ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಮ್ಮದು ಪಕ್ಷಾಂತರವಲ್ಲ ರಾಜಕೀಯ ಧೃವೀಕರಣ: ಎಚ್‌ ವಿಶ್ವನಾಥ್

|
Google Oneindia Kannada News

ಬೆಂಗಳೂರು, ನವೆಂಬರ್ 14: ಯಡಿಯೂರಪ್ಪ ಅವರ ಹೆಗಲಿಗೆ ಹೆಗಲು ಕೊಟ್ಟು ದುಡಿಯಲು ನಾವು 17 ಮಂದಿ ಬಿಜೆಪಿಗೆ ಬಂದಿದ್ದೇವೆ ಎಂದು ಎಚ್‌.ವಿಶ್ವನಾಥ್ ಹೇಳಿದ್ದಾರೆ.

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಬಳಿಕ ಮಾತನಾಡಿರುವ ಅವರು ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರೂ ಸಹ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ.

ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷ ಸೇರದ ಎಂಟಿಬಿ ಯಡಿಯೂರಪ್ಪ ಸಮ್ಮುಖದಲ್ಲಿ ಪಕ್ಷ ಸೇರದ ಎಂಟಿಬಿ

ಇಂದು ಪಕ್ಷಗಳು ವಿಫಲವಾಗಿವೆ. ಪಕ್ಷ ರಾಜಕಾರಣ ವಿಫಲವಾಗಿದೆ.ಹಾಗಾಗಿ ಧೃವೀಕರಣ ಆಗಬೇಕೆಂದು ನಾವು ರಾಜೀನಾಮೆ ಕೊಡಬೇಕಾಯ್ತು.

Ours Is Not Defection But Political Polarization

ನಮ್ಮನ್ನು ರಾಜ್ಯ ರಾಜಕಾರಣದಿಂದ ಹೊರಗಿಡಬೇಕೆಂದು ಹುನ್ನಾರ ಮಾಡಲಾಯ್ತು.ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಮೂಲಕ ಚುನಾವಣಾ ರಾಜಕಾರಣದಿಂದಲೂ ನಮ್ಮನ್ನು ದೂರವಿಡುವ ಪ್ರಯತ್ನ ಮಾಡಲಾಯ್ತು.ಆದರೆ ನಿನ್ನೆ ಸುಪ್ರಿಂ ಕೋರ್ಟ್ ಆ ಹುನ್ನಾರವನ್ನು ವಿಫಲಗೊಳಿಸಿದೆ.

ನಾವು ಯಾರು ಕೂಡ ಅಧಿಕಾರಕ್ಕಾಗಿ ಅಧಿಕಾರ ತ್ಯಾಗ ಮಾಡಿದವರಲ್ಲ. ಕರ್ನಾಟಕದಲ್ಲಿದ್ದ ರಾಕ್ಷಸ ರಾಜಕಾರಣವನ್ನು ಕಡೆಗಾಣಿಸಲು ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಯ್ತು.ಇದು ಪಕ್ಷಾಂತರವಲ್ಲ‌.ಇದು ರಾಜಕೀಯ ಧೃವೀಕರಣ ಎಂದು ಹೇಳಿದರು.

ರಮೇಶ್ ಜಾರಕಿಹೋಳಿ, ವಿಶ್ವನಾಥ್, ಸೀಮಂತ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಬಿ ಸಿ ಪಾಟೀಲ್ , ಶಿವರಾಂ ಹೆಬ್ಬಾರ್, ಆನಂದ್ ಸಿಂಗ್, ಡಾ.ಸುಧಾಕರ್, ಬೈರತಿ ಬಸವರಾಜ್, ಎಸ್ ಟಿ ಸೋಮಶೇಕರ್, ಮುನಿರತ್ನ, ಗೋಪಾಲಯ್ಯ, ನಾರಾಯಣಗೌಡ, ಆರ್ . ಶಂಕರ್ ಸೇರ್ಪಡೆ.

English summary
We are the 17 MLAs come to BJP to Support Chief Minister Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X