ಜನವರಿ 23ರಿಂದ ಬೆಂಗಳೂರಲ್ಲಿ ಸಾವಯವ ಸಿರಿಧಾನ್ಯ ಮೇಳ 2025: ಉಚಿತ ಪ್ರವೇಶ, ವಿಶೇಷತೆಗಳು
ಬೆಂಗಳೂರು, ಜನವರಿ 22: ಕರ್ನಾಟಕ ರಾಜ್ಯ ಸರ್ಕಾರ, ರಾಜ್ಯ ಕೃಷಿ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ 'ಸಾವಯವ ಸಿರಿಧಾನ್ಯ ಮೇಳ 2025' ನಡೆಯಲಿದೆ ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ಈ ಮೇಳವನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳಕ್ಕೆ ಬುಧವಾರ ಜನವರಿ 23ರಂದು ಚಾಲನೆ ನೀಡಲಿದ್ದಾರೆ.
ಹೌದು, ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-ಸಾವಯವ ಸಿರಿಧಾನ್ಯ ಮೇಳ 2025ವು ನಗರದ ಮೇಕ್ರಿ ವೃತ್ತದ ಬಳಿಯ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಜನವರಿ 23ರಿಂದ 25ರವರೆಗೆ ಜರುಗಲಿದೆ. ಇದೊಂದು ಬೃಹತ್ ಕಾರ್ಯಕ್ರಮವಾಗಿದೆ. ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇದೆ. ಎಲ್ಲರಿಗೂ ಉಚಿತ ಪ್ರವೇಶ ಇದೆ ಎಂದು ತಿಳಿಸಲಾಗಿದೆ.

ಮೇಳದ ಉದ್ಘಾಟನೆ ಜನವರಿ 23ರಂದು ಬುಧವಾರ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೃಷಿ ಸಚಿವರು ಮತ್ತು ಅಂತಾರಾಷ್ಟ್ರೀಯ ವಾಣಿಜ್ಯ ಮೇಳೆ ಮತ್ತು ಸಾವಯವ ಸಿರಿಧಾನ್ಯ ಮೇಳ 2025ದ ಉಸ್ತುವಾರಿ ಸಮಿತಿ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ಮತ್ತಿತರ ಗಣ್ಯರು, ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಬೆಳೆ ಸಮೀಕ್ಷೆ
ಮೇಳದಲ್ಲಿ ರೈತರಿಗೆ, ಅವರ ಜಮೀನಿನ ಬೆಳೆ ವಿವರಗಳನ್ನು ನೀವೇ ''ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್''ನಲ್ಲಿ ದಾಖಲಿಸಿ ಅಪ್ಲೋಡ್ ಮಾಡಲು ಅವಕಾಶ ಇದೆ. ಮಾಹಿತಿ ಅಪ್ಲೋಡ್ ಮಾಡಲು ಸ್ಥಳೀಯ, ಖಾಸಗಿ ನಿವಾಸಿಗಳು, ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ ವೀಕ್ಷಿಸಬಹುದು. ಅಲ್ಲದೇ ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ 'ಬೆಳೆ ದರ್ಶಕ್ ಆಪ್' ನಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಿ ಮೇಳದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ರೈತರು 18004253553 ಗೆ ಕರೆ ಮಾಡಬಹುದು.
ಮೇಳದ ವಿಶೇಷತೆಗಳು, ಪ್ರಮುಖ ಅಂಶಗಳು
* ಮೇಳದಲ್ಲಿ 300ಕ್ಕೂ ಹೆಚ್ಚು ಹವಾನಿಯಂತ್ರಿ (ಎಸಿ) ಮಳಿಗೆಗಳು ಸ್ಥಾಪನೆಗೆ ಅವಕಾಶ ನೀಡಲಾಗಿದೆ.
* ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳ ಪ್ರತ್ಯೇಕ ಮಳಿಗೆಗಳು
* ದೇಶಿ ತಳಿಗಳ ವಿಶೀಷ್ಟ ಪೆವಿಲಿಯನ್
* ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ
* ರೈತರ ಗೊಂದಲ ನಿವಾರಣೆಗೆ ಕಾರ್ಯಾಗಾರಗಳು
* ಸಾವಯವ ಸಿರಿಧಾನ್ಯ, ಮರೆತುಹೋದ ಖಾದ್ಯಗಳ ಆಹಾ ಮಳಿಗೆಗಳು
* ಸಾಂಸ್ಕೃತಿಕ ಕಾರ್ಯಕ್ರಮಗಳು
* ಬಿ2ಸಿ ವೇದಿಕೆ
* ಬಿ2ಸಿ ವಿಚಾರ ವಿನಿಮಯ ನಡೆಯಲಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications