ಕೋವಿಡ್ ಹಗರಣ: 'ಪಿಎಸಿ ತನಿಖೆಗೆ ಸ್ಪಂದಿಸದ ಸ್ಪೀಕರ್ ವಿರುದ್ಧ ಹಕ್ಕು ಚ್ಯುತಿ'
ಬೆಂಗಳೂರು, ಮೇ 31: ಕೋವಿಡ್19 ಚಿಕಿತ್ಸೆಗಾಗಿ ಸರ್ಕಾರದ ವತಿಯಿಂದ ಖರೀದಿಸಲಾದ ವೈದ್ಯಕೀಯ ಉಪಕರಣ, ಔಷಧಿ, ಪಿಪಿಇ ಕಿಟ್ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಮುಂದಾಗಿದೆ.
ಆದರೆ, ಸಮಿತಿಯ ತನಿಖೆಗೆ ಸ್ವತಃ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿದ್ದವು. ಈ ಬಗ್ಗೆ ಎಚ್ ಕೆ ಪಾಟೀಲ್ ಅವರು ಗರಂ ಆಗಿದ್ದು, ಸ್ಪೀಕರ್ ವಿರುದ್ಧ ಹಕ್ಕು ಚ್ಯುತಿ ದೂರನ್ನು ಸಲ್ಲಿಸಲು ಮುಂದಾಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಮಿತಿ ತನಿಖೆಗೆ ಸಹಕರಿಸದಿರುವ ಸ್ಪೀಕರ್ ಕಾಗೇರಿ ಅವರ ವಿರುದ್ಧ ಮಂಗಳವಾರ ಹಕ್ಕು ಚ್ಯುತಿ ದೂರನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಕೋವಿಡ್19 ಚಿಕಿತ್ಸೆಗಾಗಿ ಸರ್ಕಾರದ ವತಿಯಿಂದ ಖರೀದಿಸಲಾದ ವೈದ್ಯಕೀಯ ಉಪಕರಣ, ಔಷಧಿ, ಪಿಪಿಇ ಕಿಟ್ನಲ್ಲಿನಲ್ಲಿ ಅವ್ಯವಹಾರ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆರೋಪಿಸಿದ್ದಾರೆ.

ತನಿಖೆ ನಡೆಸುವುದು ನನ್ನ ಜವಾಬ್ದಾರಿ
ಪಿಎಸಿ ಸಮಿತಿಯಲ್ಲಿ ಎಲ್ಲ ಪಕ್ಷದವರು ಇದ್ದಾರೆ. ಸಮಿತಿಯ ಅಧ್ಯಕ್ಷನಾಗಿ ತನಿಖೆ ನಡೆಸುವುದು ನನ್ನ ಜವಾಬ್ದಾರಿ. ಆದರೆ ಸ್ಪೀಕರ್ ಅವರು ಅಡ್ಡಿಪಡಿಸುವುದು ಸರಿ ಅಲ್ಲ. ಇದು ನಮ್ಮ ಹಕ್ಕುಚ್ಯುತಿ ಆಗುತ್ತದೆ ಎಂದು ಎಚ್ ಕೆ ಪಾಟೀಲ್ ಹೇಳಿದ್ದಾರೆ.

ಭೇಟಿಯನ್ನು ತಡೆದಿದ್ದಾರೆ
ತನಿಖೆಯ ಭಾಗವಾಗಿ ಬುಧವಾರ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಎಚ್ ಕೆ ಪಾಟೀಲ್ ಹಾಗೂ ಇತರೆ ಸದಸ್ಯರು ವಿವಿಧ ಆಸ್ಪತ್ರೆಗಳಿಗೆ, ಸ್ಥಳಗಳಿಗೆ ಭೇಟಿ ನೀಡಬೇಕಿತ್ತು. ಆದರೆ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಭೇಟಿಯನ್ನು ತಡೆದಿದ್ದಾರೆ ಎಂದು ಎಚ್ ಕೆ ಪಾಟೀಲ್ ಆರೋಪಿಸಿದ್ದರು.

ಕೊರೊನಾವೈರಸ್ ಕಾರಣದಿಂದ ತಡೆಯಲಾಗಿದೆ
ಆದರೆ, ಈ ಬಗ್ಗೆ ಇಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕೊರೊನಾವೈರಸ್ ಹರಡುವುದನ್ನು ತಡೆಯಲು ಎಲ್ಲೆಡೆ ಲಾಕ್ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಮಿತಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಮೊದಲು ಸಭೆ ಸೇರದಂತೆ ಸೂಚಿಸಲಾಗಿತ್ತು. ನಂತರ ಸಮಿತಿ ಈ ಹಂತದಲ್ಲಿ ಸಾರ್ವಜನಿಕರನ್ನು ಭೇಟಿಯಾಗುವುದು ಸರಿ ಅಲ್ಲ ಎಂಬ ಉದ್ದೇಶದಿಂದ ಸಮಿತಿಯ ಭೇಟಿ ಕಾರ್ಯಕ್ರಮವನ್ನು ತಡೆಯಲಾಗಿತ್ತು ಎಂದು ಹೇಳಿದ್ದಾರೆ.

ಸಮಿತಿ ಅಧ್ಯಕ್ಷರು ತನಿಖೆ ನಡೆಸಲು ಸ್ವತಂತ್ರರು
ಅದನ್ನು ಹೊರತುಪಡಿಸಿ ಸಮಿತಿಯ ಸಾರ್ವಜನಿಕ ಭೇಟಿ ಕಾರ್ಯಕ್ರಮಕ್ಕೆ ತಡೆ ನೀಡುವುದರ ಹಿಂದೆ ಯಾವುದೇ ಉದ್ದೇಶವಿಲ್ಲ. ಕೆಲ ಮಾಧ್ಯಮಗಳು ಸ್ಪೀಕರ್ ಮೇಲೆ ಅನುಮಾನ ವ್ಯಕ್ತಪಡಿಸಿ ವರದಿ ಮಾಡಿವೆ. ಸ್ಪೀಕರ್, ಸಮಿತಿ ಅಧ್ಯಕ್ಷರು ತನಿಖೆ ನಡೆಸಲು ಸ್ವತಂತ್ರರು ಎಂದು ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ವಿಶಾಲಾಕ್ಷಿ ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications