KIADB: ಅಧಿಸೂಚಿತ ಜಾಗದಲ್ಲಿ ರಾತ್ರೋ ರಾತ್ರಿ ಅಕ್ರಮ ಗಿಡಮರ: ಕೋಟಿಗಟ್ಟಲೇ ಹಣ ಹೊಡೆಯಲು ಅಧಿಕಾರಿಗಳ ಪ್ಲಾನ್?
ಬೆಂಗಳೂರು, ಮೇ 22: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ವ್ಯಾಪ್ತಿಯಲ್ಲಿ ಇತ್ತೀಚೆಗೆ ಅಕ್ರಮಗಳು ಹೆಚ್ಚಾಗಿ ಕಂಡು ಬರುತ್ತಿವೆ. ಇದೀಗ ಕೈಗಾರಿಕೆ ಉದ್ದೇಶಕ್ಕಾಗಿ ರೈತರಿಂದ ಸರ್ಕಾರ ಭೂಮಿ ಖರೀಸುತ್ತದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿದರೂ ಹೆಚ್ಚಿನ ಹಣ ಹೊಡೆಯಲು ಆ ಜಾಗದಲ್ಲಿ ರಾತ್ರೋ ರಾತ್ರಿ ಲಕ್ಷಾಂತರ ಸಸಿ ನೆಡಲಾಗಿದೆ.
ಈ ಮೂಲಕ ಸರ್ಕಾರ ಗುರುತಿಸಿ, ಅಧಿಸೂಚನೆ ಹೊರಡಿಸಿರುವ ಜಾಗದಿಂದ ಹೆಚ್ಚಿನ ಹಣ ಲಪಟಾಯಿಸಲು ಮಂಡಳಿ ಅಧಿಕಾರಿಗಳು ಬ್ರೋಕರ್ ಗಳ ಜತೆ ಪ್ಲಾನ್ ಮಾಡಿರುವುದು ಬಹಿರಂಗವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ KIADB ಸಿಇಓ ಅವರು ಇಂತಹ ಪ್ರಕರಣಗಳಿಗೆ ವಿಶೇಷ ಭೂಸ್ವಾಧೀನಾಧಿಕಾರಿಯೇ ಹೊಣೆ ಎಂದು ಹೇಳಿದ್ದಾರೆ.

ಹೆಚ್ಚಿನ ಹಣಕ್ಕಾಗಿ ಸಸಿ ನೆಟ್ಟ ಆರೋಪ
ನೆಲಮಂಗಲ ತಾಲ್ಲೂಕಿನ ಹನುಮಂತಪುರ, ಬಿದ್ಲೂರು, ಕೋಡಿಪಾಳ್ಯ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯು (ಕೆಐಎಡಿಬಿ) ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವ ಜಮೀನಿನಲ್ಲಿ ಕೆಲವರು ಹೆಚ್ಚಿನ ಪರಿಹಾರ ಪಡೆಯಲೆಂದೇ ಗಿಡಮರಗಳನ್ನು ನೆಟ್ಟಿರುವ ಆರೋಪ ಕೇಳಿ ಬಂದಿದೆ.
ಈ ಪ್ರಕರಣ ಸಂಬಂಧಿಸಿದಂತೆ ತನಿಖೆ ನಡೆಸಿ ಮೂರು ದಿನಗಳಲ್ಲಿ ವರದಿ ನೀಡುವಂತೆ ಸಂಸ್ಥೆಯ ಸಿಇಒ ಡಾ.ಎಂ.ಮಹೇಶ ಅವರು ವಿಶೇಷ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಪ್ರಾಥಮಿಕ ಅಧಿಸೂಚನೆ ಹೊರಡಿಸಿದಾಗ ಜಮೀನುಗಳಲ್ಲಿ ಇರುವ ಗಿಡಮರಗಳು ಮತ್ತು ಕಟ್ಟಡಗಳಿಗೆ ಮಾತ್ರ ಪರಿಹಾರ ಕೊಡುವ ನಿಯಮ ಇದೆ.
ಪ್ರಕರಣದ ತನಿಖಾ ತಂಡದಲ್ಲಿ ಮುಖ್ಯ ಎಂಜಿನಿಯರ್
ಆದರೆ ಅಧಿಸೂಚನೆ ಹೊರಡಿಸಿರುವ ಖಾಲಿ ಜಮೀನುಗಳಿಂದ ವಿಪರೀತ ಪರಿಹಾರ ದಕ್ಕಿಸಿಕೊಳ್ಳಲೆಂದೇ ಕೆಲವರು ಬೇರೆಡೆ ಬೆಳೆದು ನಿಂತಿರುವ ಬಲಿತ ಗಿಡಮರಗಳನ್ನು ತಂದು ನೆಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಲಕ್ಷಾಂತರ ಸಸಿಗಳನ್ನು, ಅವು ಹಣ್ಣಿನ ಸಸಿಗಳನ್ನು ತಂದು ನೆಡಲಾಗಿದೆ.
ಈ ಸಂಬಂಧ ತನಿಖೆಗೆ ಆದೇಶ ಮಾಡಿದ್ದು, ತನಿಖಾ ತಂಡದಲ್ಲಿ ಕೆಐಎಡಿಬಿ ಮುಖ್ಯ ಎಂಜಿನಿಯರ್ ಕೂಡ ಇರಲಿದ್ದಾರೆ ಎಂದು KIADB ಸಿಇಒ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಅಥವಾ ಇಸ್ರೋದ ಸ್ಯಾಟಲೈಟ್ ಮ್ಯಾಪಿಂಗ್ ಆಧರಿಸಿಯೇ ಅಧಿಸೂಚಿತ ಜಮೀನುಗಳಿಗೆ ಪರಿಹಾರ ವಿತರಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಅದಿಸೂಚನೆ ಹೊರಡಿಸಿದ ನಂತರ ಹೆಚ್ವಿನ ಪರಿಹಾರಕ್ಕಾಗಿ ಗಿಡ/ಮರ ತಂದು ನೆಡುವುದರ ಮೂಲಕ ಸಂಸ್ಥೆಗೆ ನಷ್ಟ ಉಂಟು ಮಾಡಿದರೆ ಅದಕ್ಕೆ ಸಂಬಂಧಪಟ್ಟ ವಿಶೇಷ ಭೂಸ್ವಾಧೀನಾಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ.
ಅಧಿಕಾರಿಗಳನ್ನು ಹೊಣೆ ಮಾಡುವುದರ ಜೊತೆಗೆ ಹಾಗೆಯೇ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮಹೇಶ ಎಚ್ಚರಿಕೆ ನೀಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications