80ಕ್ಕೂ ಹೆಚ್ಚು ನಮ್ಮ ಮೆಟ್ರೊ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್
ಬೆಂಗಳೂರು, ಜುಲೈ 14: ಕೊರೊನಾ ವೈರಸ್ ಭೀತಿಯ ನಡುವೆಯೂ ನಮ್ಮ ಮೆಟ್ರೊ ಕಾಮಗಾರಿ ನಿಲ್ಲದೆ ನಡೆಯುತ್ತಲೇ ಇತ್ತು. ಇದೀಗ, ಮೆಟ್ರೊ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ನಾಗವಾರ ಮತ್ತು ಗೊಟ್ಟಿಗೆರೆ ಮಾರ್ಗದಲ್ಲಿ ನಡೆಯುತ್ತಿರುವ 2ನೇ ಹಂತದ ಮೆಟ್ರೊ ಕಾಮಗಾರಿಯಲ್ಲಿ ತೊಡಗಿಕೊಂಡಿರುವ ಸುಮಾರು 80ಕ್ಕೂ ಅಧಿಕ ಕಾರ್ಮಿಕರಿಗೆ ಕೊವಿಡ್ ಸೋಂಕು ದೃಢವಾಗಿದೆ. ಇದು ಮೆಟ್ರೊ ಆಡಳಿತ ಮಂಡಳಿಗೆ ಭಾರಿ ಹಿನ್ನಡೆ ತಂದಿದೆ.
Bengaluru: Over 80 labourers working on the Nagavara - Gottigere lane of Namma Metro phase two, have tested positive for #COVID19. #Karnataka
— ANI (@ANI) July 14, 2020
ಸುಮಾರು 200ಕ್ಕೂ ಹೆಚ್ಚು ಕಾರ್ಮಿಕರನ್ನು ಪರೀಕ್ಷೆಗೆ ಒಳಪಡಿಸಿದ ವೇಳೆ 80 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (ಬಿಎಂಆರ್ಸಿಎಲ್) ಗೊಟ್ಟಿಗೆರೆ-ನಾಗವಾರ (ರೀಚ್ 6) ಮಾರ್ಗದ ಪ್ಯಾಕೇಜ್ 2 ಮತ್ತು 3 ನಿರ್ಮಾಣ ಒಪ್ಪಂದವನ್ನು ಎಲ್&ಟಿಗೆ ನೀಡಿದ್ದು, ಸುಮಾರು 2.88 ಕಿ.ಮೀ ದೂರದಲ್ಲಿ ಕೆಲಸ ಮಾಡುವ ಕಾರ್ಮಿಕರ ಶಿಬಿರದಲ್ಲಿ ಸೋಂಕು ಕಾಣಿಸಿಕೊಂಡಿದೆ.

ಈ ಕುರಿತು ಬಿಎಂಆಆರ್ಸಿಎಲ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿಎಲ್ ಸಂತೋಷ್ ಪ್ರತಿಕ್ರಿಯಿಸಿದ್ದು 'ಕರ್ನಾಟಕಕ್ಕೆ ಹೊರರಾಜ್ಯದಿಂದ ಬಂದ ಓರ್ವ ವ್ಯಕ್ತಿಗೆ ಸೋಂಕು ದೃಢವಾದ ನಂತರ ಇಡೀ ತಂಡವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು' ಎಂದು ಮಾಹಿತಿ ನೀಡಿದ್ದಾರೆ.
'ಪಾಸಿಟಿವ್ ಬಂದಿರುವ ಎಲ್ಲರೂ ರೋಗ ಲಕ್ಷಣ ರಹಿತರಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರೆಲ್ಲರನ್ನು ಕೊವಿಡ್ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ' ಎಂದು ತಿಳಿಸಿದ್ದಾರೆ.
ಸೋಂಕಿತ ಕಾರ್ಮಿಕರಿಗೆ ಅವರ ಸಂಬಳದಲ್ಲಿ ಚಿಕಿತ್ಸಾ ವೆಚ್ಚ ಭರಿಸಲಾಗುವುದಾ ಎಂಬ ಪ್ರಶ್ನಗೆ ಉತ್ತರಿಸಿದ ಅವರು "ಸರ್ಕಾರವು ವಿಧಿಸಿರುವ ನಿಯಮಗಳನ್ನು ಅನುಸರಿಸಲಾಗುವುದು" ಎಂದು ಹೇಳಿದ್ದಾರೆ. ಕಾರ್ಮಿಕರಲ್ಲಿ ಸೋಂಕು ವರದಿಯಾದ ಕಾರಣ ಬಹುಶಃ ಒಂದು ತಿಂಗಳ ಕಾಲ ಪ್ಯಾಕೇಜ್ 2 ಮತ್ತು 3 ಮಾರ್ಗದಲ್ಲಿ ಕೆಲಸ ಸ್ಥಗಿತಗೊಳ್ಳಬಹುದು ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications