ನಮ್ಮ ಊರು, ಕಸಮುಕ್ತ ಬೆಂಗಳೂರು: ದಿನೇಶ್ ಗುಂಡೂರಾವ್
ಬೆಂಗಳೂರು, ಜನವರಿ 4: ಇಡೀ ಬೆಂಗಳೂರನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಜಯ ಕರ್ನಾಟಕ ಸಂಘಟನೆ ಪ್ರಾರಂಭಿಸಿರುವ 100 ದಿನಗಳ ಸ್ವಚ್ಛತಾ ಆಂದೋಲನ ಶನಿವಾರ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು.
ಈ ಕಾರ್ಯಕ್ರಮವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ.ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿ ಈ ಕ್ಷೇತ್ರದಲ್ಲಿ ವ್ಯಾಪಾರ ಮಳಿಗೆಗಳು ಹೆಚ್ಚಾಗಿರುವುದರಿಂದ ಕಸವೂ ಹೆಚ್ಚು. ಅದನ್ನು ತೆರವುಗೊಳಿಸಲು ಬಿಬಿಎಂಪಿ ಎಲ್ಲ ಕ್ರಮ ಕೈಗೊಂಡಿದ್ದರೂ ಸಣ್ಣ ರಸ್ತೆಗಳಲ್ಲಿ ಇದು ಸಾಧ್ಯವಾಗುತ್ತಿಲ್ಲ. ಅದನ್ನು ಈ ಅಭಿಯಾನದ ಮೂಲಕ ಜಯ ಕರ್ನಾಟಕದ ಕಾರ್ಯಕರ್ತರು ಮಾಡುತ್ತಿರುವುದು ಶ್ಲಾಘನೀಯ ಎಂದರು.[ಫೆಬ್ರವರಿ 1ರಿಂದ ಕಸ ವಿಂಗಡಣೆ ಮಾಡದಿದ್ದರೆ ಬೀಳುತ್ತೆ ದಂಡ!]

ಇದೇ ವೇಳೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಶ್ರೀ.ಸಾ.ರಾ.ಗೋವಿಂದು, ಶುಚಿತ್ವವೇ ಆರೋಗ್ಯದ ಬುನಾದಿ. ಸ್ವಚ್ಛತೆ ಕಾಯ್ದುಕೊಂಡರು ನಮ್ಮ ನಗರ ಸುಂದರವಾಗುವುದಷ್ಟೇ ಅಲ್ಲದೆ ಜನರ ಆರೋಗ್ಯವೂ ಉಳಿಯುತ್ತದೆ ಎಂದರು. ಈ ನಿಟ್ಟಿನಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಬೀದಿಗಿಳಿದು ಸ್ವಚ್ಛತಾ ಆಂದಲೋನವನ್ನು ನಡೆಸುತ್ತಿರುವ ಜಯ ಕರ್ನಾಟಕ ಸಂಘಟನೆಗೆ ತಮ್ಮ ಅಭಿನಂದನೆ ತಿಳಿಸಿದರು.

500 ಹೆಚ್ಚು ಶಾಲಾ ಮಕ್ಕಳು ಪಾಲ್ಗೊಂಡು ಕಾರ್ಯಕರ್ತರ ಹುರುಪು ಹೆಚ್ಚಿಸಿದ್ದು, ಇದರ ಜೊತೆಗೆ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಚ್ಛತಾ ಕಾರ್ಯ ಕೈಗೊಂಡಿದ್ದು ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಸಂಘಟನೆಯ ಸಹಸ್ರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ಶನಿವಾರ ಗಾಂಧಿನಗರ, ಮಾಗಡಿ ರಸ್ತೆಯ ಮುಖ್ಯ ಬೀದಿಗಳು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications