ಪೋಲಿಯೋ ವಿರುದ್ಧದ ನಮ್ಮ ಸಮರ ಅತ್ಯಂತ ಯಶಸ್ವಿ: ಸಿಎಂ ಬೊಮ್ಮಾಯಿ
ಬೆಂಗಳೂರು, ಫೆಬ್ರವರಿ 27: "ದೇಶದಲ್ಲಿ ಟಿಬಿ, ಕಾಲಾರಾ, ಮಲೇರಿಯಾ ಹಾಗೂ ಪ್ಲೇಗ್ ರೋಗಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ಅವುಗಳ ಮೇಲೆ ಸಂಪೂರ್ಣ ಹಿಡಿತಸಾಡಿಸಿದ್ದೇವೆ. ಅದೇ ರೀತಿ ಪೋಲಿಯೋ ವಿರುದ್ಧದ ನಮ್ಮ ಸಮರ ಅತ್ಯಂತ ಯಶಸ್ವಿಯಾಗಿದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪೋಲಿಯೋ ಮುಕ್ತ ರಾಷ್ಟ್ರವಾದರೂ ಪ್ರತಿ ವರ್ಷ ಮೂರು ದಿನ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಲಸಿಕಾ ಕಾರ್ಯಕ್ರಮ ಬಹಳ ಮುಖ್ಯ.25 ವರ್ಷಗಳ ಹಿಂದೆ ಪೋಲಿಯೋ ದುಷ್ಪರಿಣಾಮಗಳನ್ನು ನಾವು ಕಣ್ಣಾರೆ ಕಂಡಿದ್ದೇವೆ," ಎಂದು ಹೇಳಿದರು.
"ಅಂಗವಿಲಕತೆಗೆ ಮುಖ್ಯ ಕಾರಣ ಹಾಗೂ ದೊಡ್ಡ ಪ್ರಮಾಣದ ಜೀವ ಹಾನಿಗೆ ಪೋಲಿಯೋ ಕಾರಣವಾಗಿತ್ತು. ಮಕ್ಕಳಿಗೆ ಬರುವ ಈ ಕಾಯಿಲೆ ದೇಹವನ್ನು ನಿಷ್ಕ್ರಿಯ ಮಾಡಿ ಕ್ಷೋಭೆಯನ್ನುಂಟು ಮಾಡಿತ್ತು. ಆ ಸಂದರ್ಭದಲ್ಲಿ ಕೋವಿಡ್ ಗೆ ನಡೆದ ಹೋರಾಟದಂತೆಯೇ ಹೋರಾಟ ನಡೆದು ಓರಲ್ ಲಸಿಕೆ ಬಂದ ನಂತರ ನಿಯಂತ್ರಣಕ್ಕೆ ತರಲಾಯಿತು. ಪ್ರಗತಿ ಪರ ರಾಷ್ಟ್ರಗಳ ನಡುವೆ ಭಾರತದಲ್ಲಿ ತಳಮಟ್ಟದಿಂದ ಆಗುವ ಅಭಿಯಾನದ ಅನುಷ್ಠಾನ ಬೇರೆ ದೇಶಗಳಲ್ಲಿ ಕಾಣುವುದಿಲ್ಲ. ಬಡತನ, ಅಪೌಷ್ಟಿಕತೆ ಇರುವಲ್ಲಿ ಈ ರೀತಿಯ ರೋಗಗಳಿಗೆ ಹೆಚ್ವಿನ ಅವಕಾಶವಿರುವುದರಿಂದ ಜನರು ಕೂಡ ಜಾಗೃತರಾಗಿದ್ದಾರೆ," ಎಂದರು.

"ಪ್ರಧಾನಮಂತ್ರಿಗಳು ಸಹ ಇಂದು ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಅವರ ಚಿಂತನೆಗಳು ವೈಜ್ಞಾನಿಕ ವಾಗಿವೆ. ಸ್ವಚ್ಛ ಭಾರತ ಯೋಜನೆಯಿಂದ ಹಲವಾರು ರೋಗರುಜಿನಗಳು ದೂರವಿಡಬಹುದು. ಯೋಗವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವುದು ಒಂದೆಡೆಯಾದರೆ, ಪ್ರತಿಯೊಬ್ಬ ವ್ಯಕ್ತಿಯ ಸ್ವಾಸ್ಥ್ಯ ವನ್ನು ಉತ್ತಮವಾಗಿಡಲು ಯೋಗ ಸಹಕಾರಿ," ಎಂದು ಕೂಡಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಲ್ಲೇಖಿಸಿದರು.
ಲಸಿಕೆ ಮೂಲಕ ಕೋವಿಡ್ ನಿಯಂತ್ರಣ
"ಕೋವಿಡ್ ನಿಯಂತ್ರಿಸಲು ಸಹ ಪ್ರಧಾನಿಗಳು ಲಸಿಕಾ ಅಭಿಯಾನಕ್ಕೆ ಅತಿ ಹೆಚ್ಚು ಮಹತ್ವವನ್ನು ನೀಡಿ ಅಭಿಯಾನವನ್ನು ಪ್ರಾರಂಭಿಸಿದರು. ಮೊದಲ ಹಾಗೂ ಎರಡನೇ ಅಳೆಯನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಯಿತು. ಭಾರತದಲ್ಲಿಯೇ ಲಸಿಕೆ ತಯಾರಿಸಿ, ವಿದೇಶಗಳಿಗೂ ರಫ್ತು ಮಾಡಲಾಗಿದೆ. ಇದರ ಶ್ರೇಯಸ್ಸು ಲಸಿಕೆ ತಯಾರಿಸಿದ ವಿಜ್ಞಾನಿಗಳಿಗೆ ಹಾಗೂ ದೇಶದ 130 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ," ಎಂದು ಶ್ಲಾಘಿಸಿದರು.
"ಪಂಚಮಸಾಲಿ ಮಠದ ಜಗದ್ಗುರು ಶ್ರೀ ವಚನಾನಂದಸ್ವಾಮಿಗಳು ಯೋಗದಲ್ಲಿ ದೊಡ್ದ ಸಾಧನೆ ಮಾಡಿದ್ದಾರೆ. ಜನರಿಗೆ ಯೋಗವನ್ನು ಕಲಿಸುತ್ತಾ ಶ್ವಾಸ ಗುರು ಎಂಬ ಬಿರಿದು ಸಹ ಪಡೆದ್ದಿದ್ದಾರೆ. ಆರೋಗ್ಯ ಬಹಳ ಮುಖ್ಯ. ಕರ್ನಾಟಕ ರಾಜ್ಯ ಆರೋಗ್ಯಕ್ಕೆ ಅತಿ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ. ಇದು ಮುಂದುವರೆಯಲಿದೆ," ಎಂದರು. ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮಿಗಳು ಮೊದಲಾದವರು ಉಪಸ್ಥಿತರಿದ್ದರು. (ಒನ್ಇಂಡಿಯಾ ಸುದ್ದಿ)
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications