ಜಾಲಹಳ್ಳಿ ಪೊಲೀಸರ ವಶಕ್ಕೆ ಆರೋಪಿ ಗುಂಡಣ್ಣ
ಬೆಂಗಳೂರು, ಅ.26: ಆರ್ಕಿಡ್ಸ್ ಇಂಟರ್ ನ್ಯಾಷನಲ್ ಶಾಲೆಯ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಹೊತ್ತಿರುವ ಅಟೆಂಡರ್ ಗುಂಡಣ್ಣನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶಕ್ಕೆ ನೀಡಲಾಗಿದೆ.
ಕೋರಮಂಗಲದಲ್ಲಿರುವ 51ನೇ ವಿಶೇಷ ಕೋರ್ಟ್ ನ್ಯಾಯಾಧೀಶೆ ಶುಭಾ ಗೌಡರ್ ಅವರ ನಿವಾಸಕ್ಕೆ ಆರೋಪಿ ಗುಂಡಪ್ಪನನ್ನು ಜಾಲಹಳ್ಳಿ ಪೊಲೀಸರು ಭಾನುವಾರ ಮಧ್ಯಾಹ್ನ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೇಕೆಂದು ಮನವಿ ಮಾಡಿಕೊಂಡರು.
ನ್ಯಾ. ಶುಭಾ ಅವರು ಪೊಲೀಸರ ಮನವಿಯನ್ನು ಪುರಸ್ಕರಿಸಿ 6 ದಿನಗಳ ಜಾಲಹಳ್ಳಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಇದಕ್ಕೂ ಮುನ್ನ 7ನೇ ಎಸಿಎಂಎಂ ನ್ಯಾಯಾಧೀಶರು ರಜೆ ಮೇಲೆ ಪ್ರವಾಸಕ್ಕೆ ತೆರಳಿರುವುದರಿಂದ ಆರೋಪಿಯನ್ನುನ್ಯಾ. ಶುಭಾ ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. [ಶಾಲೆ ವಿರುದ್ಧ ಕ್ರಿಮಿನಲ್ ಕೇಸ್]

ಶಾಲೆ ಪುನರ್ ಆರಂಭ?: ಆರ್ಕಿಡ್ಸ್ ಇಂಟರ್ ನ್ಯಾಷನಲ್ ಶಾಲೆ ಒಂದರಿಂದ ಐದನೇ ತರಗತಿ ವರಗೆ ಸೋಮವಾರ(ಅ.27)ದಿಂದ ಪುನಾರಂಭಗೊಳ್ಳಲಿದೆ. ಆದರೆ, ಅನುಮತಿ ಇಲ್ಲದ ಹಿನ್ನೆಲೆಯಲ್ಲಿ ಆರು ಮತ್ತು ಏಳನೇ ತರಗತಿಗಳು ನಾಳೆ ಆರಂಭವಾಗುವ ಸಾಧ್ಯತೆ ಕಡಿಮೆ ಇದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಬುಧವಾರದ ನಂತರ ಶಾಲೆ ಆರಂಭದ ಬಗ್ಗೆ ಇರುವ ಗೊಂದಲ ನಿವಾರಣೆಯಾಗಲಿದೆ ಎಂದಿದ್ದಾರೆ.
ಈ ಹಿಂದಿನ ಅಪ್ದೇಟ್ಸ್ : ಆರ್ಕಿಡ್ಸ್ ಇಂಟರ್ ನ್ಯಾಷನಲ್ ಶಾಲೆ ನರ್ಸರಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದು ಶಾಲೆ ಆವರಣದಲ್ಲೇ ಎಂಬುದು ದೃಢಪಟ್ಟಿದೆ. ಆರೋಪಿ ಗುಂಡಣ್ಣ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ ಎಂದು ತನಿಖಾಧಿಕಾರಿ ಸ್ಪಷ್ಟಪಡಿಸಿದ್ದರು.
ಜಾಲಹಳ್ಳಿಯ ಎ.ಕೆ ಕಾಲೋನಿಯ ನಿವಾಸಿಯಾಗಿರುವ ಗುಂಡಣ್ಣ ಕಳೆದ ಎರಡು ವರ್ಷಗಳಿಂದ ಆರ್ಕಿಡ್ಸ್ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ತನಿಖೆ ಆರಂಭಗೊಂಡ ದಿನದಿಂದಲೂ ಗುಂಡಣ್ಣನ ಮೇಲೆ ಸಂಶಯ ವ್ಯಕ್ತವಾಗಿತ್ತು. ಸಂತ್ರಸ್ತ ಮಗುವಿನ ಹೇಳಿಕೆ ಮುಖ್ಯವಾಗಿತ್ತು. ಗುಂಡಣ್ಣನ ಫೋಟೋ ಗುರುತಿಸಿದ ಮಗು, ಈ ಅಂಕಲ್ ನನಗೆ ಹರ್ಟ್ ಮಾಡಿದರು ಎಂದು ಹೇಳಿದ್ದಳು. ಗುಂಡಣ್ಣನ ವಿರುದ್ಧ ಸಾಕ್ಷಿಗಳು, ಹೇಳಿಕೆಗಳು ಸಿಕ್ಕ ಬೆನ್ನಲ್ಲೇ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. [ವಿಬ್ ಗಯಾರ್ ಶಾಲೆ ನೀಚ ಕೃತ್ಯ]
ಪ್ರಕರಣ ಸಂಬಂಧ ಜಾಲಹಳ್ಳಿ ಠಾಣೆ ಪೊಲೀಸರು ಲೈಂಗಿಕ ಕಿರುಕುಳದಿಂದ ಮಕ್ಕಳ ರಕ್ಷಣೆಗಾಗಿರುವ ಪೋಕ್ಸೋ ಕಾಯ್ಡೆ 2012ರ ಸೆಕ್ಷನ್ 4, 6ರ ಅಡಿಯಲ್ಲಿ, ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಎಸಿಪಿ(ಮಲ್ಲೇಶ್ವರ) ಸಾರಾ ಫಾತಿಮಾ ನೇತೃತ್ವದಲ್ಲಿ ತಂಡ ನಡೆಸುತ್ತಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications