ಒರಾಯನ್, ಗೋಪಾಲನ್ ಮಾಲ್ನಿಂದ ರಾಜಾಕಾಲುವೆ ಒತ್ತುವರಿ
ಬೆಂಗಳೂರು, ಆಗಸ್ಟ್ 23 : ರಾಜ ಕಾಲುವೆ ಒತ್ತುವರಿ ವಿಚಾರದಲ್ಲಿ ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ಅವರು ಮೌನ ಮುರಿದಿದ್ದಾರೆ. 'ಒರಾಯನ್ ಮತ್ತು ಗೋಪಾಲನ್ ಮಾಲ್ಗಳಿಂದ ಸಹ ರಾಜ ಕಾಲುವೆ ಒತ್ತುವರಿಯಾಗಿದ್ದು, ಅದನ್ನು ಖಚಿತಪಡಿಸಿಕೊಳ್ಳಲು ಮರು ಸರ್ವೇಗೆ ಆದೇಶ ನೀಡಲಾಗಿದೆ' ಎಂದು ಅವರು ಹೇಳಿದ್ದಾರೆ.
ಸೋಮವಾರ ಸಂಜೆ ರಾಜ ಕಾಲುವೆ ಒತ್ತುವರಿ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಮೇಯರ್, 'ರಾಜಾಜಿನಗರದ ಒರಾಯನ್ ಹಾಗೂ ಮೈಸೂರು ರಸ್ತೆಯ ಗೋಪಾಲನ್ ಮಾಲ್ಗಳಿಂದ ಕೂಡ ರಾಜಕಾಲುವೆ ಒತ್ತುವರಿಯಾಗಿದೆ' ಎಂದರು.['ಜೆ.ಪಿ.ನಗರವೋ ಮತ್ತೊಂದು ನಗರವೋ ಒತ್ತುವರಿ ತೆರವು ಖಚಿತ']

'ರಾಜ ಕಾಲುವೆ ಮೇಲೆ ಒರಾಯನ್ ಮಾಲ್ ನಿರ್ಮಾಣಕ್ಕಾಗಿ ಕಟ್ಟಡ ನಕ್ಷೆ ಮಂಜೂರು ಮಾಡಿದ್ದಕ್ಕೆ ಹಿಂದಿನ ಆಯುಕ್ತರಾಗಿದ್ದ ಸಿದ್ದಯ್ಯ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಕಟ್ಟಡ ನಿರ್ಮಾಣವಾಗಿದೆ' ಎಂದು ಹೇಳಿದರು.[ಒತ್ತುವರಿ ತೆರವಿಗೆ ತೊಂದರೆ ಇಲ್ಲ ಎಂದ ದರ್ಶನ್]
'ಬಡ ಕುಟುಂಬಗಳ ಮನೆಗಳನ್ನು ಮಾತ್ರ ತೆರವುಮಾಡಲಾಗುತ್ತಿದೆ. ದೊಡ್ಡ ಕಟ್ಟಡಗಳನ್ನು ಹಾಗೇ ಬಿಡಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ. ರಾಜ ಕಾಲುವೆ ಮೇಲಿರುವ ದೊಡ್ಡ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ' ಎಂದು ತಿಳಿಸಿದರು.[ಮಾನ್ಯತಾ ಟೆಕ್ ಪಾರ್ಕ್ ಮೇಲೆ ಬಿಬಿಎಂಪಿ ಕಣ್ಣು]
'ಒರಾಯನ್, ಗೋಪಾಲನ್ ಮಾಲ್ ಮಾತ್ರವಲ್ಲ ಎಸ್.ಎಸ್. ಆಸ್ಪತ್ರೆ ಕಟ್ಟಡ ಹಾಗೂ ನಟ ದರ್ಶನ್ ಅವರ ಮನೆ ಸಹ ರಾಜ ಕಾಲುವೆ ವ್ಯಾಪ್ತಿಯಲ್ಲಿದೆ ಎಂಬ ಮಾಹಿತಿ ಇದೆ. ಈ ಕಟ್ಟಡಗಳು ಇರುವ ಪ್ರದೇಶದಲ್ಲಿ ಮರು ಸರ್ವೇ ಮಾಡಬೇಕು ಎಂಬ ಆದೇಶ ನೀಡಲಾಗಿದೆ. ಸರ್ವೇ ವರದಿಗಾಗಿ ಕಾಯುತ್ತಿದ್ದೇವೆ' ಎಂದರು.[ರಾಜಕಾಲುವೆ ಒತ್ತುವರಿ ವಿವರ ಈಗ ವೆಬ್ ಸೈಟ್ ನಲ್ಲಿ ಲಭ್ಯ]
30 ಸರ್ವೇಯರ್ಗಳು ವಾಪಸ್ : ಹಿಂದೆ ರಾಜ ಕಾಲುವೆ ಸರ್ವೇ ಮಾಡಿದ್ದ 30 ಸರ್ವೇಯರ್ಗಲು ಬೇರೆಡೆಗೆ ವರ್ಗಾವಣೆಯಾಗಿ ಹೋಗಿದ್ದಾರೆ. ಅವರು ವಾಪಸ್ ಬಂದರೆ ಒತ್ತುವರಿ ತೆರವು ಕಾರ್ಯ ಸುಲಭವಾಗಲಿದೆ ಎಂದು ಬಿಬಿಎಂಪಿ ನಿರ್ಧರಿಸಿದ್ದು, ಅವರನ್ನು ವಾಪಸ್ ಕರೆಸಲು ನಿರ್ಧರಿಸಿದೆ.
ವಿವಿಧ ಜಿಲ್ಲೆಗಳಲ್ಲಿರುವ ಅವರು ಬೆಂಗಳೂರಿಗೆ ಬರಲಿದ್ದು ಸರ್ವೇ ಕಾರ್ಯ ಮುಗಿಯುವ ತನಕ ಇಲ್ಲೇ ನೆಲೆಸಲಿದ್ದಾರೆ.
ಈಗ ಒತ್ತುವರಿ ತೆರವು ಮಾಡಿದ ಪ್ರದೇಶಗಳಲ್ಲಿ ರಾಜಕಾಲುವೆ ನಿರ್ಮಾಣ ಕಾರ್ಯ ತಕ್ಷಣ ಆರಂಭವಾಗಲಿದೆ. ಬಾಕಿ ಇರುವ ಪ್ರದೇಶದಲ್ಲಿ ಸರ್ವೇ ಕಾರ್ಯ ಪ್ರಾರಂಭವಾಗಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications