ಆರ್ಕಿಡ್ಸ್ ಶಾಲೆಯಲ್ಲೇ ಅತ್ಯಾಚಾರ ನಡೆದಿದೆ: ಐಒ
ಬೆಂಗಳೂರು, ಅ.26: ಆರ್ಕಿಡ್ಸ್ ಇಂಟರ್ ನ್ಯಾಷನಲ್ ಶಾಲೆ ನರ್ಸರಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದು ಶಾಲೆ ಆವರಣದಲ್ಲೇ ಎಂಬುದು ದೃಢಪಟ್ಟಿದೆ. ಆರೋಪಿ ಗುಂಡಣ್ಣ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ ಎಂದು ತನಿಖಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಇನ್ನೊಂದೆಡೆ ನಿಯಮ ಬಾಹಿರವಾಗಿ ಶಾಲೆ ನಡೆಸುತ್ತಿದ್ದ ಆರೋಪದ ಮೇಲೆ ಆರ್ಕಿಡ್ಸ್ ಶಾಲಾ ಸಮೂಹ ಕಾರ್ಯದರ್ಶಿ ಕೆ.ಆರ್.ಕೆ.ರೆಡ್ಡಿ ಅವರನ್ನು ಬಂಧಿಸಲಾಗಿದೆ. ಕರ್ನಾಟಕ ಶಿಕ್ಷಣ ಕಾಯ್ದೆ ಉಲ್ಲಂಘನೆ ಮಾಡಿ ಶಾಲೆ ನಡೆಸುತ್ತಿರುವ ಆರ್ಕಿಡ್ಸ್ ಇಂಟರ್ ನ್ಯಾಷನಲ್ ಶಾಲೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. [ಶಾಲೆ ವಿರುದ್ಧ ಕ್ರಿಮಿನಲ್ ಕೇಸ್]
ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಿ, ಸಂತ್ರಸ್ತ ಬಾಲೆಯಿಂದ ಕಷ್ಟಪಟ್ಟು ಹೇಳಿಕೆ(ಮಾನಸಿಕ ತಜ್ಞರ ನೆರವನ್ನು ಪಡೆಯಲಾಗಿತ್ತು) ಪಡೆದುಕೊಂಡ ಮೇಲೆ ಆರ್ಕಿಡ್ಸ್ ದಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಕಚೇರಿ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿರುವ 45 ವರ್ಷ ವಯಸ್ಸಿನ ಗುಂಡಣ್ಣನನ್ನು ಆರೋಪಿಯಾಗಿ ಜಾಲಹಳ್ಳಿ ಠಾಣೆ ಪೊಲೀಸರು ಪರಿಗಣಿಸಿದ್ದಾರೆ.

ಜಾಲಹಳ್ಳಿಯ ಎ.ಕೆ ಕಾಲೋನಿಯ ನಿವಾಸಿಯಾಗಿರುವ ಗುಂಡಣ್ಣ ಕಳೆದ ಎರಡು ವರ್ಷಗಳಿಂದ ಆರ್ಕಿಡ್ಸ್ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ತನಿಖೆ ಆರಂಭಗೊಂಡ ದಿನದಿಂದಲೂ ಗುಂಡಣ್ಣನ ಮೇಲೆ ಸಂಶಯ ವ್ಯಕ್ತವಾಗಿತ್ತು. [ಮಕ್ಕಳ ಸುರಕ್ಷತೆಗೆ ಸರ್ಕಾರದ ಮಾರ್ಗಸೂಚಿ]
ಆದರೆ, ಸಂತ್ರಸ್ತ ಮಗುವಿನ ಹೇಳಿಕೆ ಮುಖ್ಯವಾಗಿತ್ತು. ಗುಂಡಣ್ಣನ ಫೋಟೋ ಗುರುತಿಸಿದ ಮಗು, ಈ ಅಂಕಲ್ ನನಗೆ ಹರ್ಟ್ ಮಾಡಿದರು ಎಂದು ಹೇಳಿದಳು. ನಂತರ ಗುಂಡಣ್ಣನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ ಬಳಿಕ ಆತನೇ ಆರೋಪಿ ಎಂಬುದು ನಿರ್ಧರಿಸಲಾಯಿತು ಎಂದು ಪೊಲೀಸ್ ಆಯುಕ್ತ ಎಂ.ಎನ್ ರೆಡ್ಡಿ ಹೇಳಿದ್ದಾರೆ. [ವಿಬ್ ಗಯಾರ್ ಶಾಲೆ ನೀಚ ಕೃತ್ಯ]
ಸಿಸಿಬಿ ಪೊಲೀಸರು ಗುಂಡಣ್ಣನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅನ್ವಯ ಸಂತ್ರಸ್ತೆ, ಆರೋಪಿಯ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಶಾಲಾ ಅವರಣದಲ್ಲೇ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಗುಂಡಣ್ಣ ತಪ್ಪೊಪ್ಪಿಕೊಂಡಿದ್ದಾನೆ. ತನಿಖೆ ಇನ್ನೂ ಮುಂದುವರೆದಿದ್ದು ಈ ಬಗ್ಗೆ ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಎಂಎನ್ ರೆಡ್ಡಿ ಹೇಳಿದರು.[ಗಡ್ಡಕ್ಕೆ ಬೆಂಕಿ ಬಿದ್ದಾಗ ಬಾವಿ ತೋಡಿ]
ಪ್ರಕರಣ ಸಂಬಂಧ ಜಾಲಹಳ್ಳಿ ಠಾಣೆ ಪೊಲೀಸರು ಲೈಂಗಿಕ ಕಿರುಕುಳದಿಂದ ಮಕ್ಕಳ ರಕ್ಷಣೆಗಾಗಿರುವ ಪೋಕ್ಸೋ ಕಾಯ್ಡೆ 2012ರ ಸೆಕ್ಷನ್ 4, 6ರ ಅಡಿಯಲ್ಲಿ, ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಎಸಿಪಿ(ಮಲ್ಲೇಶ್ವರ) ಸಾರಾ ಫಾತಿಮಾ ನೇತೃತ್ವದಲ್ಲಿ ತಂಡ ನಡೆಸುತ್ತಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications