ಚಿಸಿದ ನಂತರ ಆಮ್ ಆದ್ಮಿ ಪಕ್ಷ ಕೂಡ ಸಭೆಯಲ್ಲಿ ಭಾಗವಹಿಸುವುದಾಗಿ ಘೋಷಿಸಿದೆ. ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ದೆಹಲಿಯ ಸುಗ್ರೀವಾಜ್ಞೆಗೆ ಕಾಂಗ್ರೆಸ್ ಬೆಂಬಲವನ್ನು ವ್ಯಕ್ತಪಡಿಸಿದ ನಂತರ ಕೇಜ್ರಿವಾಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸೋನಿಯಾ ಗಾಂಧಿ, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಎಂಕೆ ಸ್ಟಾಲಿನ್, ನಿತೀಶ್ ಕುಮಾರ್ ಮತ್ತು ಹೇಮಂತ್ ಸೊರೆನ್ ಸಭೆಯಲ್ಲಿ ಭಾಗವಹಿಸುವ ಪ್ರಮುಖರಾಗಿದ್ದಾರೆ. ಕೆ ಚಂದ್ರಶೇಖರ್ ರಾವ್, ಜಗನ್ ಮೋಹನ್ ರೆಡ್ಡಿ, ಚಂದ್ರಬಾಬು ನಾಯ್ಡು ಮತ್ತು ನವೀನ್ ಪಟ್ನಾಯಕ್ ಈ ಸಭೆಯಿಂದ ದೂರ ಉಳಿಯಲಿದ್ದಾರೆ.

ಜೂನ್ 23 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಯೋಜಿಸಿದ್ದ ಪ್ರತಿಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ 15 ಪಕ್ಷಗಳು ಭಾಗವಹಿಸಿದ್ದವು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications