ಗುತ್ತಿಗೆ ಪೌರ ಕಾರ್ಮಿಕರ ವೇತನ ನೇರವಾಗಿ ಬ್ಯಾಂಕ್ ಖಾತೆಗೆ!
ಬೆಂಗಳೂರು, ಡಿಸೆಂಬರ್ 29 : ಬಿಬಿಎಂಪಿ ಗುತ್ತಿಗೆ ಪೌರ ಕಾರ್ಮಿಕರ ವೇತನವು ಜನವರಿ 1 ರಿಂದ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲು ಬಿಬಿಎಂಪಿ ಆದೇಶ ಹೊರಡಿಸಿದೆ.
ಪೌರ ಕಾರ್ಮಿಕರಿಗೆ ಕನಿಷ್ಠ ವೇತನ ವನ್ನು ಜನವರಿಯಿಂದ ಆಯಾ ತಿಂಗಳ 7 ರ ಒಳಗೆ ಬ್ಯಾಂಕ್ ಮೂಲಕ ಪಾವತಿಸಬೇಕು. ಅದರ ಜತೆಗೆ ಶೂಗಳು, ಕೈಗವಸು, ಎರಡು ಜತೆ ಸಮವಸ್ತ್ರ, ನೀರು ಹಾಗೂ ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಬೇಕು. ಭವಿಷ್ಯ ನಿಧಿ, ಇಎಸ್ ಐ ಸೌಲಭ್ಯ ಕಲ್ಪಿಸಬೇಕು.

ಪೌರಕಾರ್ಮಿಕರಿಗೆ ಸಂಬಂಧಿಸಿದ ಆಧಾರ್ ಸಂಖ್ಯೆ, ಸೇವೆ ವಿವರಗಳ ನಿಖರ ಮಾಹಿತಿಯನ್ನು ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತ ಎಸ್. ಮಂಜುನಾಥ್ ಪ್ರಸಾದ್, ಮುಖ್ಯ ಎಂಜಿನಿಯರ್, ವಲಯಗಳ ಜಂಟಿ ಆಯುಕ್ತರು, ಸಹಾಯಕ ಕಾರ್ಯಪಾಲಕರ ಎಂಜಿನಿಯರ್ ಗಳಿಗೆ ಸೂಚಿಸಿದ್ದಾರೆ.
ಪ್ರಸ್ತುತ 700 ಜನರಿಗೆ ಒಬ್ಬರು ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಹೆಚ್ಚಿನ ಕಾರ್ಮಿಕರ ಅಗತ್ಯವಿದ್ದರೆ ವಲಯ ಆಯುಕ್ತರ ಮೂಲಕ ಪಾಲಿಕೆಯ ಗಮನಕ್ಕೆ ತರಬಹುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈಗಿರುವ ಪೌರಕಾರ್ಮಿಕರ ಬದಲಿಗೆ ಬೇರೆ ವ್ಯಕ್ತಿಗಳ ಕೆಲಸಕ್ಕೆ ತೆಗೆದುಕೊಳ್ಳುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಬೇನಾಮಿ ಪೌರ ಕಾರ್ಮಿಕರ ವಿರುದ್ಧ ಏಪ್ ಐ ಆರ್ ದಾಖಲಿಸಲಾಗುತ್ತದೆ. ಗೈರು ಹಾಜರಾಗುವ ಕೆಲಸ ಮಾಡದಿರುವ ಪೌರಕಾರ್ಮಿಕರಿಗೆ ವೇತನ ರಹಿತ ರಜೆ, ಕೆಲಸದಿಂದ ವಜಾಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market












Click it and Unblock the Notifications