ನೋಬಾಲ್ಗೆ ರನ್ ಔಟ್ ಆಗಿದ್ದೇನೆ: ಬಿಜೆಪಿ ಶಾಸಕ ರಾಜುಗೌಡ
ಬೆಂಗಳೂರು, ಆಗಸ್ಟ್ 21: ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದೆ. ನನಗೆ ಮಂತ್ರಿ ಸ್ಥಾನ ಕೊಡಿಸಲು ಯಡಿಯೂರಪ್ಪ ಪ್ರಯತ್ನಿಸಿದರು. ಆದರೆ ಸ್ವಪಕ್ಷದವರೇ ನನಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ಬಿಜೆಪಿ ಶಾಸಕ ರಾಜುಗೌಡ ಹೇಳಿದರು.
ಯಾದಗಿರಿ ಜಿಲ್ಲೆ ಶೊರಾಪುರ ಕ್ಷೇತ್ರದ ಶಾಸಕರಾಗಿರುವ ರಾಜುಗೌಡ ಅವರಿಗೆ ಹೈದರಾಬಾದ್ ಕರ್ನಾಟಕ ಮತ್ತು ದಲಿತ ಕೋಟಾದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು ಆದರೆ ಅವರಿಗೆ ಕೊನೆಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದೆ.
ನನಗೆ ಈ ಮುಂಚೆಯೇ ಸಚಿವನಾಗಿ ಕೆಲಸ ಮಾಡಿದ ಅನುಭವ ಇದೆ. ಈ ಬಾರಿಯೂ ಮಂತ್ರಿ ಸ್ಥಾನ ಸಿಗುವ ನಿರೀಕ್ಷೆ ಇತ್ತು, ಆದರೆ ನಮ್ಮ ಪಕ್ಷದವರೇ ನನಗೆ ಸಚಿವ ಸ್ಥಾನ ತಪ್ಪಿಸಲು ಗೇಮ್ ಆಡಿದರು. ಯಡಿಯೂರಪ್ಪ ಅವರು ನನಗೆ ಮಂತ್ರಿ ಸ್ಥಾನ ಕೊಡಿಸಲು ಯತ್ನ ಮಾಡಿದರು ಎಂದು ಸ್ವಪಕ್ಷದವರ ವಿರುದ್ಧವೇ ಅಸಮಾಧಾನ ಹೊರಹಾಕಿದರು.

ಹೈದರಾಬಾದ್ ಕರ್ನಾಟಕದಿಂದ 16 ಬಿಜೆಪಿ ಶಾಸಕರು ಆಯ್ಕೆ ಆಗಿದ್ದರು. ಕನಿಷ್ಟ ಮೂರು ಶಾಸಕರಿಗಾದರು ಸಚಿವ ಸ್ಥಾನ ಕೊಡಬೇಕಾಗಿತ್ತು, ಆದರೆ ಒಬ್ಬರಿಗೆ ಮಾತ್ರವೇ ನೀಡಲಾಗಿದೆ. ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಒಂದು ಸಚಿವ ಸ್ಥಾನವನ್ನೂ ಕೊಟ್ಟಿಲ್ಲ ಎಂದು ಅವರು ಹೇಳಿದರು.
ನನಗೆ ಸಚಿವ ಸ್ಥಾನ ಕೊಡಿಸಬೇಕು ಎಂಬ ಆಸೆ ಯಡಿಯೂರಪ್ಪ ಅವರಿಗೆ ಇತ್ತು ಆದರೆ ನಮ್ಮ ಪಕ್ಷದವರೇ ನನಗೆ ಸಚಿವ ಸ್ಥಾನ ಸಿಗದಂತೆ ಮಾಡಿದ್ದಾರೆ. ನಾನು ನೋಬಾಲ್ ಗೆ ರನ್ಔಟ್ ಆಗಿದ್ದೇನೆ. ನಾನೊಬ್ಬ ಕ್ರೀಡಾಪಟು, ಸೋಲು-ಗೆಲುವು ಹೊಸದಲ್ಲ ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇನೆ ಎಂದು ಅವರು ಹೇಳಿದರು.
ಏನೇ ಆಗಲಿ ಹೈದರಾಬಾದ್ ಕರ್ನಾಟಕಕ್ಕೆ ಕನಿಷ್ಟ 3-4 ಸಚಿವ ಸ್ಥಾನ ಕೊಡಲೇ ಬೇಕು. ಈ ಭಾಗದ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು ಎಂದು ರಾಜುಗೌಡ ಒತ್ತಾಯಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications