ಒರಿಸ್ಸಾ ಮೂಲದ ತಾಯಿ ಮತ್ತು ಮಗನ ಬರ್ಬರ ಹತ್ಯೆ !
ಬೆಂಗಳೂರು, ಏಪ್ರಿಲ್ 08: ರಾಜಧಾನಿಯಲ್ಲಿ ತಾಯಿ ಹಾಗೂ ಮಗನನ್ನು ಚಾಕುವಿನಿಂದ ಇರಿದು ಜೋಡಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಒರಿಸ್ಸಾ ಮೂಲದ ತಾಯಿ ಮತ್ತು ಮಗ ಕೇವಲ ಇಪ್ಪತ್ತು ದಿನದ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು. ಇದೀಗ ಇಬ್ಬರು ಕೊಲೆಯಾಗಿರುವುದು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಒರಿಸ್ಸಾ ಮೂಲದ ಮಮತಾ ಬಸು (75) ಹಾಗೂ ಈಕೆಯ ಪುತ್ರ ದೇವಬ್ರತಾ (45 ) ಕೊಲೆಯಾದವರು. ಒರಿಸ್ಸಾ ಮೂಲದ ದೇವಬ್ರತಾಗೆ ಬೆಂಗಳೂರಿನ ಕಾಲೇಜುವೊಂದರಲ್ಲಿ ಉಪನ್ಯಾಸಕ ಕೆಲಸ ಸಿಕ್ಕಿತ್ತು. ಇಪ್ಪತ್ತು ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದು, ಜೆ.ಪಿ.ನಗರದ ಸಂತೃಪ್ತಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಬುಧವಾರ ಮಧ್ಯರಾತ್ರಿ 1.30 ರ ಸುಮಾರಿಗೆ ಬೈಕ್ನಲ್ಲಿ ಬಂದಿರುವ ದುಷ್ಕರ್ಮಿ, ಚಾಕುವಿನಿಂದ ಇಬ್ಬರಿಗೂ ಇರಿದು ಕೊಲೆ ಮಾಡಿದ್ದಾನೆ. ಆನಂತರ ಮನೆಯಲ್ಲಿದ್ದ ಲ್ಯಾಪ್ಟಾಪ್, ಮೊಬೈಲ್, ಚಿನ್ನಾಭರಣ ಹಾಗೂ ಎಟಿಎಂ ಕಾರ್ಡ್ ಗಳನ್ನು ಕೊಂಡಿಯ್ದಿದ್ದಾನೆ. ಗುರುವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕಮಲಪಂತ್, ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೇಲ್ನೋಟಕ್ಕೆ ಚಿನ್ನಾಭರಣ ಮತ್ತು ಹಣಕ್ಕಾಗಿ ಕೊಲೆ ಮಾಡಿರುವ ಸಾಧ್ಯತೆಯಿದೆ. ಆದರೆ, ಸುಮಾರು ಮನೆಗಳಿರುವ ಈ ಜಾಗದಲ್ಲಿ ದೇವಬ್ರತಾ ಕುಟುಂಬ ವಾಸವಿದ್ದ ಮನೆಯನ್ನೇ ಯಾಕೆ ಟಾರ್ಗೆಟ್ ಮಾಡಿದರು ? ಏನಾದರೂ ವಿವಾದ ಹಿನ್ನೆಲೆಯಲ್ಲಿ ಒರಿಸ್ಸಾದಿಂದ ಬೆಂಗಳೂರಿಗೆ ಬಂದಿದ್ದರೇ ? ಹಳೆಯ ವೈಷಮ್ಯ, ಇತರೆ ಕೌಟುಂಬಿಕ ವಿಚಾರದಲ್ಲಿ ಈ ಕೊಲೆ ನಡೆದಿರಬಹುದೇ ಎಂಬ ಸಾಧ್ಯತೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Recommended Video
ಚಿನ್ನಾಭರಣಕ್ಕೆ ನಡೆದ ಕೊಲೆ ಎಂದು ಬಿಂಬಿಸಲು ಕಳ್ಳತನ ಮಾಡಿರುವ ಸಾಧ್ಯತೆಯಿದೆ. ಘಟನಾ ಸ್ಥಳ ಆಧರಿಸಿ ಆರೋಪಿಯ ಜಾಡು ಹಿಡಿಯಲು ಸಿಸಿಟಿವಿ ದೃಶ್ಯಗಳನ್ನು ಸಹ ಪೊಲೀಸರು ಸಂಗ್ರಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸಹ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications